ಗುರುವಾಯನಕೆರೆ: ಬೀಳ್ಕೊಡುಗೆ
Team Udayavani, Jun 2, 2018, 12:47 PM IST
ಬೆಳ್ತಂಗಡಿ : ಸುಮಾರು 26 ವರ್ಷಗಳ ಕಾಲ ಅಗ್ನಿಶಾಮಕ ದಳದಲ್ಲಿ, ಬೆಳ್ತಂಗಡಿ ಅಗ್ನಿ ಶಾಮಕ ಠಾಣೆ ಆರಂಭವಾದಾಗಿನಿಂದ ಸುಮಾರು 20 ವರ್ಷಗಳ ಕಾಲ ತಾಲೂಕಿನಲ್ಲಿ ಶ್ಯಾಮ್ ಭೀಮ್ ಹೊಸಮನಿ ಅವರು ಸುದೀರ್ಘ ಸೇವೆ ಸಲ್ಲಿಸಿರುವುದು ಸ್ಮರಣೀಯ. ಇದೀಗ ನಿವೃತ್ತಿ ಹೊಂದುತ್ತಿದ್ದು, ಮುಂದಿನ ಜೀವನದಲ್ಲಿ ಅಭಿವೃದ್ಧಿ ಹೊಂದುವಂತಾಗಬೇಕು ಎಂದು ಬೆಳ್ತಂಗಡಿ ಅಗ್ನಿಶಾಮಕ ಠಾಣೆಯ ಸಹಾಯಕ ಠಾಣಾಧಿಕಾರಿ ಕ್ಷೇವಿಯಸ್ ಡಿ’ಸೋಜಾ
ಅವರು ಹೇಳಿದರು.
ಅವರು ಗುರುವಾಯನಕೆರೆ ಅಗ್ನಿಶಾಮಕ ಠಾಣೆಯ ಪ್ರಮುಖ ಅಗ್ನಿಶಾಮಕ ಶ್ಯಾಮ್ ಬಿ. ಹೊಸಮನಿ ವಯೋ ನಿವೃತ್ತಿ ಹೊಂದಿದ ಪ್ರಯುಕ್ತ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.
ನಿವೃತ್ತರಾದ ಪ್ರಮುಖ ಅಗ್ನಿಶಾಮಕ ಶ್ಯಾಮ್ ಬಿ. ಹೊಸಮನಿ ಮಾತನಾಡಿ, ಠಾಣೆಯ ಸಿಬಂದಿ ಸಮಾಜಕ್ಕಾಗಿ ಸೇವೆ ಮಾಡುತ್ತಿದ್ದೇವೆ. ಇನ್ನೊಬ್ಬರ ಜೀವ ಉಳಿಸುವ ಅಮೂಲ್ಯವಾದ ಕಾರ್ಯವನ್ನು ನಿರ್ವಹಿಸುತ್ತಿದ್ದು, ಈ ವೇಳೆ ತಂಡವಾಗಿ ರಕ್ಷಣಾ ಕಾರ್ಯ ಕೈಗೊಳ್ಳುವುದು ಅಗತ್ಯ. ಈಗಾಗಲೇ ಹಲವಾರು ಕಾರ್ಯಾಚರಣೆಗಳಲ್ಲಿ ಜತೆಯಾಗಿ ಕಾರ್ಯ ನಿರ್ವಹಿಸಿದ್ದು ಸ್ಮರಣೀಯ. ಪ್ರತಿಯೊಬ್ಬರೂ ಉತ್ತಮ ಸಹಕಾರ ನೀಡಿದ್ದಾರೆ. ದೂರದೂರಿನಿಂದ ಆಗಮಿಸಿದರೂ ತಾಲೂಕಿನಲ್ಲಿ ಎಲ್ಲವನ್ನೂ ಗಳಿಸಿದ್ದೇನೆ. ಎಲ್ಲರ ಸಹಕಾರ ಮರೆಯುವಂತಿಲ್ಲ ಎಂದರು.
ನಿವೃತ್ತರಾದ ಪ್ರಮುಖ ಅಗ್ನಿಶಾಮಕ ಶ್ಯಾಮ್ ಅವರನ್ನು ಠಾಣೆಯ ಸಿಬಂದಿ ಸ್ಮರಣಿಕೆ ನೀಡಿ ಗೌರವಿಸಿದರು. ಅಗ್ನಿಶಾಮಕ ವಾಹನ ಚಾಲಕ ಶಂಕರ್, ಶ್ಯಾಮ್ ಅವರ ಪತ್ನಿ ಶಾಂತಾ, ಪುತ್ರಿ ಪದ್ಮಿನಿ ಹಾಗೂ ಠಾಣೆಯ ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್
Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್ನಲ್ಲಿ ಸಿಲುಕಿಕೊಂಡ ಮಹಿಳೆ!!
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
Thug Life: ದುಬಾರಿ ಬೆಲೆಗೆ ಕಮಲ್ ಹಾಸನ್ ʼಥಗ್ ಲೈಫ್ʼ ಓಟಿಟಿ ರೈಟ್ಸ್ ಸೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.