ಬೆಟ್ಟಂಪಾಡಿ ಶಾಲೆ ರಸ್ತೆ ಕೆಸರುಮಯ
Team Udayavani, Jun 9, 2018, 2:25 AM IST
ನಿಡ್ಪಳ್ಳಿ: ಬೆಟ್ಟಂಪಾಡಿ- ಕೇಕನಾಜೆ – ಕೊಮ್ಮಂಡ ಮೂಲಕ ಬೆಟ್ಟಂಪಾಡಿ ಶಾಲೆಗೆ ಹೋಗುವ ರಸ್ತೆಗೆ ಮಳೆ ನೀರಿನೊಂದಿಗೆ ಕೊಚ್ಚಿ ಬಂದ ಮಣ್ಣಿನಿಂದ ಕೆಸರುಮಯವಾಗಿ ನಡೆದಾಡಲು ಆಗದ ಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಕಾಂಕ್ರೀಟ್ ಕಾಮಗಾರಿಗೆ ಕಳೆದ ಬೇಸಗೆ ಸಮಯದಲ್ಲಿ ಅಲ್ಪಸಂಖ್ಯಾಕ ನಿಗಮದಿಂದ 5 ಲಕ್ಷ ರೂ. ಮಂಜೂರಾಗಿತ್ತು. ರಸ್ತೆಯನ್ನು ಅಗೆದು ಹಾಕಿ ಅನಂತರ ಜಲ್ಲಿ ತಂದು ಹಾಸಲಾಗಿತ್ತು. ಅನಂತರ ಗುತ್ತಿಗೆದಾರರಾಗಲಿ, ಕೆಲಸದವರಾಗಲಿ ಅತ್ತ ಸುಳಿಯದೆ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಟ್ಟಂಪಾಡಿ ಸರಕಾರಿ ಪ್ರಾಥಮಿಕ ಶಾಲೆಗೆ ಈ ರಸ್ತೆಯ ಮೂಲಕವೇ ಹೋಗಬೇಕಾಗಿರುವುದರಿಂದ ಶಾಲಾ ಮಕ್ಕಳಿಗೆ ನಡೆದುಕೊಂಡು ಹೋಗಲು ಕಷ್ಟಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲೆಗೆ ತೆರಳುವ ಸಮಯದಲ್ಲಿ ಮತ್ತು ಶಾಲೆಯಿಂದ ಮನೆಗೆ ಹಿಂದಿರುಗುವ ಸಂದರ್ಭ ವಾಹನಗಳೂ ಸಂಚರಿಸುವುದರಿಂದ ಕೆಸರು ನೀರು ಎಲ್ಲೆಡೆ ಚಿಮ್ಮುತ್ತದೆ. ಇದರಿಂದ ಮಕ್ಕಳು ತುಂಬಾ ಕಷ್ಟ ಪಟ್ಟು ತೆರಳುವಂತಾಗಿದೆ.
ಶಾಲಾ ಮಕ್ಕಳಿಗೆ ತೊಂದರೆ
ರಸ್ತೆ ಕಾಂಕ್ರೀಟ್ ಮಾಡಲು ರಸ್ತೆ ಅಗೆದು ಹಾಕಿದ ಪರಿಣಾಮ ಈಗ ವಾಹನ ಸಂಚಾರ ಮತ್ತು ನಡೆದಾಡಲೂ ಸಾಧ್ಯವಿಲ್ಲ. ಶಾಲಾ ಮಕ್ಕಳಿಗಂತೂ ಬಹಳ ತೊಂದರೆಯಾಗಿದ್ದು, ಶಾಲೆಗೆ ಬರುವಾಗ ವಿದ್ಯಾರ್ಥಿಗಳ ಬಟ್ಟೆಗ ಳು ಕೆಸರುಮಯವಾಗುತ್ತವೆ.
– ಸೀತಾರಾಮ ಗೌಡ ಮಿತ್ತಡ್ಕ, ದೈಹಿಕ ಶಿಕ್ಷಣ ಶಿಕ್ಷಕರು, ಬೆಟ್ಟಂಪಾಡಿ ಶಾಲೆ
ಪರ್ಯಾಯ ವ್ಯವಸ್ಥೆ ಕಲ್ಪಿಸಿ
ರಸ್ತೆಯನ್ನು ಅಗೆದು ಹಾಕಿದ ಪರಿಣಾಮ ಈಗ ತೊಂದರೆ ಅನುಭವಿಸುವಂತಾಗಿದೆ. ಮಳೆಗಾಲ ಆರಂಭಕ್ಕೆ ಮೊದಲೇ ಕಾಮಗಾರಿ ಮುಗಿಸಲು ನಾವು ಹೇಳಿದ್ದೆವು. ಈಗೀನ ಪರಿಸ್ಥಿತಿಯನ್ನು ಜಿಲ್ಲಾ ಪಂಚಾಯತ್, ಶಾಸಕರಿಗೂ ಮನವರಿಕೆ ಮಾಡಲಾಗಿದೆ. ಗುತ್ತಿಗೆದಾರರಿಗೂ ದೂರವಾಣಿ ಮೂಲಕ ತಿಳಿಸಲಾಗಿದೆ. ಆದಷ್ಟು ಬೇಗ ಇದ್ದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಾಗಿದೆ.
– ಜಗನ್ನಾಥ ಶೆಟ್ಟಿ ಕೊಮ್ಮಂಡ, ಬೆಟ್ಟಂಪಾಡಿ ಗ್ರಾ.ಪಂ. ಸದಸ್ಯರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.