ಮುಂದುವರಿದ ಕಾಡಾನೆ ದಾಂದಲೆ
Team Udayavani, Jun 16, 2018, 12:47 PM IST
ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಂಚಿನ ಗ್ರಾಮಗಳಲ್ಲಿ ಕಾಡಾನೆಗಳ ದಾಂದಲೆ ಮುಂದುವರೆದಿದ್ದು, ಶುಕ್ರವಾರ ಬೆಳಗಿನ ಜಾವ ತಾಲೂಕಿನ ನೇರಳಕುಪ್ಪೆ ಗ್ರಾಮದಲ್ಲಿ ತೋಟದ ಬೆಳೆಗಳನ್ನು ತಿಂದು-ತುಳಿದು ತೆಂಗಿನ ಮರ ಸಿಗಿದು ಹಾಕಿರುವ ಘಟನೆ ನಡೆದಿದೆ.
ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ನೇರಳಕುಪ್ಪೆ ಗ್ರಾಮದ ಗುರುರಾಜ್ ಮತ್ತು ಕೃಷ್ಣಮೂರ್ತಿ ಇತರರ ತೋಟಕ್ಕೆ ನುಗ್ಗಿದ ಒಂಟಿ ಸಲಗ ಮನೆ ಮಂದಿಯನ್ನು ಗಾಬರಿಗೊಳಿಸಿ ನಂತರ ಮನೆ ಬಳಿ ಇದ್ದ ಮಾವಿನ ಮರವನ್ನು ಬುಡ ಸಮೇತ ಉರುಳಿಸಿದೆ. ಒಂದು ಸಸಿ ಸೇರಿದಂತೆ ಮೂರು ತೆಂಗಿನ ಮರವನ್ನು ತಿಂದು, ಸುಳಿಯನ್ನು ಸಿಗಿದು ಹಾಕಿದೆ.
ಇದೇ ಗ್ರಾಮದ ಹಲಗೇಗೌಡರಿಗೆ ಸೇರಿದ ಶುಂಠಿ ಮತ್ತು ಜೋಳದ ಬೆಳೆಯನ್ನು ತುಳಿದು ನಾಶಪಡಿಸಿದೆ. ಉದ್ಯಾನವನದ ವೀರನಹೊಸಹಳ್ಳಿ ವಲಯದಿಂದ ಚಂದನಗಿರಿ ವರೆಗೆ ರೈಲ್ವೆ ಕಂಬಿಯ ತಡೆಗೋಡೆ ನಿರ್ಮಿಸಲಾಗಿದೆ. ಇದೀಗ ಹುಣಸೂರು ವಲಯದ ನೇರಳಕುಪ್ಪೆ-ಕಾಳಬೂಚನಹಳ್ಳಿ ಭಾಗದಿಂದ ಕಾಡಾನೆಗಳು ಟ್ರಂಚ್(ಆನೆಕಂದಕ)ದಾಟಿ ಹೊರಬರಲಾರಂಭಿಸಿದ್ದು,
ಮುಂದೆ ಜೋಳ,ರಾಗಿ ಮತ್ತಿತರ ದ್ವಿಧಳ ಧಾನ್ಯ ಬೆಳೆಗಳು ಕಾಡಾನೆಗಳ ಪಾಲಾಗಿರುವುದರಿಂದ ತಕ್ಷಣವೇ ತಡೆಗೋಡೆ ನಿರ್ಮಿಸಬೇಕು ಇಲ್ಲವೇ ಆನೆ ಕಾಯಲು ಹೆಚ್ಚಿನ ಸಿಬ್ಬಂದಿ ನೇಮಿಸಬೇಕೆಂದು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
Mysuru Dasara: ಖಾಸಗಿ ದರ್ಬಾರ್ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ
MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್ ಎದುರಿಸಿ ಗೆಲ್ಲುವೆ: ಸಿಎಂ
MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ಸಾಧ್ಯತೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bengaluru: ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್ ಕದಿಯಲು ಸುಪಾರಿ!
Pejawar Swamiji; ಸರಕಾರದ ನಿಯಂತ್ರಣದಿಂದ ದೇವಸ್ಥಾನಗಳು ಮುಕ್ತವಾಗಲಿ
IPL: ವಿದೇಶಿ ಆಟಗಾರರಿಗೆ ಇನ್ನು ಕೋಟಿ ಕೋಟಿ ಹಣ ಪಡೆಯಲು ಸಾಧ್ಯವಿಲ್ಲ; ಹೀಗಿದೆ ಹೊಸ ನಿಯಮ
Sirsi: ಯಕ್ಷಗಾನದ ಪ್ರಸಿದ್ಧ ಭಾಗವತ ವಿದ್ವಾನ್ ಗಣಪತಿ ಭಟ್ಟ ಗೆ ಚಂದುಬಾಬು ಪ್ರಶಸ್ತಿ
SLvsNZ: ಲಂಕಾ ಸ್ಪಿನ್ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ ಕಿವೀಸ್ ಗೆ ಸರಣಿ ಸೋಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.