ಮಳೆ ಅನಾಹುತ ಎದುರಿಸಲು ಸಿದ್ಧರಾಗಿ


Team Udayavani, Jun 2, 2018, 12:06 PM IST

male-anahuta.jpg

ಬೆಂಗಳೂರು: ಮುಂಗಾರು ಪ್ರವೇಶಿಸಿದೆ. ಮಳೆಗಾಲವೂ ಆರಂಭವಾಗಿದೆ. ಮುಂಗಾರಿಗೂ ಮೊದಲೇ ಆರ್ಭಟಿಸಿರುವ ವರುಣ, ಸಮೃದ್ಧ ಮಳೆಗಾಲದ ಮುನ್ಸೂಚನೆ ನೀಡಿದ್ದಾನೆ. ಮಳೆಯೇನೋ ಎಲ್ಲ ಸಿದ್ಧತೆ ಮಾಡಿಕೊಂಡೇ ಸುರಿಯಲು ತಯಾರಾಗಿದೆ. ಆದರೆ ಮಳೆಯಿಂದಾಗಬಹುದಾದ ಅನಾಹುತಗಳನ್ನು ತಡೆಯಲು ಪಾಲಿಕೆ ಅಧಿಕಾರಿಗಳು ಮಾತ್ರ ಸಿದ್ಧವಾಗಿಲ್ಲ.

ಇದೇನು ಹೊಸ ವಿಯವಲ್ಲ. ಪ್ರತಿ ವರ್ಷ ಮಳೆಗಾಲದಲ್ಲೂ ನಗರದ ನೂರಾರು ಜನವಸತಿ ಪ್ರದೇಶಗಳಿಗೆ, ಮನೆಗಳಿಗೆ ಮಳೆ ನೀರು ನುಗ್ಗುವುದು, ವಾರಗಟ್ಟಲೆ ಜನ ಪರದಾಡುವುದು ಮಾಮೂಲಿ. ಮಳೆ ನಿಂತ ನಂತರ ನೆಪಮಾತ್ರಕ್ಕೆ ಕಾಮಗಾರಿ ಆರಂಭಿಸುವ ಪಾಲಿಕೆ ಅಧಿಕಾರಿಗಳು, ಆ ಕಾಮಗಾರಿ ಮುಗಿಸುವ ಗೊಡವೆಗೇ ಹೋಗುವುದಿಲ್ಲ.

ಅಧಿಕಾರಿಗಳ ಈ ಬೇಜವಾಬ್ದಾರಿಗೆ ನಿದರ್ಶನವೆಂಬಂತೆ ನಗರದಲ್ಲಿ ಮಳೆ ಅನಾಹುತ ತಡೆಯಲು ಸುಮಾರು 200 ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಆರಂಭಿಸಿದ್ದ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಹೀಗಾಗಿ ಈ ಬಾರಿ ಕೂಡ ಮಳೆಗಾಲದ ಅನಾಹುತ ಎದುರಿಸಲು, ಪರದಾಡಲು ಪ್ರವಾಹಪೀಡಿತ ಪ್ರದೇಶಗಳ ನಿವಾಸಿಗಳು ಸಿದ್ಧರಾಗಬೇಕಿದೆ. 

ನಗರದಲ್ಲಿ ಕಳೆದ ಎರಡು ವರ್ಷಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಸಾವು-ನೋವು ಸಂಭವಿಸಿವೆ. ಅದರ ನಂತರವೂ ಪಾಲಿಕೆಯ ಅಧಿಕಾರಿಗಳು ಅಗತ್ಯ ಪರಿಹಾರ ಕ್ರಮಗಳಿಗೆ ಮುಂದಾಗದ ಪರಿಣಾಮ, ಮಳೆಗಾಲದಲ್ಲಿ ನೂರಾರು ಬಡಾವಣೆಗಳು ಪ್ರವಾಹ ಭೀತಿ ಎದುರಿಸುತ್ತಿದ್ದು, ಪ್ರವಾಹ ಪೀಡಿತ ಬಡಾವಣೆಯ ನಾಗರಿಕರು ಪಾಲಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ನಗರದ 339 ಭಾಗಗಳು ಮಳೆಯಿಂದ ಅನಾಹುತಕ್ಕೆ ಒಳಗಾಗಿ ಜನರು ತೀವ್ರ ತೊಂದರೆ ಅನುಭವಿಸಿದ್ದಾರೆ.

ನಗರದ ಹೊರ ವಲಯಗಳಲ್ಲಿಯೇ ಅತಿಹೆಚ್ಚು ಪ್ರವಾಹದ ಭೀತಿಯಿದ್ದು, ಮಹದೇವಪುರ ವಲಯದ 78 ಬಡಾವಣೆಗಳ ಜನತೆ ಕಳೆದ 3 ವರ್ಷಗಳಿಂದ ಮಳೆ ಅನಾಹುತಗಳ ಸಂಕಷ್ಟ ಎದುರಿಸುತ್ತಿದ್ದಾರೆ. ಇದರೊಂದಿಗೆ ಬೊಮ್ಮನಹಳ್ಳಿ, ಕೋರಮಂಗಲ ಕಣಿವೆ ಭಾಗದ 50ಕ್ಕೂ ಹೆಚ್ಚಿನ ಭಾಗಗಳ ಜನ ಪ್ರವಾಹ ಭೀತಿಯಲ್ಲಿದ್ದಾರೆ ಎಂಬುದು ಪಾಲಿಕೆ ಅಂಕಿ-ಅಂಶಗಳಿಂದ ತಿಳಿದುಬಂದಿದೆ.

ಅಪಾಯದ ಸೂಚನೆ: ಪಾಲಿಕೆಯ ವ್ಯಾಪ್ತಿಯ ಸುಮಾರು 25 ಕೆರೆಗಳಲ್ಲಿ ಹೂಳು ತೆಗೆಯದ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಉಕ್ಕುವ ಆತಂಕ ಸೃಷ್ಟಿಯಾಗಿದೆ. ಮುಂಗಾರು ಪೂರ್ವದಲ್ಲಿ ಕೆರೆಯಲ್ಲಿನ ಹೂಳು ತೆಗೆಯಲು ಅಧಿಕಾರಿಗಳು ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ಜನರು ತೊಂದರೆ ಅನುಭವಿಸುವಂತಾಗಿದೆ. ಜತೆಗೆ ಕೆರೆಯಿಂದ ನೀರು ಹೊರಗೆ ಹೋಗಲು ಹಾಗೂ ಒಳ ಪ್ರವೇಶಿಸಲು ಅಳವಡಿಸಲಾಗಿರುವ ತೂಬುಗಳು ಹಾಳಾಗಿದ್ದು, ಪಾಲಿಕೆಯಿಂದ ತಾತ್ಕಾಲಿಕ ಪರಿಹಾರ ಕ್ರಮಗಳನ್ನು ಕೈಗೊಂಡರೂ, ಸುತ್ತಮುತ್ತಲಿನ ಬಡಾವಣೆಗಳ ಜನರಲ್ಲಿ ಆತಂಕ ಮರೆಯಾಗಿಲ್ಲ. 

ತೆರವಾಗದ ರಾಜಕಾಲುವೆ ಒತ್ತವರಿ: ರಾಜಕಾಲುವೆ ಒತ್ತುವರಿಯು ನಗರದ ನಾನಾ ಬಡಾವಣೆಗಳಲ್ಲಿನ ಪ್ರವಾಹಕ್ಕೆ ಕಾರಣವಾಗಿದೆ. ಆದರೆ, ಪಾಲಿಕೆಯ ಅಧಿಕಾರಿಗಳು ಕಳೆದ ಎರಡು ವರ್ಷಗಳಿಂದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಲಿಲ್ಲ.

ಕಳೆದ ಬಾರಿ ಮಳೆಯಿಂದ ಅನಾಹುತ ಸಂಭವಿಸಿದ ಕಡೆಗಳಲ್ಲಿ ಆದ್ಯತೆ ಮೇರೆಗೆ ಪರಿಹಾರ ಕ್ರಮ ಕೈಗೊಳ್ಳಲಾಗಿದೆ. ಜತೆಗೆ ಪಾಲಿಕೆಯಿಂದ ಗುರುತಿಸಿರುವ ಪ್ರವಾಹ ಪೀಡಿತ ಪ್ರದೇಶಗಳಲ್ಲೂ ಕಾಮಗಾರಿ ನಡೆದಿದೆ. ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.
-ಬೆಟ್ಟೇಗೌಡ, ಬೃಹತ್‌ ಮಳೆನೀರು ಕಾಲುವೆ ವಿಭಾಗದ ಮುಖ್ಯ ಎಂಜಿನಿಯರ್‌ 

ಸಂಭವ್ಯ ಪ್ರವಾಹ ಪೀಡಿತ ಪ್ರದೇಶಗಳು
ವಲಯ    ಪ್ರದೇಶಗಳ ಸಂಖ್ಯೆ

-ಪೂರ್ವ    47
-ದಕ್ಷಿಣ    26
-ಮಹದೇವಪುರ    78
-ಆರ್‌.ಆರ್‌.ನಗರ    32
-ಪಶ್ಚಿಮ    27
-ಬೊಮ್ಮನಹಳ್ಳಿ    55
-ಯಲಹಂಕ    23
-ಕೋರಮಂಗಲ    51
-ಒಟ್ಟು    339

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.