ರಸ್ತೆ ವಿಸ್ತರಣೆಗೆ ಮುಂದುವರಿದ ನಿರಶನ


Team Udayavani, Jun 10, 2018, 12:00 PM IST

raste-vis.jpg

ಮಹದೇವಪುರ: ಸದಾ ಸಂಚಾರ ದಟ್ಟಣೆಯಿಂದ ಕೂಡಿರುವ ಪಣತ್ತೂರು ರೈಲ್ವೆ ಕೆಳ ಸೇತುವೆ ಮತ್ತು ರಸ್ತೆ ವಿಸ್ತರಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಶುಕ್ರವಾರ ಆರಂಭಿಸಿರುವ ನಿರಾಹಾರ ಧರಣಿ ಶನಿವಾರವೂ ಮುಂದುವರಿದಿದ್ದು, ಮೂರನೇ ದಿನಕ್ಕೆ ಕಾಲಿರಿಸಿದೆ.

ಹೂರ ವರ್ತುಲ ರಸ್ತೆಯಿಂದ ಪಣತ್ತೂರು ಮೂಲಕ ವರ್ತೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸಂಚರಿಸುವ ವಾಹನಗಳ ಸಂಖ್ಯೆ ದಿನೇ ದಿನೆ ವೃದ್ಧಿಸುತ್ತಿದೆ. ಆದರೆ ರಸ್ತೆ ಮಾತ್ರ ಅತ್ಯಂತ ಕಿರಿದಾಗಿರುವ ಕಾರಣ ಸದಾ ಸಂಚಾರ ದಟ್ಟಣೆ ಉಂಟಾಗುತ್ತದೆ. ಐದಾರು ವರ್ಷಗಳಿಂದಲೂ ಇರುವ ಈ ಸಮಸ್ಯೆಗೆ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಪಣತ್ತೂರು ಗ್ರಾಮಸ್ಥರು ನಿರಶನ ಆರಂಭಿಸಿದ್ದಾರೆ.

ಈಗಾಗಲೇ ಎರಡು ದಿನಗಳಿಂದ ಉಪವಾಸ ಇರುವ ಕಾರಣ ಧರಣಿ ನಿರತರ ಆರೋಗ್ಯ ಕ್ರಮೇಣ ಬಿಗಡಾಯಿಸುತ್ತಿದೆ. ಆದರೆ, ಈವರೆಗೆ ಯಾವೊಬ್ಬ ಜನಪ್ರತಿನಿಧಿಯಾಗಲಿ, ಅಧಿಕಾರಿಗಳಾಗಲಿ ಧರಣಿ ಸ್ಥಳಕ್ಕೆ ಭೇಟಿ ನೀಡುವ ಸೌಜನ್ಯ ತೋರಿಲ್ಲ. ಹೀಗಾಗಿ, ಸಮಸ್ಯೆ ಪರಿಹರಿಸುವ ಕುರಿತು ಸ್ಥಳೀಯ ಶಾಸಕರು, ಸಂಸದರು ಮತ್ತು ಅಧಿಕಾರಿಗಳು ಲಿಖೀತ ಭರವಸೆ ನೀಡುವವರೆಗೂ ನಿರಶನ ಮುಂದುವರಿಯಲಿದೆ ಎಂದು ಧರಣಿ ನಿರತರು ತಿಳಿಸಿದ್ದಾರೆ.

ಹೊರ ವರ್ತೂಲ ರಸ್ತೆಯಿಂದ ವರ್ತೂರು, ಗುಂಜೂರು, ಸರ್ಜಾಪುರ ಮುಖ್ಯ ರಸ್ತೆಗೆ ಸಂಪರ್ಕ ಕೊಂಡಿಯಾಗಿರುವ ಪಣತ್ತೂರು ರೈಲ್ವೆ ಕ್ರಾಸಿಂಗ್‌ ಕೆಳ ಸೇತುವೆ ಮೂಲಕ ಒಮ್ಮೆಗೆ ಒಂದೇ ವಾಹನ ಚಲಿಸಲು ಮಾತ್ರ ಸ್ಥಳಾವಕಾಶವಿದೆ. ಆದರೆ, ಬೆಳಗ್ಗೆ ಹಾಗೂ ಸಂಜೆ ಸಾವಿರಾರು ವಾಹನಗಳು ಈ ಮಾರ್ಗವಾಗಿ ಸಂಚರಿಸುವುದರಿಂದ ತೀವ್ರ ಸಂಚಾರ ದಟ್ಟಣೆ ಉಂಟಾಗುತ್ತದೆ. ಗ್ರಾಮದ ನಡುವೆ ಹಾದುಹೋಗುವ ರಸ್ತೆಯಲ್ಲೇ ಉಂಟಾಗುವ ಸಂಚಾರ ದಟ್ಟಣೆಯಿಂದ ಬೇಸತ್ತಿರುವ ಪಣತ್ತೂರು ಗ್ರಾಮಸ್ಥರು, ರಸ್ತೆ ವಿಸ್ತರಿಸಿ ಸಮಸ್ಯೆ ಪರಿಹರಿಸುವಂತೆ ಪಟ್ಟು ಹಿಡಿದಿದ್ದಾರೆ.

ಚರ್ಚೆ ನಡೆದಿದೆ, ಪಾಲಿಕೆ ಅನುದಾನ ಕೊಡುತ್ತಿಲ್ಲ: “ಪಣತ್ತೂರು ರಸ್ತೆ ಮತ್ತು ರೈಲ್ವೆ ಕೆಳ ಸೇತುವೆ ವಿಸ್ತರಣೆ ಕುರಿತಂತೆ ಸಂಸದ ಪಿ.ಸಿ ಮೋಹನ್‌ ಸಮ್ಮುಖದಲ್ಲಿ ಸ್ಥಳೀಯರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ರಸ್ತೆಗೆ ಭೂಮಿ ನೀಡುವವರು ಟಿಡಿಆರ್‌ ಬದಲು ಮಾರುಕಟ್ಟೆ ದರ ನೀಡುವಂತೆ ಪಟ್ಟು ಹಿಡಿದಿದ್ದಾರೆ.

ಇನ್ನೊಂದೆಡೆ ಹೊರವರ್ತುಲ ರಸ್ತೆಯ ನ್ಯೂ ಹೊರೈಜನ್‌ ಕಾಲೇಜಿನಿಂದ ವರ್ತೂರು ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸಲು ಪಣತ್ತೂರು ಪಕ್ಕದಲ್ಲಿ 80 ಅಡಿ ಅಗಲದ ರಸ್ತೆ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ ರೈಲ್ವೆ ಕೆಳ ಸೇತುವೆ ವಿಸ್ತರಣೆಗೆ ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ. ಆದರೆ ಬಿಬಿಎಂಪಿ ಅನುದಾನ ಒದಗಿಸುತ್ತಿಲ್ಲ,’ ಎಂದು ಶಾಸಕ ಅರವಿಂದ ಲಿಂಬಾವಳಿ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

1-JMM

Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

14-bng

Namma Metro ಬಗ್ಗೆ ಸಿಎಜಿ ಆಡಿಟ್‌ ನಡೆಸಿ: ಸಂಸದ ತೇಜಸ್ವಿ

13-bng

Bengaluru: ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ ಹೊಡೆದು ಸಹೋದರರ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ACT

Kinnigoli: ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ

accident

Shirva: ಬೈಕ್‌ ಢಿಕ್ಕಿ; ಮಹಿಳೆಗೆ ಗಂಭೀರ ಗಾಯ

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

byndoor

Kundapura: ಕಾರು ಢಿಕ್ಕಿಯಾಗಿ ದನ ಸಾವು; ಕಾರು ಜಖಂ

1

Fire Accident: ಕುಂಬ್ರದಲ್ಲಿ ಗುಡಿಸಲು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.