ಮಕ್ಕಳು ಪರಿಸರ ರಾಯಭಾರಿಗಳಾಗಲಿ: ನ್ಯಾ| ದೇಸಾಯಿ


Team Udayavani, Jun 6, 2018, 12:36 PM IST

chikk-1.jpg

ಚಿಕ್ಕಮಗಳೂರು: ಗಿರಿಶಿಖರ ಹಾಗೂ ಕಾನನದಿಂದ ಕೂಡಿರುವ ಈ ಜಿಲ್ಲೆಯಲ್ಲಿ ಆಮ್ಲಜನಕದ ಮಟ್ಟ ಉತ್ತಮವಾಗಿದೆ.
ಈ ಪ್ರಾಕೃತಿಕ ಪರಿಸರವನ್ನು ಉಳಿಸಿ ಬೆಳೆಸಬೇಕೆಂದು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಪಿ.ಎನ್‌. ದೇಸಾಯಿ
ಹೇಳಿದರು.

ನಗರದ ಹಿರೇಮಗಳೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ
ಪ್ರಾಧಿಕಾರ, ಶಿಕ್ಷಣ ಇಲಾಖೆ, ವಾರ್ತಾ ಇಲಾಖೆ ಹಾಗೂ ವಕೀಲರ ಸಂಘ ಮಂಗಳವಾರ ಏರ್ಪಡಿಸಿದ್ದ ವಿಶ್ವ ಪರಿಸರ
ದಿನಾಚರಣೆಯನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಪ್ರಕೃತಿ ಪ್ರೇಮ ಹೆಚ್ಚಾಗಿರುತ್ತದೆ. ಅವರನ್ನು ಪರಿಸರ ಉಳಿಸುವ ರಾಯಭಾರಿಗಳನ್ನಾಗಿ ಮಾಡಿಕೊಳ್ಳಬೇಕೆಂದು ತಿಳಿಸಿದರು.

ಪ್ಲಾಸ್ಟಿಕ್‌ ಬಳಕೆ ತಡೆಯುವ ಘೋಷಣೆಯನ್ನು ವಿಶ್ವ ಪರಿಸರ ದಿನ ಈ ವರ್ಷ ಹೊಂದಿದ್ದು, ಪುನರ್ಬಳಕೆಯಾಗದ
ಪ್ಲಾಸ್ಟಿಕ್‌ನ್ನು ಉಪಯೋಗಿಸದಂತೆ ಆಲೋಚಿಸಬೇಕೆಂದು ತಿಳಿಸಿ, ಈ ರೀತಿ ಕಾರ್ಯಕ್ರಮಗಳ ಮೂಲಕ ಪರಿಸರದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.  ಕಾರ್ಯಕ್ರಮದಲ್ಲಿ ಪರಿಸರ ರಕ್ಷಣೆ ಬಗ್ಗೆ ಮಾತನಾಡಿದ ಪರಿಸರ ಪ್ರೇಮಿ ಸ.ಗಿರಿಜಾಶಂಕರ, ಇರುವ ಈ ಭೂಮಿಯನ್ನು ರಕ್ಷಿಸಿಕೊಳ್ಳುವ ಹೊಣೆಗಾರಿಕೆ ಮನುಷ್ಯನ ಮೇಲಿದೆ. ಪರಿಸರವೆಂದರೆ ಕೇವಲ ಮನುಷ್ಯ ಮಾತ್ರವಲ್ಲ, ಇಲ್ಲಿರುವ ಸೂಕ್ಷ್ಮಜೀವಿಗಳಿಂದ ಹಿಡಿದು ನೆಲ, ಜಲ, ಮಣ್ಣು, ವಾತಾವರಣ, ಪ್ರಾಣಿ, ಪಕ್ಷಿ, ಸಣ್ಣ ಸಸ್ಯದಿಂದ ಹಿಡಿದು ಬೃಹದಾಕಾರದ ಮರವೂ ಸೇರುತ್ತದೆ ಎಂದು ಹೇಳಿದರು.

ಪ್ಲಾಸ್ಟಿಕ್‌ ಬಳಕೆ ಇಂದು ವಿಶ್ವದಲ್ಲೆ ಮಿತಿಮೀರಿದೆ. 80 ಲಕ್ಷ ಟನ್‌ ಪ್ಲಾಸ್ಟಿಕ್‌ ವಿವಿಧ ಜಲ ಹಾಗೂ ಇನ್ನಿತರ ಮೂಲಗಳಿಂದ ಸಮುದ್ರ ಸೇರುತ್ತಿವೆ. ಮುಂದೊಂದು ದಿನ ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಗಾಳ ಹಾಕಿದರೆ ಕೇವಲ ಪ್ಲಾಸ್ಟಿಕ್‌ ದೊರೆಯುತ್ತದೆಯೇ ಹೊರತು, ಮೀನುಗಳು ದೊರೆಯಲಾರವು ಎಂದರು.

ಒಂದು ಕಾಲದಲ್ಲಿ ಶುದ್ಧವಾಗಿ ಹರಿಯುತ್ತಿದ್ದ ಎಲ್ಲಾ ನೀರಿನ ಝರಿ ಸೇರಿದಂತೆ ಮೂಲಗಳು ಇಂದು ಕಲುಷಿತವಾಗಿವೆ.
ನಾವು ಸೇವಿಸುತ್ತಿರುವ ಗಾಳಿ ವಿಷವಾಗುತ್ತಾ ಬರುತ್ತಿದೆ. ಅತ್ಯಂತ ಪರಿಶುದ್ಧವಾಗಿದ್ದ ಮಣ್ಣು ಕೀಟನಾಶಕಗಳ ಅತಿ ಬಳಕೆಯಿಂದ ಅದೂ ಸಹ ಮಾಲಿನ್ಯಪೂರಿತವಾಗಿದೆ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ಶಾಲೆಯ ಎಸ್‌ .ಡಿ.ಎಂ.ಸಿ. ಅಧ್ಯಕ್ಷೆ ಮಮತಾ ವಹಿಸಿದ್ದರು. ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ, ಜಿ.ಪಂ. ಸಿಇಒ ಸಿ. ಸತ್ಯಭಾಮಾ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ ಚೇಂಗಟಿ, ನ್ಯಾಯಾಧೀಶರಾದ ಕಂಬೇಗೌಡ, ಕೆ.ಎಲ್‌. ಅಶೋಕ, ಅಣ್ಣಾಸಾಹೇಬ್‌, ಡಿ.ಪಿ. ದೇವೇಂದ್ರನ್‌, ಬಿ.ಟಿ. ದುಶ್ಯಂತ್‌, ಎಚ್‌. ಎಸ್‌.ಪುಟ್ಟಸ್ವಾಮಿ, ಶ್ರೀದೇವಿ ಮೋಹನ್‌ ಇದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

13-kudremukh-1

Kudremukh-ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿ; ಗುಂಡಿಗಳ ರಸ್ತೆ

1-ckm

Chikkamagaluru: ಕಿರುಕುಳ, ಮಹಿಳೆ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಸರ್ವೇ ಸಿಬಂದಿ ಆತ್ಮಹತ್ಯೆ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

12

Mudigere: ನೇಣು ಬಿಗಿದುಕೊಂಡು‌ ಆತ್ಮಹ*ತ್ಯೆಗೆ ಶರಣಾದ ಸರ್ವೇ ಅಧಿಕಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.