ನಾಡಪ್ರಭು ಬಗೆಗಿನ ತಪ್ಪು ಕಲ್ಪನೆ ದೂರಾಗಿಸಿ


Team Udayavani, Jun 10, 2018, 11:59 AM IST

gangnani 1.jpg

ಬೆಂಗಳೂರು: ಬೆಂಗಳೂರು ನಗರದ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಬಗೆಗಿನ ತಪ್ಪು ಕಲ್ಪನೆ ಹಾಗೂ ಗೊಂದಲಗಳನ್ನು ಪರಿಹರಿಸಿ, ಯುವ ಪೀಳಿಗೆಗೆ ಅವರನ್ನು ಪರಿಚಯಿಸುವ ಕೆಲಸವಾಗಬೇಕಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ಭಾರತ ಜ್ಞಾನಾಭಿವೃದ್ಧಿ ಟ್ರಸ್ಟ್‌ ಹಾಗೂ ಕೃಷಿಕ ಸಾಹಿತ್ಯ ಪರಿಷತ್‌ ಜಂಟಿಯಾಗಿ ಶನಿವಾರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಆಯೋಜಿಸಿದ್ದ “ಕರ್ನಾಟಕ ನಿರ್ಮಾಣದಲ್ಲಿ ಕೆಂಪೇಗೌಡರ ರಾಜ ವಂಶಸ್ಥರ ಕೊಡುಗೆಗಳು’ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಬಹಳಷ್ಟು ಜನರಿಗೆ ಕೆಂಪೇಗೌಡರು ಬೆಂಗಳೂರು ನಿರ್ಮಿಸಿದರು ಎಂಬುದಷ್ಟೇ ಗೊತ್ತಿದ್ದು, ಇತಿಹಾಸದಲ್ಲಿ ಮುಚ್ಚಿ ಹೋಗಿರುವ ಅವರ ಬಗೆಗಿನ ವಿಷಯಗಳ ಮೇಲೆ ಬೆಳಕು ಚೆಲ್ಲುವಂತಹ ಕೆಲಸವಾಗಬೇಕಿದೆ ಎಂದರು. ಕೆಂಪೇಗೌಡರು ಆಧುನಿಕತೆಗೆ ಹೊಂದಿಕೊಳ್ಳುವ ರೀತಿಯಲ್ಲಿ ಬೆಂಗಳೂರನ್ನು ನಿರ್ಮಿಸಿದ್ದು, ಒಂದೊಂದು ಕಸುಬಿಗೆ ಒಂದೊಂದು ಜಾಗವನ್ನು ವಿಂಗಡಿಸಿರುವುದು ವಿಶೇಷವಾಗಿದೆ.

1940ರಲ್ಲಿ ಸಾಮಾನ್ಯ ಪಟ್ಟಣವಾಗಿದ್ದ ಬೆಂಗಳೂರು ಇಂದು ಏಷ್ಯಾದಲ್ಲಿಯೇ ಅತಿ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಬೆಂಗಳೂರು ನಗರ ನಿರ್ಮಾಣಕ್ಕೆ ಕಾರಣವಾದವರನ್ನು ಸ್ಮರಿಸಬೇಕಿದೆ ಎಂದು ಹೇಳಿದರು. ನಗರದ ಅಭಿವೃದ್ಧಿಯ ಕುರಿತು ದೂರಾಲೋಚನೆ ಹೊಂದಿದ್ದ ಕೆಂಪೇಗೌಡರು ನಗರದ ನಾಲ್ಕು ದಿಕ್ಕುಗಳಲ್ಲಿ ಗಡಿ ಗೋಪುರಗಳನ್ನು ನಿರ್ಮಿಸಿದ್ದರು.

ಅದನ್ನು ಮೀರಿ ಬೆಂಗಳೂರು ಬೆಳೆದಿದ್ದು, ಕೇವಲ 200 ಚದರ ಕಿ.ಮೀ. ವ್ಯಾಪ್ತಿಯಿಂದ ನಗರ ಇಂದು 800 ಚದರ ಕಿ.ಮೀ.ಗೆ ವ್ಯಾಪಿಸಿದ ಪರಿಣಾಮ ಸಾಕಷ್ಟು ಸಮಸ್ಯೆಗಳು ಸೃಷ್ಟಿಯಾಗಿವೆ ಎಂದು ಹೇಳಿದರು.

ಚೆನ್ನೈ ಹೈಕೋರ್ಟ್‌ ನ್ಯಾಯಮೂರ್ತಿ ಹುಲುವಾಡಿ ಜಿ.ರಮೇಶ್‌ ಮಾತನಾಡಿ, ಬೆಂಗಳೂರಿನ ಉಪನಗರಗಳೆಂದು ಘೋಷಿಸಿರುವ ನಗರಗಳಿಗೆ ಉತ್ತಮ ಮೂಲಸೌಕರ್ಯ ಒದಗಿಸುವುದರಿಂದ ಬೆಂಗಳೂರಿನ ಸಂಚಾರ ದಟ್ಟಣೆ, ನೀರಿನ ಸಮಸ್ಯೆಯಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ನೂತನ ಸಚಿವರು ಆ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಬೇಕು ಎಂದು ಸಲಹೆ ನೀಡಿದರು. 

ಕಾರ್ಯಕ್ರಮದಲ್ಲಿ ಹಿರಿಯ ವಕೀಲ ಸಿ.ಎಚ್‌.ಹನುಮಂತರಾಯ, ಸಂಶೋಧಕ ಎಂ.ಜಿ.ನಾಗರಾಜು, ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಎಲ್‌.ಎನ್‌.ಮುಕುಂದರಾಜು, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಎನ್‌.ಸತ್ಯಪ್ರಕಾಶ್‌, ನಾಡಪ್ರಭು ರಾಜ್ಯ ಒಕ್ಕಲಿಗರ ಕೇಂದ್ರದ ಅಧ್ಯಕ್ಷ ನಾಡಪ್ರಭು ಲಕ್ಕೇಗೌಡ ಸೇರಿದಂತೆ ಪ್ರಮುಖರಿಗೆ ಸನ್ಮಾನಿಸಲಾಯಿತು. 

ಬೆಂಗಳೂರನ್ನು ಎಷ್ಟು ಅಭಿವೃದ್ಧಿ ಮಾಡಬೇಕು?- ಪರಮೇಶ್ವರ್‌: ಬೆಂಗಳೂರನ್ನು ಇನ್ನೆಷ್ಟು ಅಭಿವೃದ್ಧಿ ಮಾಡಬೇಕು ಎಂಬ ದೊಡ್ಡ ಸವಾಲು ಮುಂದಿದ್ದು, ನಗರದ ಜನಸಂಖ್ಯೆ 1.30 ಕೋಟಿಗೆ ತಲುಪಿದೆ. ಜನಸಾಂದ್ರತೆಗೆ ಅನುಗುಣವಾಗಿ ಸಮಸ್ಯೆಗಳು ಸೃಷ್ಟಿಯಾಗಿತ್ತಿರುವುದರಿಂದ ತುಮಕೂರು, ಕೋಲಾರ, ರಾಮನಗರ ಸೇರಿದಂತೆ ಇತರೆ ನಗರಗಳ ಅಭಿವೃದ್ಧಿಗೊಳಿಸಲು ಚಿಂತಿಸಬೇಕಿದೆ ಎಂದು ಡಾ.ಜಿ.ಪರಮೇಶ್ವರ್‌ ಹೇಳಿದರು. 

ನಗರದ ಜನಸಂಖ್ಯೆ ಹೆಚ್ಚುತ್ತಿದ್ದರೆ ಕಾವೇರಿ ನೀರು ಇನ್ನೆಷ್ಟು ತರಲು ಸಾಧ್ಯ? ಕಳೆದ ಬೇಸಿಗೆಯಲ್ಲಿಯೇ ಕಾವೇರಿ ನೀರಿನ ಕೊರತೆಯಿಂದ ಜನರು ತೊಂದರೆ ಅನುಭವಿಸುವಂತಾಗಿತ್ತು. ಒಂದೊಮ್ಮೆ ನಗರಕ್ಕೆ ಬರುವ ಕಾವೇರಿ ನೀರು ನಿಂತು ಹೋದರೆ, ಇಲ್ಲಿನ ಜನರ ಪರಿಸ್ಥಿತಿಯೇನು ಎಂಬುದನ್ನು ಯೋಚಿಸಿದರೆ, ಬೆಂಗಳೂರು ಅಭಿವೃದ್ಧಿಯ ಬದಲಿಗೆ ಪರ್ಯಾಯ ನಗರಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕಿದೆ ಎಂದರು. 

ಬಿಬಿಎಂಪಿ ವಿಭಜನೆ ಮಾಡದಂತೆ ಮನವಿ: ನಾಡಪ್ರಭು ಕೆಂಪೇಗೌಡರು ನಿರ್ಮಿಸಿರುವ ಬೆಂಗಳೂರನ್ನು ವಿಭಜನೆ ಮಾಡಲು ಯಾವುದೇ ಕಾರಣಕ್ಕೂ ಸರ್ಕಾರ ಮುಂದಾಗಬಾರದು. ಆಡಳಿತದಲ್ಲಿ ಪ್ರಾಮಾಣಿಕತೆ ಹಾಗೂ ಪಾರದರ್ಶಕತೆ ತರುವ ಮೂಲಕ ನಗರದಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕೇ ಹೊರತು, ವಿಭಜನೆಗೆ ಕ್ರಮ ಸರಿಯಲ್ಲ ಎಂದು ಬೆಂಗಳೂರು ನಿರ್ಮಾಪಕ ಕೆಂಪೇಗೌಡ ಕೇಂದ್ರ ಸಮಿತಿ ಶನಿವಾರ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್‌ ಅವರಿಗೆ ಮನವಿ ಪತ್ರ ಸಲ್ಲಿಸಿತು.

ಟಾಪ್ ನ್ಯೂಸ್

BBK11: ಬಿಗ್ ಬಾಸ್ ‌ಮನೆಯಿಂದ ಹೊರ ಹೋದ ಕೂಡಲೇ ಆಡಿಯೋ ಹರಿಬಿಟ್ಟ ಜಗದೀಶ್ ; ವೈರಲ್

BBK11: ಬಿಗ್ ಬಾಸ್ ‌ಮನೆಯಿಂದ ಹೊರ ಹೋದ ಕೂಡಲೇ ಆಡಿಯೋ ಹರಿಬಿಟ್ಟ ಜಗದೀಶ್ ; ವೈರಲ್

Jaya-Mrtuyunajay-swamiji

Reservation: ಚಳಿಗಾಲ ಅಧಿವೇಶನಕ್ಕೂ ಮುನ್ನ ಸರಕಾರ ನಿರ್ಧಾರ ಪ್ರಕಟಿಸಲಿ: ಜಯಮೃತ್ಯುಂಜಯ ಶ್ರೀ

HDK-1

Political: ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರದಿಂದ ಅಸಹಕಾರ: ಎಚ್‌ಡಿಕೆ

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

1-JMM

Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

14-bng

Namma Metro ಬಗ್ಗೆ ಸಿಎಜಿ ಆಡಿಟ್‌ ನಡೆಸಿ: ಸಂಸದ ತೇಜಸ್ವಿ

13-bng

Bengaluru: ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ ಹೊಡೆದು ಸಹೋದರರ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

BBK11: ಬಿಗ್ ಬಾಸ್ ‌ಮನೆಯಿಂದ ಹೊರ ಹೋದ ಕೂಡಲೇ ಆಡಿಯೋ ಹರಿಬಿಟ್ಟ ಜಗದೀಶ್ ; ವೈರಲ್

BBK11: ಬಿಗ್ ಬಾಸ್ ‌ಮನೆಯಿಂದ ಹೊರ ಹೋದ ಕೂಡಲೇ ಆಡಿಯೋ ಹರಿಬಿಟ್ಟ ಜಗದೀಶ್ ; ವೈರಲ್

Jaya-Mrtuyunajay-swamiji

Reservation: ಚಳಿಗಾಲ ಅಧಿವೇಶನಕ್ಕೂ ಮುನ್ನ ಸರಕಾರ ನಿರ್ಧಾರ ಪ್ರಕಟಿಸಲಿ: ಜಯಮೃತ್ಯುಂಜಯ ಶ್ರೀ

HDK-1

Political: ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರದಿಂದ ಅಸಹಕಾರ: ಎಚ್‌ಡಿಕೆ

1-dcc

Udupi;ವಿಧಾನಪರಿಷತ್‌ ಉಪಚುನಾವಣೆ: ನಿಷೇಧಾಜ್ಞೆ ಜಾರಿ

man-a

Siddapura: ಪುತ್ರನ ಮನೆ ಸಾಲದಿಂದ ತಂದೆ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.