ಗೋರಖ್ಪುರ ಆಸ್ಪತ್ರೆ ದುರಂತ: ಡಾ. ಕಫೀಲ್ ಖಾನ್ ಸಹೋದರನಿಗೆ ಗುಂಡು
Team Udayavani, Jun 11, 2018, 11:30 AM IST
ಲಕ್ನೋ : 2017ರ ಆಗಸ್ಟ್ನಲ್ಲಿ ಉತ್ತರ ಪ್ರದೇಶದ ಗೋರಖ್ಪುರದ ಬಿಆರ್ಡಿ ಮೆಡಿಕಲ್ ಕಾಲೇಜಿನಲ್ಲಿ ಆಮ್ಲಜನಕ ಸಿಲಿಂಡರ್ಗಳಿಲ್ಲದ ಕಾರಣಕ್ಕೆ 63 ಶಿಶುಗಳು ಅಸುನೀಗಿದ ಪ್ರಕರಣದ ಓರ್ವ ಆರೋಪಿಯಾಗಿರುವ ಡಾ. ಕಫೀಲ್ ಖಾನ್ ಅವರ ಸಹೋದರ ಕಾಶೀಫ್ ಜಮೀಲ್ ಎಂಬವರ ಮೇಲೆ ಕೆಲವು ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವುದಾಗಿ ವರದಿಯಾಗಿದೆ.
ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ 34ರ ಹರೆಯದ ಕಾಶೀಫ್ ಜಮೀಲ್ ರನ್ನು ಒಡನೆಯೇ ಖಾಸಗಿ ಆಸ್ಪತ್ರೆಗೆ ಒಯ್ಯಲಾಗಿದ್ದು ಅವರ ಸ್ಥಿತಿ ಗಂಭೀರವಿದೆ ಎಂದು ತಿಳಿದು ಬಂದಿದೆ.
ನಿನ್ನೆ ಭಾನುವಾರ ರಾತ್ರಿ 11 ಗಂಟೆಯ ಸುಮಾರಿಗೆ ಜಮೀಲ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದರು. ಪರಿಣಾಮವಾಗಿ ಅವರ ಕೈ, ಕುತ್ತಿಗೆ ಮತ್ತು ಮುಖಕ್ಕೆ ತೀವ್ರ ಸ್ವರೂಪದ ಗಾಯಗಳಾದವು ಎಂದು ಕೋತ್ವಾಲಿ ಪೊಲೀಸ್ ಠಾಣೆಯ ಪ್ರಭಾರಾಧಿಕಾರಿ ಘನಶ್ಯಾಮ್ ತಿವಾರಿ ತಿಳಿಸಿದ್ದಾರೆ. ಈ ಗುಂಡಿನ ದಾಳಿಯ ಬಗ್ಗೆ ಈ ತನಕ ಯಾವುದೇ ದೂರು ದಾಖಲಾಗಿಲ್ಲ ಎಂದವರು ಹೇಳಿದರು.
ಆ್ಯಕ್ಟಿವಾ ಸ್ಕೂಟರ್ನಲ್ಲಿ ಬಂದಿದ್ದ ದುಷ್ಕರ್ಮಿಗಳು ಜಮೀಲ್ ಅವರ ಮೇಲೆ ಮೂರು ಸುತ್ತಿನ ಗುಂಡು ಹಾರಾಟ ನಡೆಸಿ ಕೂಡಲೇ ಸ್ಥಳದಿಂದ ಪರಾರಿಯಾದರು ಎಂದವರು ತಿಳಿಸಿದರು.
ಗೋರಖ್ಪುರ ಆಸ್ಪತ್ರೆಯಲ್ಲಿ ಆಮ್ಲಜನಕದ ಸಿಲಿಂಡರ್ಗಳು ಇಲ್ಲದ ಕಾರಣಕ್ಕೆ 63 ಶಿಶುಗಳ ಸಾವು ಸಂಭವಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಎಂಟು ತಿಂಗಳ ತರುವಾಯ, ಈ ವರ್ಷ ಎಪ್ರಿಲ್ನಲ್ಲಿ ಜಮೀಲ್ ಅವರ ಸಹೋದರ ಡಾ. ಕಫೀಲ್ ಖಾನ್ ಅವರು ಅಲಹಾಬಾದ್ ಹೈಕೋರ್ಟಿನಿಂದ ಜಾಮೀನು ಪಡೆದು ಹೊರಬಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.