ಕೆರೆಗಳಿಗೆ ನೀರು ಹರಿಸುವ ಯೋಜನೆಗೆ ಚಾಲನೆ


Team Udayavani, Jun 15, 2018, 1:51 PM IST

m2-kere.jpg

ಹುಣಸೂರು: ಕೊಡಗಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಲಕ್ಷ್ಮಣತೀರ್ಥ ನದಿ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಆರಂಭದಲ್ಲೇ ಏತ ನೀರಾವರಿ ಯೋಜನೆಯ ಮೂಲಕ ಕೆರೆಗಳಿಗೆ ನೀರು ತುಂಬಿಸುವುದಾಗಿ ಶಾಸಕ ಎಚ್‌.ವಿಶ್ವನಾಥ್‌ ತಿಳಿಸಿದರು.

ತಾಲೂಕಿನ ರಾಮಪಟ್ಟಣ ಬಳಿ ಇರುವ ಪಂಪ್‌ ಹೌಸ್‌ನಲ್ಲಿ ಕೆರೆಗಳಿಗೆ ನೀರು ಹರಿಸುವ ಯೋಜನೆಗೆ ಸ್ವಿಚ್‌ ಆನ್‌ ಮಾಡಿ ಚಾಲನೆ ನೀಡಿ ಮಾತನಾಡಿದ ಅವರು, ತಾಲೂಕಿನ ಜೀವನದಿ ಲಕ್ಷ್ಮಣತೀರ್ಥ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಮರದೂರು ಹಾಗೂ ಬೀಜಗನಹಳ್ಳಿ ಏತ ನೀರಾವರಿ ಯೋಜನೆ ಮೂಲಕ ಕೆರೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಕೃಷಿಗೂ ನೀರು: ಈಗಾಗಲೇ ಹನಗೋಡು ಅಣೆಕಟ್ಟೆಯಿಂದಲೂ ಮುಖ್ಯನಾಲೆಗೆ ನೀರು ಹರಿಸಲಾಗಿದೆ. ಹುಣಸೂರು ಬಳಿ ನದಿ ದಡದಲ್ಲಿ ನಿರ್ಮಿಸಿರುವ ಮರದೂರು ಮತ್ತು ಬೀಜಗನಹಳ್ಳಿ ಏತ ನೀರಾವರಿ ಘಟಕಗಳಿಂದ ಕೆರೆಗಳಿಗೆ ಹಾಗೂ ಈ ಭಾಗದ  ಕೃಷಿ ಚಟುವಟಿಕೆಗೆ ನೀರೊದಗಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುತ್ತಿದೆ. ಇದಲ್ಲದೆ ಹೊಸರಾಮನಹಳ್ಳಿ ಬಳಿ ನದಿಗೆ ನಿರ್ಮಿಸಿರುವ ಏತ ನೀರಾವರಿ ಮೂಲಕವೂ ಜೀನಹಳ್ಳಿ ಹಾಗೂ ಬಿಳಿಕೆರೆ-ಹಳೇಬೀಡು ಕೆರೆಗಳಿಗೂ ನೀರು ತುಂಬಿಸಲಾಗುತ್ತಿದೆ ಎಂದರು.

ಹಳೆ ಯೋಜನೆಗೂ ಕಾಯಕಲ್ಪ: ಇಲ್ಲಿನ ಮತ್ತೂಂದು ಹಳೆಯ ಏತನೀರಾವರಿ ಘಟಕ ದುಸ್ಥಿತಿಯಲ್ಲಿರುವ ಬಗ್ಗೆ ಮಾಹಿತಿ ಪಡೆದ ಶಾಸಕರು ಈ ಘಟಕಕ್ಕೆ ಕಾಯಕಲ್ಪ ನೀಡಿ ಈ ಭಾಗದ ಜಮೀನಿಗೂ ನೀರೊದಗಿಸಬಹುದಾಗಿದ್ದು, ಇದಕ್ಕಾಗಿ ಶೀಘ್ರ ಪುನಃಶ್ಚೇತನಗೊಳಿಸಲು ಅಂದಾಜುಪಟ್ಟಿ ಹಾಗೂ ನೀಲನಕ್ಷೆಯನ್ನು ತಯಾರಿಸಬೇಕೆಂದು ಸಣ್ಣ ನೀರಾವರಿ ಇಲಾಖೆಯ ಎಇಇ ಶ್ರೀನಿವಾಸಲುಗೆ ಸೂಚಿಸಿದರು. 

ಈ ವೇಳೆ ಮರದೂರು ಗ್ರಾಪಂ ಅಧ್ಯಕ್ಷೆ ಸುಜಾತ, ಮಾಜಿ ಅಧ್ಯಕ್ಷೆ ಶಕುಂತಲ, ಜಿಪಂಮಾಜಿ ಸದಸ್ಯ ಬಿ.ಕೆ.ಪರಮೇಶ್‌, ಯುವ ಜೆಡಿಎಸ್‌ ಅಧ್ಯಕ್ಷ ಲೋಕೇಶ್‌, ಮುಖಂಡರಾದ ಶಿವಶೇಖರ್‌, ಹೊನ್ನಯ್ಯ, ವೆಂಕಟೇಶಾಚಾರಿ, ಪ್ರಕಾಶ್‌, ಸಮಿವುಲ್ಲ, ಬಾಬು, ಸಣ್ಣ ನೀರಾವರಿ ಇಲಾಖೆಯ ಎಇಇ ಶ್ರೀನಿವಾಸ್‌, ಎಇ ಕೃಷ್ಣಮೂರ್ತಿ, ಸೆಸ್ಕ್ ಎಇಇಗಳಾದ ಮಹದೇವಯ್ಯ, ಸಿದ್ದಯ್ಯ, ಜೆಇ ಪುರುಷೋತ್ತಮ್‌ ಹಾಜರಿದ್ದರು.

ರೈತರಿಂದ ತರಾಟೆ: ಇದೇ ವೇಳೆ ಯೋಜನೆಯಲ್ಲಿ ಕಳಪೆ ಪೈಪ್‌, ಕಡಿಮೆ ಸಾಮರ್ಥ್ಯದ ಪಿವಿಸಿಪೈಪ್‌ ಅಳವಡಿಸಿದ್ದರಿಂದ ಅಲ್ಲಲ್ಲಿ ಪೈಪ್‌ಗ್ಳು ಒಡೆದು ಹೋಗಿದೆ. ಇದರಿಂದ ಕೆರೆಗಳು ಭರ್ತಿಯಾಗಲಿಲ್ಲ, ಅನಕೃತವಾಗಿ ಮಧ್ಯದಲ್ಲೇ ಕೆಲ ರೈತರಿಗೆ ಪೈಪ್‌ ಮೂಲಕ ನೀರು ಹರಿಸುತ್ತಿದ್ದಾರೆ. ಇದಕ್ಕೆಲ್ಲ ನೀವೇ ಹೊಣೆ ಎಂದು ಎಂಜಿನಿಯರ್‌ಗಳನ್ನು ರೈತ ಮುಖಂಡರಾದ ಶಿವಶೇಖರ್‌ ರೈತರು ತರಾಟೆ ತೆಗೆದುಕೊಂಡರು. 

ಟಾಪ್ ನ್ಯೂಸ್

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

BCCI: ಇಂದು ಬಿಸಿಸಿಐ ವಾರ್ಷಿಕ ಸಭೆ

BCCI: ಇಂದು ಬಿಸಿಸಿಐ ವಾರ್ಷಿಕ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.