ದೇವರಕಾನ ಸರಕಾರಿ ಶಾಲೆಯಲ್ಲಿ ಹಸಿರ ಕಾನನ..!


Team Udayavani, Jun 5, 2018, 2:40 AM IST

devarakana.jpg

ವಿಶೇಷ ವರದಿ – ಸುಳ್ಯ: ಕಣ್ಮನ ಸೆಳೆಯುವ ಉದ್ಯಾನವನ. ಸುತ್ತಲೂ ಹಸಿರಿನ ಹೊದಿಕೆ. ಬಿಸಿಯೂಟಕ್ಕೆ ಬೇಕಾದ ಬಗೆ-ಬಗೆಯ ತರಕಾರಿ ತೋಟ, ಆರೋಗ್ಯಕ್ಕೆ ಔಷಧ ಗಿಡಗಳ ಸಾಲು. ಇದು ದೇವರಕಾನ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಹಸಿರು ಪರಿಸರದ ಸೊಗಡು ಸೊಂಪಾಗಿ ಹರಡಿದ ಬಗೆಯಿದು. ಐವರ್ನಾಡು ಗ್ರಾಮದಲ್ಲಿರುವ ಈ ವಿದ್ಯಾಸಂಸ್ಥೆಯಲ್ಲಿ 1ರಿಂದ 7ನೇ ತರಗತಿ ತನಕ ಕಲಿಕಾ ತರಗತಿಗಳಿವೆ. ಇಲ್ಲಿನ ವಿದ್ಯಾರ್ಥಿಗಳ ಸಂಖ್ಯೆ ಒಟ್ಟು 50 ಮಿಕ್ಕಿದೆ. ಮೂವರು ಪೂರ್ಣಕಾಲಿಕ, ಓರ್ವ ಗೌರವ ಶಿಕ್ಷಕಿಯಿದ್ದಾರೆ. 1959ರಲ್ಲಿ ಸ್ಥಾಪನೆಗೊಂಡ ಈ ಶಾಲೆ 59ನೇ ವರ್ಷದ ಹೊಸ್ತಿಲಿನಲ್ಲಿದೆ. ಎಡಮಲೆ, ಆಲಿಕಲ್ಲು, ಬಿರ್ಮುಕಜೆ, ಮಿತ್ತಮೂಲೆ, ಸಾರಕರೆ ಮೊದಲಾದ ಭಾಗಗಳಿಂದ ಇಲ್ಲಿಗೆ ಮಕ್ಕಳು ಆಗಮಿಸುತ್ತಾರೆ.

ವಠಾರದೊಳಗೆ ಏನಿದೆ?
ಊರವರ ಸಹಕಾರದಿಂದ 75ರಿಂದ 1 ಲಕ್ಷ ರೂ. ವೆಚ್ಚದಲ್ಲಿ ಸುಂದರವಾದ ಉದ್ಯಾನವನ ನಿರ್ಮಿಸಲಾಗಿದೆ. ವಿದ್ಯಾ ದೇವತೆಯ ಮೂರ್ತಿ, ವೃತ್ತಾಕಾರದ ನೀರಿನ ಕೊಳ, ಸುತ್ತಲೂ ಬಗೆ-ಬಗೆಯ ಕಲ್ಲಿನ ಜೋಡಣೆ, ಕೊಳದಲ್ಲಿ ಬಿಳಿ-ಕೆಂಪು ಬಣ್ಣದ ತಾವರೆಗಳು, ಹೂವಿನ ಗಿಡಗಳು ಗಮನ ಸೆಳೆಯುತ್ತಿವೆೆ. ಇದು ಶಾಲಾ ಮುಂಭಾಗದ ಸೌಂದರ್ಯಕ್ಕೂ ಮುಕುಟದಂತಿದೆ.


ಅಕ್ಷರ ಕೈ ತೋಟ ಪ್ರಶಸ್ತಿ

ಸಮೃದ್ಧಭರಿತ ತರಕಾರಿ ತೋಟ ಇಲ್ಲಿನ ವಿಶೇಷ. ಈ ಬಾರಿ ಶಾಲಾ ಆರಂಭದ ಲ್ಲಿಯೇ ತರಕಾರಿ ಸಿಗುತ್ತಿದೆ. ಹಾಗಾಗಿ ವರ್ಷವಿಡಿ ಇಲ್ಲಿ ಬಿಸಿಯೂಟಕ್ಕೆ ಸಾವಯವ ತರಕಾರಿ ರುಚಿ ತಪ್ಪುವುದಿಲ್ಲ. ಪ್ರತಿ ವರ್ಷ ಊರವರ, ಶಿಕ್ಷಕರ, ಮಕ್ಕಳ, SDMC ಸಮಿತಿಯ ಸಹಭಾಗಿತ್ವದಲ್ಲಿ ತರಕಾರಿ ತೋಟ ನಿರ್ಮಿಸಲಾಗುತ್ತದೆ. ಕಳೆದೆರಡು ವರ್ಷ ತಾಲೂಕು ಮಟ್ಟದ ಅಕ್ಷರ ಕೈ ತೋಟ ಪ್ರಶಸ್ತಿ ದೊರೆತಿದೆ.

ಈ ವರ್ಷವೂ ತರಕಾರಿ ತೋಟ ರಚನೆಗೆ ಯೋಜನೆ ರೂಪಿಸಿದ್ದು, ಮೂರನೇ ವರ್ಷವೂ ಮಾದರಿ ತೋಟ ನಿರ್ಮಿಸುವ ಯೋಚನೆ ಇಲ್ಲಿನದು. ಅದಕ್ಕಾಗಿ ಶ್ರಮದಾನ ಪೂರ್ಣಗೊಂಡಿದೆ. ಇನ್ನೊಂದು ಭಾಗದಲ್ಲಿ ಹತ್ತಾರು ಬಗೆಯ ಔಷಧ ಸಸಿಗಳಿವೆ. ಪ್ರಕೃತ್ತಿ ಮಡಿಲಿನಲ್ಲಿ ಬೆಳೆದು ಆರೋಗ್ಯಕ್ಕೆ ಸಹಕಾರಿ ಆಗುವ ತಿಮರೆ, ಕಿರತಾಕಡ್ಡಿ, ಕಹಿಬೇವು, ಅಮೃತಬಳ್ಳಿ ಸಹಿತ ಹತ್ತಾರು ಔಷಧ ಬಳ್ಳಿಗಳು ಇಲ್ಲಿವೆ. ಕಹಿ ಹುಳಿ ಮೊದಲಾದ ಗಿಡಗಳು ಫಸಲು ನೀಡುತ್ತಿದೆ.

ಅನುಕೂಲ
ಊರವರ ಸಹಕಾರದಿಂದ ಇಲ್ಲಿ ತರಕಾರಿ ತೋಟ ನಿರ್ಮಾಣ ಮಾಡಲಾಗುತ್ತದೆ. ಎರಡು ಬಾರಿ ತಾಲೂಕು ಮಟ್ಟದ ಪ್ರಶಸ್ತಿ ಸಿಕ್ಕಿದೆ. ಈ ಬಾರಿಯು ತೋಟ ನಿರ್ಮಾಣಕ್ಕೆ ಪೂರ್ವಭಾವಿಯಾಗಿ ಶ್ರಮದಾನ ನಡೆದಿದೆ. ಹಸಿರು ಸಂರಕ್ಷಣೆಯೊಂದಿಗೆ ಆರೋಗ್ಯಪೂರ್ಣ ಪರಿಸರ ನಿರ್ಮಾಣಕ್ಕೆ ಇದು ಸಹಕಾರಿ. 
-ಎ. ಲೀಲಾವತಿ ಮುಖ್ಯ ಶಿಕ್ಷಕಿ

ಟಾಪ್ ನ್ಯೂಸ್

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.