ಸಿಬಂದಿ ಕೊರತೆ ಇದ್ದರೂ ಮಳೆಗಾಲಕ್ಕೆ ಸಿದ್ಧ
Team Udayavani, Jun 17, 2018, 6:00 AM IST
ಪಡುಬಿದ್ರಿ: ಸಿಬಂದಿ ಕೊರತೆ ಇದ್ದರೂ, ಮಳೆಗಾಲದ ಸಾಂಕ್ರಾಮಿಕ ಕಾಯಿಲೆಗಳನ್ನು ತಡೆಗಟ್ಟಲು ಮುದರಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರವು ಸಿದ್ಧವಾಗಿದೆ. ಈ ಆರೋಗ್ಯ ಕೇಂದ್ರ ಮುದರಂಗಡಿ, ಸಾಂತೂರು, ಪಲಿಮಾರು, ನಂದಿಕೂರು ಹಾಗೂ ಎಲ್ಲೂರು ಗ್ರಾಮಗಳ ವ್ಯಾಪ್ತಿಯನ್ನು ಹೊಂದಿದೆ. ಈ ಆರೋಗ್ಯ ಕೇಂದ್ರದಲ್ಲಿ ಮತ್ತು ಆರು ಉಪಕೇಂದ್ರಗಳ ಪೈಕಿ ಎಲ್ಲೂರು “ಬಿ’ ಹಾಗೂ ಸಾಂತೂರು ಉಪ ಕೇಂದ್ರಗಳಲ್ಲಿ ಕಿರಿಯ ಆರೋಗ್ಯ ಸಹಾಯಕಿಯರ ಹುದ್ದೆಗಳು ಇನ್ನೂ ತುಂಬಿಲ್ಲ.
ಮಲೇರಿಯಾ ಮಾಸಾಚರಣೆ
ಜೂನ್ ತಿಂಗಳಿನಿಂದ ಮಲೇರಿಯಾ ಮಾಸಾಚರಣೆ ಯನ್ನು ಆರೋಗ್ಯ ಕೇಂದ್ರದಿಂದ ಆರಂಭಿಸಲಾಗಿದೆ. ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರ ಸಹಕಾರದಿಂದ ವಿವಿಧ ಅಂಗನವಾಡಿಗಳಲ್ಲಿ ಮಲೇರಿಯಾ ಕುರಿತಾದ ಮಾಹಿತಿ, ಪ್ರತಿಬಂಧಕವಾಗಿ ಸಾರ್ವಜನಿಕರು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗೆಗೆ ವಿವರಿಸಲಾಗುತ್ತಿದೆ.
ಮಲೇರಿಯಾ, ಡೆಂಗ್ಯೂ ವರದಿಯಾಗಿಲ್ಲ
ಮುದರಂಗಡಿ ಗ್ರಾ. ಪಂ. ಪ್ರದೇಶಗಳಲ್ಲಿ ಯಾವುದೇ ಭಾರೀ ಕೊಳಚೆ ಸಮಸ್ಯೆಗಳಿಲ್ಲ. ಹಾಗಾಗಿ ಪ್ರಾ. ಆ. ಕೇಂದ್ರ ವ್ಯಾಪ್ತಿಯಲ್ಲಿ ಸೊಳ್ಳೆ ಉತ್ಪಾದನೆಯ ತಾಣಗಳೂ ಇಲ್ಲ. ಇದುವರೆಗೆ ಮಲೇರಿಯಾ ಸೇರಿದಂತೆ ಯಾವುದೇ ಜ್ವರಬಾಧೆ ವರದಿಯಾಗಿಲ್ಲ. ಕಳೆದ ವರ್ಷವೂ ಪ್ರಾಥಮಿಕ ಆರೋಗ್ಯ ಕೇಂದ್ರ ಮುದರಂಗಡಿಯ ವ್ಯಾಪ್ತಿಯಲ್ಲಿ ಮಲೇರಿಯಾ, ಡೆಂಗ್ಯೂ ಜ್ವರಬಾಧೆ ಪ್ರಕರಣ ಗಳು ವರದಿಯಾಗಿಲ್ಲ.
ವೈದ್ಯರ ಲಭ್ಯತೆ
ದಿನಕ್ಕೆ 30 – 40 ಹೊರ ರೋಗಿಗಳನ್ನು ಪರಿಶೀಲಿಸಲಾಗುತ್ತಿದೆ. ಔಷಧಗಳ ಪೂರೈಕೆ ಸಮರ್ಪಕವಾಗಿದೆ. ಔಷಧಗಳ ವ್ಯತ್ಯಯವಾದಲ್ಲಿ ರಾಷ್ಟ್ರೀಯ ಗ್ರಾಮೀಣ ಹೆಲ್ತ್ ಮಿಷನ್ನಡಿ ಆರೋಗ್ಯ ರಕ್ಷಾ ಸಮಿತಿಯಡಿ ಜನೌಷಧಿ ಕೇಂದ್ರಗಳಿಂದ ಖರೀದಿಸಿ ರೋಗಿಗಳಿಗೆ ನೀಡಲಾಗುತ್ತಿದೆ. ಪ್ರಾ. ಆ. ಕೇಂದ್ರದಲ್ಲಿ 6 ಬೆಡ್ಗಳಿದ್ದು ಹೊರ ರೋಗಿಗಳಿಗೆ ಅಗತ್ಯವಿದ್ದಲ್ಲಿ ಬೆಳಗ್ಗೆಯಿಂದ ಸಂಜೆ ವರೆಗೆ ಶುಶ್ರೂಷೆಯನ್ನು ನೀಡಲಾಗುತ್ತಿದೆ. ಆರೋಗ್ಯಾಧಿಕಾರಿ ಅವರೂ ರಾತ್ರಿ ತುರ್ತು ಸಂದರ್ಭಗಳಲ್ಲಿ ಲಭ್ಯರಿರುತ್ತಾರೆ.
ಸಿಬಂದಿ ಕೊರತೆ
ಕೇಂದ್ರದಲ್ಲಿ ಸಿಬಂದಿ ಕೊರತೆ ಇದೆ. ಆದರೂ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸೇವೆಯನ್ನು ನೀಡಲು ನಮ್ಮ ಆರೋಗ್ಯ ಕೇಂದ್ರ ಸಜ್ಜಾಗಿದೆ.
– ಡಾ| ಸುಬ್ರಹ್ಮಣ್ಯ ಪ್ರಭು,
ವೈದ್ಯಾಧಿಕಾರಿ
ಯಾವೆಲ್ಲ ಸಿಬಂದಿ ಇಲ್ಲ?
ಮುದರಂಗಡಿ ಪ್ರಾ. ಆ. ಕೇಂದ್ರದಲ್ಲಿ ಮೂವರು ಕಿರಿಯ ಪುರುಷ ಆರೋಗ್ಯ ಸಹಾಯಕರು, ಓರ್ವ ಹಿರಿಯ ಪುರುಷ ಆರೋಗ್ಯ ಸಹಾಯಕ, ಎಫ್ಡಿಸಿ ಹಾಗೂ ಫಾರ್ಮಸಿಸ್ಟ್ ಗಳ ಕೊರತೆ ಇದೆ.
– ಆರಾಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ
Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.