ರೈಲಿನ ಎಸಿ ಸರಿಯಿಲ್ಲವೆಂದು ಪ್ರಯಾಣಿಕರಿಂದ ಪ್ರತಿಭಟನೆ
Team Udayavani, Jun 11, 2018, 12:29 PM IST
ಮಾಲ್ಡಾ , ಪಶ್ಚಿಮ ಬಂಗಾಲ : ಇಲ್ಲಿ ಮಾಲ್ಡಾ ಟೌನ್ ಸ್ಟೇಶನ್ನಲ್ಲಿ ಇಂದು ನಸುಕಿನ 4 ಗಂಟೆಯ ವೇಳೆಗೆ ಡಿಎನ್ ಬ್ರಹ್ಮಪುತ್ರಾ ಮೇಲ್ ರೈಲಿನ ಪ್ರಯಾಣಿಕರು ಹವಾನಿಯಂತ್ರಣ ಘಟಕ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬ ಕಾರಣಕ್ಕೆ ಪ್ರತಿಭಟನೆ ನಡೆಸಿದರು. ಪರಿಣಾಮವಾಗಿ ಈ ಮಾರ್ಗದಲ್ಲಿನ ಹಲವು ರೈಲುಗಳ ಸಂಚಾರ ತೀವ್ರವಾಗಿ ಬಾಧಿತವಾಯಿತು.
ಗುವಾಹಟಿಯಿಂದ ದಿಲ್ಲಿಗೆ ಹೋಗುತ್ತಿದ್ದ ಡಿಎನ್ ಬ್ರಹ್ಮಪುತ್ರಾ ಮೇಲ್ ರೈಲಿನ ಎಸಿ ವ್ಯವಸ್ಥೆ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಪ್ರಯಾಣಿಕರು ಸಿಲಿಗುಡಿ ಮತ್ತು ಮಾಲ್ಡಾ ರೈಲು ನಿಲ್ದಾಣದಲ್ಲಿ ಅಧಿಕೃತ ದೂರು ದಾಖಲಿಸಿದರು. ಆದರೆ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಲಿಲ್ಲ. ಸಿಟ್ಟಿಗೆದ ಪ್ರಯಾಣಿಕರು ರೈಲಿನ ತುರ್ತು ನಿಲುಗಡೆಯ ಚೈನ್ ಎಳೆದು ರೈಲನ್ನು ನಿಲ್ಲಿಸಿ ಹೊರಬಂದು ಪ್ರತಿಭಟನೆ ನಡೆಸಿದರು.
ಕೊನೆಗೂ ರೈಲ್ವೇ ಅಧಿಕಾರಿಗಳು ಸ್ವಲ್ಪ ಮಟ್ಟಿನ ಎಸಿ ದುರಸ್ತಿ ಕಾರ್ಯ ನಡೆಸಿದರು. 8 ಗಂಟೆಯ ಹೊತ್ತಿಗೆ ರೈಲು ತನ್ನ ಮುಂದಿನ ಪ್ರಯಾಣವನ್ನು ಬೆಳೆಸಿತು ಎಂದು ಜಿಆರ್ಪಿ ಪ್ರಭಾರ ಇನ್ಸ್ಪೆಕ್ಟರ್ ಪಾರ್ಥ ಚಂದಾ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
Puttur: ಮೊದಲ ಕಿನ್ನಿಪಿಲಿಗೆ 48 ವರ್ಷ!; 15ರಿಂದ 75ಕ್ಕೇರಿದ ಟೀಮ್
Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ
Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ
Mangaluru: ಮುಮ್ತಾಜ್ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.