‘ತುಳು ಭಾಷೆಗೆ ಒಲಿಸಿಕೊಳ್ಳುವ ಗುಣ ಇದೆ’


Team Udayavani, Jun 2, 2018, 2:33 PM IST

2-june-16.jpg

ಮಹಾನಗರ : ತುಳು ಭಾಷೆ ಎಲ್ಲರನ್ನು, ಎಲ್ಲವನ್ನು ಒಲಿಸಿಕೊಳ್ಳುವ ಗುಣವನ್ನು ಹೊಂದಿದೆ. ಪ್ರೀತಿಯನ್ನು ಪಸರಿಸಿ ಎಲ್ಲರನ್ನು ಬಳಸಿಕೊಳ್ಳುವ ಗುಣ ತುಳು ಜನರಲ್ಲಿ ಇದೆ ಎಂದು ಮಂಗಳೂರು ವಿ.ವಿ. ಕುಲಪತಿ  ಪ್ರೊ| ಕೆ.ಭೈರಪ್ಪ ಹೇಳಿದರು.

ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ತುಳುವನ್ನು ಅಳವಡಿಸಿ ಕೊಳ್ಳಲು ಹಾಗೂ ಈ ಶೈಕ್ಷಣಿಕ ವರ್ಷದಿಂದಲೇ ನಗರದ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ತುಳುವಿನಲ್ಲಿ ಸ್ನಾತಕೋತ್ತರ ಪದವಿ ಪ್ರಾರಂಭಿಸಲು ವಿಶೇಷ ಆಸಕ್ತಿ ವಹಿಸಿದ ಕುಲಪತಿಯವರನ್ನು ನಾಡಿನ ತುಳುವರ ಪರವಾಗಿ ಅಕಾಡೆಮಿ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ಅಭಿನಂದನ ಕಾರ್ಯ ಕ್ರಮದಲ್ಲಿ ಸಮ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ನಾಲ್ಕು ವರ್ಷಗಳ ತನ್ನ ಸೇವಾ ಅವಧಿಯಲ್ಲಿ ತುಳು ಭಾಷಿಗರ ನಡುವೆ ಇದ್ದು ಇಲ್ಲಿಯ ಉನ್ನತವಾದ ಸಂಸ್ಕೃತಿಯನ್ನು ತಿಳಿಯುವ, ಕಲಿಯುವ ಅವಕಾಶವಾಗಿದೆ. ತಾನು ವಿಜ್ಞಾನ ಕ್ಷೇತ್ರದಿಂದ ಬಂದಿದ್ದರೂ ಇಲ್ಲಿಯ ಜನರ ಸಾಂಸ್ಕೃತಿಕ ಮನಸ್ಸನ್ನು ಅರಿಯುವ ಪ್ರಯತ್ನ ಮಾಡಿದ್ದೇನೆ ಎಂದರು.

ಸ್ಪಂದಿಸುವ ಗುಣ ದೊಡ್ಡದು
ಪ್ರಕೃತಿಯ ನಡುವೆ ಸಾಂಸ್ಕೃತಿಕ ವಿಶೇಷತೆಗಳನ್ನು ಉಳಿಸಿಕೊಂಡು ಆಧುನಿಕ ವ್ಯವಸ್ಥೆಗಳನ್ನು ಅಳವಡಿಸಿಕೊಂಡು ಮಂದುವರಿಯುತ್ತಿರುವ ನಗರ ಮಂಗಳೂರು. ಶಿಕ್ಷಣ, ಆರೋಗ್ಯ, ಬ್ಯಾಂಕಿಂಗ್‌, ಕೃಷಿ, ಕೈಗಾರಿಕೆಗಳ ನಡುವೆ ಭಾಷೆ, ಸಾಹಿತ್ಯ, ಸಂಸ್ಕೃತಿ, ನಾಡು ನುಡಿ ಎಲ್ಲದಕ್ಕೂ ಸ್ಪಂದಿಸುವ ದೊಡ್ಡ ಗುಣ ತುಳುನಾಡಿನಲ್ಲಿದೆ ಎಂದು ಹೇಳಿದರು.

ಹಿರಿಯ ಜನಪದ ವಿದ್ವಾಂಸ ಡಾ| ಏರ್ಯ ಲಕ್ಷ್ಮೀನಾರಾಯಣ ಆಳ್ವ ಸಮ್ಮಾನ ನೆರವೇರಿಸಿದರು. ಮಂಗಳೂರು ವಿ.ವಿ.ಯ ತುಳು ಪೀಠದ ಅಧ್ಯಕ್ಷ ಪ್ರೊ| ಬಿ. ಶಿವರಾಮ ಶೆಟ್ಟಿ ಅಭಿನಂದನ ಭಾಷಣ ಮಾಡಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ ಅಧ್ಯಕ್ಷತೆ ವಹಿಸಿದ್ದು. ಅಕಾಡೆಮಿ ಸದಸ್ಯ, ಮಂಗಳೂರು ವಿ.ವಿ. ಉಪಕುಲಸಚಿವ ಪ್ರಭಾಕರ್‌ ನೀರುಮಾರ್ಗ ಸ್ವಾಗತಿಸಿದರು. ರಿಜಿಸ್ಟ್ರಾರ್‌ ಚಂದ್ರಹಾಸ ರೈ ಬಿ. ಪ್ರಸ್ತಾವನೆಗೈದರು. ಡಾ| ವಾಸುದೇವ ಬೆಳ್ಳೆ ನಿರೂಪಿಸಿ, ಸುಧಾ ನಾಗೇಶ್‌ ವಂದಿಸಿದರು. 

ಟಾಪ್ ನ್ಯೂಸ್

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು

money

Fruad: ಸರಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ರೂಪಾಯಿ ವಂಚನೆ

Mahisha

Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.