ಈಶ್ವರಮಂಗಲ ಪಶು ಚಿಕಿತ್ಸಾಲಯಕ್ಕೆ ಭಧ್ರತೆಇಲ್ಲ: ಕಟ್ಟಡ,ರಸ್ತೆಗೆಬೇಡಿಕೆ


Team Udayavani, Jun 2, 2018, 12:32 PM IST

2-june-10.jpg

ಈಶ್ವರಮಂಗಲ: ಕೇರಳ – ಕರ್ನಾಟಕದ ಗಡಿಭಾಗದಲ್ಲಿರುವ ಈಶ್ವರಮಂಗಲ ಪಶು ಚಿಕಿತ್ಸಾ ಕೇಂದ್ರ ಅಭದ್ರವಾಗಿದೆ. ಕಟ್ಟಡ ಐವತ್ತು ವರ್ಷಗಳಿಗೂ ಹೆಚ್ಚು ಹಳೆಯದು. ಕಿಟಿಕಿ, ಬಾಗಿಲುಗಳು ಹೆಸರಿಗಷ್ಟೇ ಇವೆ ಹೊರತು ಭದ್ರತೆ ಇಲ್ಲ.

ಈಶ್ವರಮಂಗಲ ಪ್ರಾಥಮಿಕ ಆರೋಗ್ಯ ಕೇಂದ್ರದ ಮೂಲಕವೇ ಪಶು ಚಿಕಿತ್ಸಾಲಯಕ್ಕೆ ತೆರಳಬೇಕು. ಕೇಂದ್ರಕ್ಕೆ ಸರಿಯಾದ ರಸ್ತೆ ಮಾಡಲು ವ್ಯವಸ್ಥೆ ಇದ್ದರೂ ಪಶು ಪಾಲನೆ ಇಲಾಖೆ ಮೌನ ವಹಿಸಿದೆ. ಡಿ ಗ್ರೂಪ್‌ ನೌಕರ ಹುದ್ದೆ ಖಾಲಿ ಇರುವುದರಿಂದ ಸ್ವಚ್ಛತೆಗೂ ಸಮಸ್ಯೆಯಾಗಿದೆ. ಕೇಂದ್ರದ ಸುತ್ತ ಗಿಡ – ಬಳ್ಳಿಗಳು ಬೆಳೆದು ಕಟ್ಟಡವನ್ನು ಆವರಿಸಿವೆ. ಹಿರಿಯ ಪಶು ನಿರೀಕ್ಷಕರು ಪಶುಗಳ ಪರೀಕ್ಷೆಗೆ ಹೊರಗಡೆ ಹೋಗುವ ಸಂದರ್ಭದಲ್ಲಿ ಕೇಂದ್ರವನ್ನು ಬಂದ್‌ ಮಾಡಿಯೇ ತೆರಳಬೇಕಾಗುತ್ತಿದೆ.

ಕೇಂದ್ರದ ವ್ಯಾಪ್ತಿ
ಪಡುವನ್ನೂರು, ಬಡಗನ್ನೂರು ಹಾಗೂ ನೆಟ್ಟಣಿಗೆಮುಟ್ನೂರು ಗ್ರಾಮ ವ್ಯಾಪ್ತಿಯನ್ನು ಈ ಪಶು ಚಿಕಿತ್ಸಾಲಯ ಹೊಂದಿದೆ. ಪಶು ಔಷಧಕ್ಕಾಗಿ ಈ ಪ್ರದೇಶದಿಂದ ಗ್ರಾಮಸ್ಥರು ಹಾಗೂ ಗಡಿಭಾಗವಾಗಿರುವುದರಿಂದ ನೆರೆಯ ರಾಜ್ಯದ ರೈತರೂ ಬರುತ್ತಾರೆ. ಸಮರ್ಪಕ ವ್ಯವಸ್ಥೆಗಳಿಲ್ಲದೆ ಪರದಾಡುತ್ತಿದ್ದಾರೆ.

ಸೌಲಭ್ಯಗಳು
ಪಶುಗಳಿಗೆ ಕೃತಕ ಗರ್ಭಧಾರಣೆ, ಜಂತುನಾಶಕ ಔಷಧಗಳು, ಸಮಯಕ್ಕೆ ಸರಿಯಾಗಿ ಲಸಿಕೆ ಕಾರ್ಯಕ್ರಮ, ಜಾನುವಾರುಗಳಿಗೆ ಬರುವ ಕಾಯಿಲೆಗಳ ಹತೋಟಿ ಇತ್ಯಾದಿ.

ಹುದ್ದೆ ಭರ್ತಿಯಾಗಲಿ
ಕೇಂದ್ರಕ್ಕೆ ಬಂದು 8 ತಿಂಗಳಷ್ಟೇ ಆಗಿವೆ. ದಿನಕ್ಕೆ 5ರಿಂದ 8 ಜನರು ಬರುತ್ತಾರೆ. ಔಷಧಗಳನ್ನು ಕೊಡುತ್ತೇವೆ. ರೈತರ ಮನೆಗಳಿಗೆ ಭೇಟಿ ಸಂದರ್ಭದಲ್ಲಿ ಕೇಂದ್ರವನ್ನು ಮುಚ್ಚಿ ಹೋಗುವ ಸ್ಥಿತಿ ಇದೆ. ಇದರಿಂದ ಉಳಿದ ರೈತರಿಗೆ ತೊಂದರೆಯಾಗುತ್ತಿದೆ. ಹುದ್ದೆಗಳು ಭರ್ತಿಯಾದರೆ ಸಮಸ್ಯೆ ಸರಿಯಾಗುತ್ತೆ.
 – ಬಿ.ಕೆ. ಬಸವರಾಜು,
 ಹಿರಿಯ ಪಶು ವೈದ್ಯಕೀಯ ಪರೀಕ್ಷಕ

ಕಟ್ಟಡಕ್ಕೆ ಮನವಿ 
 ಕಟ್ಟಡಕ್ಕೆ ಮನವಿ ಸಲ್ಲಿಸಲಾಗಿದೆ. ಸದ್ಯದಲ್ಲಿ ಮಂಜೂರು ಆಗುವ ನಿರೀಕ್ಷೆ ಇದೆ. ಡಿ ಗ್ರೂಪ್‌ ನೌಕರರ ಸಮಸ್ಯೆ ಎಲ್ಲ ಕಡೆ ಇದೆ. ಈ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ.
– ಸುರೇಶ್‌ ಭಟ್‌,
ಸಹಾಯಕ ನಿರ್ದೇಶಕರು, ಪಶು ಇಲಾಖೆ, ಪುತ್ತೂರು

ಕೇಂದ್ರಕ್ಕೇನು ಬೇಕು?
. ಮುಖ್ಯ ರಸ್ತೆಯಿಂದ ಪಶು ಚಿಕಿತ್ಸಾಲಯಕ್ಕೆ ಸಮರ್ಪಕ ರಸ್ತೆ ಸೌಲಭ್ಯ.
.ಕೃತಕ ಗರ್ಭಧಾರಣ ಸಾಧನಕ್ಕೆ ಪೈಂಟ್‌ ಹಚ್ಚಬೇಕು ಅಥವಾ ಹೊಸ ಸಾಧನವನ್ನು ಆಳವಡಿಸಬೇಕು.
 .ಕೇಂದ್ರದ ಸುತ್ತ ಬೆಳೆದು ನಿಂತ ಗಿಡಗಂಟಿಗಳನ್ನು ತೆರವುಗೊಳಿಸಬೇಕು. 
. ಎರಡು ಕೋಣೆಗಳಿದ್ದು, ಕಿಟಕಿ-ಬಾಗಿಲು ದುರಸ್ತಿಯಾಗಬೇಕು. 
. ಡಿ ಗ್ರೂಪ್‌ ನೌಕರನನ್ನು ನೇಮಿಸಿ, ಕೇಂದ್ರದ ಸ್ವಚ್ಛತೆ ಕಾಪಾಡಬೇಕು.
. ಲಸಿಕೆ, ಔಷಧ ಶೇಖರಿಸುವ ಪ್ರಿಜ್‌ ದುರಸ್ತಿಗೊಳಿಸಬೇಕು.

‌ಮಾಧವ ನಾಯಕ್‌ ಕೆ. 

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.