ಮುಂಗಾರು ಪ್ರವೇಶಿಸಿದರೂ ತೋಡುಗಳ ಹೂಳೆತ್ತಲಿಲ್ಲ !
Team Udayavani, Jun 11, 2018, 6:15 AM IST
ತೆಕ್ಕಟ್ಟೆ: ಮುಂಗಾರು ಆಗಮನ ಇನ್ನೇನು ಶುರು ಎಂದರೂ ತೆಕ್ಕಟ್ಟೆ ಗ್ರಾ.ಪಂ.ವ್ಯಾಪ್ತಿಯಲ್ಲಿ ಮಳೆಗಾಲದ ಸಿದ್ಧತೆ ಮಾತ್ರ ನಡೆದೇ ಇಲ್ಲ.
ರಾ.ಹೆ.66 ಚತುಷ್ಪಥ ಕಾಮಗಾರಿ ಪೂರ್ಣಗೊಂಡಿದೆ ಆದರೂ ಕೂಡಾ ಮಳೆ ನೀರು ಹರಿದು ಹೋಗಲು ಸಮರ್ಪಕವಾದ ಒಳ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂಧ ನೀರು ಪ್ರಮುಖ ರಸ್ತೆಗೆ, ತಾತ್ಕಾಲಿಕ ಬಸ್ ತಂಗುದಾಣ ಹಾಗೂ ಕೃಷಿ ಭೂಮಿಗಳಿಗೆ ನುಗ್ಗುವ ಸಾಧ್ಯತೆಗಳಿವೆ.
ಎಲ್ಲೆಲ್ಲಿ ಸಮಸ್ಯೆ?
ಹೆದ್ದಾರಿಯ ಬಳಿಯ ಗ್ರಾ.ಪಂ. ಬಳಿ ಭಾರಿ ಪ್ರಮಾಣದಲ್ಲಿ ಹರಿದು ಬರುವ ಮಳೆ ನೀರು ನೇರವಾಗಿ ಬಂದು ತೆಕ್ಕಟ್ಟೆ ಪ್ರಮುಖ ಭಾಗದಲ್ಲಿರುವ ಬಸ್ ತಂಗುದಾಣವನ್ನು ಆವರಿಸುತ್ತಿದೆ. ಮಲ್ಯಾಡಿ ಒಳ ರಸ್ತೆಗೆ ಅಳವಡಿಸಿರುವ ಸಿಮೆಂಟ್ ಪೈಪ್ಗ್ಳು ಕಿರಿದಾಗಿದ್ದು ಹೂಳು ತುಂಬಿಕೊಂಡಿದೆ. ಪರಿಣಾಮ ವಾಗಿ ಚರಂಡಿ ನೀರು ರಸ್ತೆಯ ಮೇಲೆ ಹರಿಯುವುದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ತೆಕ್ಕಟ್ಟೆ ಕೊಮೆ ಇತ್ತೀಚೆಗಷ್ಟೆ ಕಾಂಕ್ರಿಟ್ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ಹೆದ್ದಾರಿಯಿಂದ ಸುಮಾರು 300 ಮೀ. ಒಳಗೆ ಎರಡೂ ಬದಿ ಒಳ ಚರಂಡಿ ನಿರ್ಮಿಸಲಾಗಿದೆಯಾದರೂ ಕೃಷಿ ಭೂಮಿಗಳು ಇರುವ ಭಾಗದಲ್ಲಿ ಈ ಕಾರ್ಯ ಆಗಿಲ್ಲ. ಪರಿಣಾಮ ಹೆದ್ದಾರಿಯಿಂದ ಬಂದ ನೀರು ಕೃಷಿ ಭೂಮಿಗೆ ನುಗ್ಗುವ ಸಾಧ್ಯತೆ ಇದೆ.
ಕೃತಕ ನೆರೆಯ ಭೀತಿ
ಗ್ರಾಮದ ಪ್ರಮುಖ ಭಾಗದಲ್ಲಿ ರುವ ಅಂಗಡಿ ಮುಂಗಟ್ಟು ಗಳ ಎದುರು ಮಳೆಗಾಲದಲ್ಲಿ ಸರಾಗವಾಗಿ ನೀರು ಹರಿದು ಹೋಗಲು ಅವಕಾಶವಿಲ್ಲ. ಇದರಿಂದ ಕೃತಕ ನೆರೆ ಸೃಷ್ಟಿಯಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೂ ನಡೆದಾಡಲು ಸಾಧ್ಯವಾಗದೇ ಹೆದ್ದಾರಿಯಲ್ಲೇ ನಡೆಯಬೇಕಾದ ಕಷ್ಟವಿದೆ.
ಸಮಸ್ಯೆ ಬಗ್ಗೆ ಗಮನಹರಿಸಲು ಸೂಚನೆ
ಮುಂಗಾರು ಆರಂಭದ ಪೂರ್ವದಲ್ಲಿಯೇ ಗ್ರಾ.ಪಂ. ವ್ಯಾಪ್ತಿಯಲ್ಲಿ ಬೆಳೆದು ನಿಂತ ಗಿಡಗಂಟಿಗಳ ತೆರವು ಕಾರ್ಯ ಹಾಗೂ ಒಳ ಚರಂಡಿ ಸಮಸ್ಯೆಗಳಿರುವ ಕಡೆ ಗಮನಹರಸಿ ಪರಿಹಾರ ಕ್ರಮ ಜರುಗಿಸುವಂತೆ ಸೂಚಿಸಲಾಗಿದೆ.
– ವೀರಶೇಖರ್, ತೆಕ್ಕಟ್ಟೆ ಪಿಡಿಒ
ಕ್ರಮ ಅಗತ್ಯ
ಗ್ರಾ.ಪಂ.ವ್ಯಾಪ್ತಿಯಲ್ಲಿ ಮಳೆಗಾಲದ ಸಿದ್ಧತೆ ಇನ್ನೂ ಆರಂಭಗೊಂಡಿಲ್ಲ .ರಾ.ಹೆ.66 ರಿಂದ ಬರುವ ಅಪಾರ ಪ್ರಮಾಣದ ನೀರು ಕೃಷಿ ಭೂಮಿಯನ್ನು ಆವರಿಸುವ ಸಾಧ್ಯತೆ ಇದೆ. ತೋಡುಗಳ ಹೂಳೆತ್ತುವ ಬಗ್ಗೆ ಸಂಬಂಧಪಟ್ಟ ಸ್ಥಳೀಯಾಡಳಿತ ಕ್ರಮ ಕೈಗೊಳ್ಳಬೇಕಾಗಿದೆ.
– ವಿಟಲ್ ದೇವಾಡಿಗ, ತೆಕ್ಕಟ್ಟೆ ಕೃಷಿಕರು.
– ಲೋಕೇಶ್ ಆಚಾರ್ಯ ತೆಕ್ಕಟ್ಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.