ಎಲಿಮಲೆ ಶಾಲೆ: ಬಹುಮತ ಸಿಗದೆ ಸಮ್ಮಿಶ್ರ ಸರಕಾರಕ್ಕೆ ಜೈ!


Team Udayavani, Jun 17, 2018, 12:50 PM IST

17-june-7.jpg

ಸುಳ್ಯ : ಮುಖ್ಯಮಂತ್ರಿ ಹುದ್ದೆಗೆ ಸ್ಪರ್ಧಿಸಿದ್ದು ಮೂವರು. ಅವರ್ಯಾರಿಗೂ ಬಹುಮತ ಸಿಗಲಿಲ್ಲ. ಕೊನೆಗೆ ಸ್ಪರ್ಧಿಗಳಿಬ್ಬರ ಮಧ್ಯೆ ಪರಸ್ಪರ ಒಮ್ಮತ ಏರ್ಪಟ್ಟು ಸಮ್ಮಿಶ್ರ ಸರಕಾರಕ್ಕೆ ಜೈ ಅಂದು ಬಿಟ್ಟರು! ಇದು ಯಾವುದೋ ವಿಧಾನಸಭೆ ಅಥವಾ ಪಂಚಾಯತ್‌ ಮಟ್ಟದಲ್ಲಿ ನಡೆದ ಚುನಾವಣೆಯೊಂದರಲ್ಲಿ ಆದ ಬೆಳವಣಿಗೆ ಅಲ್ಲ. ಶಾಲೆಯೊಂದರ ಮಂತ್ರಿ ಮಂಡಲಕ್ಕೆ ನಡೆದ ಚುನಾವಣೆ ಫಲಿತಾಂಶವಿದು!

ಎಲಿಮಲೆ ಜ್ಞಾನದೀಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶೇಷ, ವಿಶಿಷ್ಟ ರೀತಿಯಲ್ಲಿ ಮಂತ್ರಿಮಂಡಲ ರಚಿಸಲಾಯಿತು. ಮುಖ್ಯಮಂತ್ರಿ ಸ್ಥಾನಕ್ಕೆ ಚುನಾವಣೆ, ಅಧಿಕಾರ ಹಂಚಿಕೆ ನಡೆದು ಗಮನ ಸೆಳೆಯಿತು. ಇಡೀ ವ್ಯವಸ್ಥೆ ಪ್ರಜಾಪ್ರಭುತ್ವದ ಮಾದರಿಯಲ್ಲಿ ನಡೆಸಲು ಇಲ್ಲಿನ ಶಿಕ್ಷಕ ವರ್ಗ ಸಿಬಂದಿಯಾಗಿ ಕರ್ತವ್ಯ ನಿರ್ವಹಿಸಿದರು.

ಮತ ನೀಡಲು ಪ್ರಚಾರ
ಮೂವರು ವಿದ್ಯಾರ್ಥಿಗಳು ಅಭ್ಯರ್ಥಿ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಅವರಿಗೆ ಚಿಹ್ನೆ ನೀಡಲಾಯಿತು. ತನ್ನ ಬೆಂಬಲಿಗರೊಂದಿಗೆ ಎಲ್ಲ ತರಗತಿಯಲ್ಲಿ ಸಂಚರಿಸಿ ಮತ ಚಲಾಯಿಸುವಂತೆ ಪ್ರಚಾರ ನಡೆಸಿದರು. ಮತ ಚಲಾವಣೆಗೆ ಗುರುತಿನ ಚೀಟಿ ನೀಡಲಾಯಿತು. ಅನಂತರ ರಹಸ್ಯ ಮತದಾನ ನಡೆಯಿತು.

ಸಮ್ಮಿಶ್ರ ಸರಕಾರ..!
ಮತದಾನದ ಬಳಿಕ ಮತ ಎಣಿಕೆ ಪ್ರಕ್ರಿಯೆ ನಡೆಯಿತು. ಮೂವರು ಸ್ಪರ್ಧಿಗಳ ಪೈಕಿ ಯಾರಿಗೂ ಬಹುಮತ ಸಿಗದೆ ಅತಂತ್ರ ಸರಕಾರ ರಚನೆಯಾಯಿತು. ಈ ವೇಳೆ ಸ್ಪರ್ಧಿಗಳ ಪೈಕಿ ಹತ್ತನೇ ತರಗತಿಯ ವೀಕ್ಷಿತಾ ಮತ್ತು ಸ್ನೇಹಾ ಅವರಿಬ್ಬರು ಪರಸ್ಪರ ಒಪ್ಪಂದ ಮಾಡಿಕೊಂಡು, ಬಹುಮತ ಸಾಬೀತು ಪಡಿಸಿದರು. ಇಲ್ಲಿ ಒಬ್ಬ ಅಭ್ಯರ್ಥಿ ಮತ್ತೊಬ್ಬ ಅಭ್ಯರ್ಥಿಗೆ ತನಗೆ ಸಿಕ್ಕ ಮತಗಳ ಬೆಂಬಲ ವ್ಯಕ್ತಪಡಿಸಿ, ಬಹುಮತ ಶ್ರುತಪಡಿಸಿದರು. ಕೊನೆಗೆ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬಂತು.

ಅಧಿಕಾರ ಹಂಚಿಕೆ
ಮೊದಲ ಅವಧಿಯಲ್ಲಿ ವೀಕ್ಷಿತ್‌ ಎಂ.ಎನ್‌. ಮುಖ್ಯಮಂತ್ರಿಯಾದರೆ, ಎರಡನೆ ಅವಧಿಗೆ ಸ್ನೇಹಾ ಕೆ.ಎಂ. ಅವರು ಮುಖ್ಯ ಮಂತ್ರಿ ಆಗಿ ಕಾರ್ಯ ನಿರ್ವಹಿಸಲು ನಿರ್ಧರಿಸಲಾಯಿತು. ಪ್ರಥಮ ಅವಧಿಯಲ್ಲಿ ಸ್ನೇಹಾ ಅವರಿಗೆ ಗೃಹಮಂತ್ರಿ ಜವಾಬ್ದಾರಿ ನೀಡಲು ಮುಖ್ಯಮಂತ್ರಿ ನಿರ್ಧರಿಸಿದ್ದೂ ಆಯಿತು.

ಮಂಗಳವಾರ ಪ್ರಮಾಣವಚನ
ನೂತನ ಮುಖ್ಯಮಂತ್ರಿ ಮಂಗಳವಾರ ಪ್ರಮಾಣ ವಚನ ಮಾಡುತ್ತಾರೆ. ಇಲ್ಲಿ ಮುಖ್ಯಮಂತ್ರಿ ತನ್ನ ಅಧಿಕಾರದ ವ್ಯಾಪ್ತಿಯೊಳಗೆ 330 ಶಾಸಕರ ಪೈಕಿ ತನಗೆ ಸೂಕ್ತ ಎನಿಸಿದವರಿಗೆ ಮಂತ್ರಿ ಸ್ಥಾನ ನೀಡುತ್ತಾರೆ. ಅದು ಅವರ ವಿವೇಚನೆಗೆ ಬಿಟ್ಟದ್ದು.

330 ಶಾಸಕರು..!
ಇಲ್ಲಿ 330 ವಿದ್ಯಾರ್ಥಿಗಳಿದ್ದಾರೆ. ಅವರೆ ಲ್ಲರೂ, ಒಂದೊಂದು ಕ್ಷೇತ್ರದ ಶಾಸಕರಂತೆ ಅವರನ್ನು ಗುರುತಿಸಲಾಯಿತು. ಅವರು
ಮುಖ್ಯಮಂತ್ರಿ ಅಭ್ಯರ್ಥಿಗಳನ್ನು ಆರಿಸುವ ಹಕ್ಕು ಹೊಂದಿದ್ದರು. ಇಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಸ್ಥಾನಕ್ಕೆ ಚುನಾವಣೆ ನಿಗದಿ ಪಡಿಸಲಾಯಿತು. 330 ಮತಗಳ ಪೈಕಿ 200 ಮತ ಪಡೆದ ಅಭ್ಯರ್ಥಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಲು ಅರ್ಹತೆ ಹೊಂದಿರುತ್ತಾನೆ ಎಂಬ ಮಾನದಂಡ ರೂಪಿಸಲಾಗಿತ್ತು.

ಮಾದರಿ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ನಡೆಯುವ ರೀತಿಯಲ್ಲಿಯೇ ಶಾಲೆಯಲ್ಲಿಯೂ ಮಂತ್ರಿ ಮಂಡಲ ರಚಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಚುನಾವಣೆಯ ಬಗ್ಗೆ ಅರಿತುಕೊಳ್ಳಲು ಸಾಧ್ಯವಾಗುತ್ತದೆ. ಹೀಗಾಗಿ ಅದಕ್ಕೆ ತಕ್ಕಂತೆ ಆಯ್ಕೆ ಪ್ರಕ್ರಿಯೆ ನಡೆಸಲು ಒತ್ತು ನೀಡಿದ್ದೇವು.
 - ಗದಾಧರ ಬಾಳುಗೋಡು
     ಮುಖ್ಯಗುರು

ಕಿರಣ್‌ ಪ್ರಸಾದ್‌ ಕುಂಡಡ್ಕ 

ಟಾಪ್ ನ್ಯೂಸ್

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.