ಹಳೆಯ ಕಟ್ಟಡ: ಆರೋಗ್ಯ ರಕ್ಷಕರಿಗೆ ನಿತ್ಯ ಭಯ


Team Udayavani, Jun 17, 2018, 1:02 PM IST

17-june-8.jpg

ನಗರ : ಸುತ್ತಲೂ ವಿಪರೀತ ಬೆಳೆದಿರುವ ಕಾಡು, ನಡುವೆ ಶತಮಾನ ಮೀರಿಸಿದ ವಸತಿ ಕಟ್ಟಡಗಳು, ಕಟ್ಟಡದ ಮೇಲೂ ಚಾಚಿಕೊಂಡಿರುವ ಅಪಾಯಕಾರಿ ಬೃಹತ್‌ ಗಾತ್ರದ ಮರಗಳು. ಇವುಗಳ ಮಧ್ಯದಲ್ಲಿ ನಿತ್ಯ ಭಯದ ಬದುಕು. ಇದು ಪುತ್ತೂರು ಸರಕಾರಿ ಆಸ್ಪತ್ರೆ ಸಿಬಂದಿಯ ವಸತಿಗೃಹಗಳ ಪರಿಸ್ಥಿತಿ. ನೂರಾರು ಸಾರ್ವಜನಿಕರಿಗೆ ದಿನಂಪ್ರತಿ ಆರೋಗ್ಯ ರಕ್ಷಣೆ ನೀಡುವ ಪುತ್ತೂರು ಸರಕಾರಿ ಆಸ್ಪತ್ರೆಯ ಸಿಬಂದಿ ಹಾಗೂ ಕುಟುಂಬಗಳು ಇಲ್ಲಿ ವಾಸವಿದ್ದು, ತಮ್ಮ ರಕ್ಷಣೆ ಮಾಡಿಕೊಳ್ಳುವುದಕ್ಕಾಗಿ ಪರಿತಪಿಸಬೇಕಾದ ಸ್ಥಿತಿ.

ಶತಮಾನದ ಹಿಂದೆ ಪುತ್ತೂರು ಸರಕಾರಿ ಆಸ್ಪತ್ರೆ ಕಟ್ಟಡದ ನಿರ್ಮಾಣ ಆದಾಗ ಸಿಬಂದಿಯ ವಸತಿಗಾಗಿ ಆಸ್ಪತ್ರೆಯಿಂದ 50 ಮೀ. ವ್ಯಾಪ್ತಿಯಲ್ಲಿ ಈ ವಸತಿಗೃಹಗಳನ್ನು ನಿರ್ಮಿಸಲಾಗಿದೆ. ಈ ಮನೆಗಳು ಗಟ್ಟಿಯಾಗಿರುವರಿಂದ ಯಾವುದೇ ಸಮಸ್ಯೆಯಿಲ್ಲ. ಆದರೆ ಕಾಡಿನಂತಾಗಿರುವ ಪರಿಸರವೇ ಅಪಾಯಕಾರಿಯಾಗಿದೆ.

6 ಕುಟುಂಬಗಳು
ಹಿಂದೆ ಈ ವಸತಿಗೃಹಗಳಲ್ಲಿ ಆಸ್ಪತ್ರೆಯ ವೈದ್ಯರು ತಂಗುತ್ತಿದ್ದರು. ಆದರೆ ಈಗಿನ ವೈದ್ಯರು ವಸತಿಗಾಗಿ ಪ್ರತ್ಯೇಕ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದಾರೆ. ಪ್ರಸ್ತುತ ಸರಕಾರಿ ಆಸ್ಪತ್ರೆಯ ಇಬ್ಬರು ಎಕ್ಸ್‌-ರೇ ಟೆಕ್ನೀಶಿಯನ್ಸ್‌, ಓರ್ವ ಲ್ಯಾಬ್‌ ಟೆಕ್ನೀಶಿಯನ್‌, ಮೂವರು ಸ್ಟಾಫ್‌ ನರ್ಸ್‌ಗಳು, ಆಸ್ಪತ್ರೆಯ ವಾಹನ ಚಾಲಕ ಈ ಕ್ವಾರ್ಟರ್ಸ್‌ಗಳಲ್ಲಿ ವಾಸವಿದ್ದಾರೆ. ಓರ್ವ ಸಿಬಂದಿಯನ್ನು ಬಿಟ್ಟರೆ ಉಳಿದವರೆಲ್ಲರೂ ಕುಟುಂಬ ಸಮೇತರಾಗಿ ವಾಸವಿದ್ದಾರೆ. ಈ ಕುಟುಂಬಗಳ ಸುಮಾರು 11 ಮಂದಿ ಮಕ್ಕಳೂ ಇದ್ದಾರೆ.

ಸೊಳ್ಳೆ, ಹಾವುಗಳ ಕಾಟ
ವಸತಿಗೃಹಗಳ ಪರಿಸರದ ಸುತ್ತಲೂ ಅಪಾರ ಪ್ರಮಾಣದಲ್ಲಿ ಕಾಡು ಬೆಳೆದಿದೆ. ಸ್ವಚ್ಛತೆಯ ಪ್ರಶ್ನೆಯೇ ಇಲ್ಲಿ ಇಲ್ಲದಿರುವುದರಿಂದ ವ್ಯಾಪಕ ಪ್ರಮಾಣದಲ್ಲಿ ಸೊಳ್ಳೆಗಳ ಉತ್ಪಾದನ ಕೇಂದ್ರವಾಗಿ ಈ ಪರಿಸರ ಪರಿವರ್ತನೆಗೊಂಡಿದೆ. ಹೆಬ್ಟಾವು, ನಾಗರಹಾವುಗಳು ಬರುತ್ತವೆ. ಸಮರ್ಪಕ ದಾರಿ ದೀಪವೂ ಇಲ್ಲದೆ ರಾತ್ರಿ ಸಮಯದಲ್ಲಿ ಆಸ್ಪತ್ರೆಯಿಂದ ಕರೆ ಬಂದಾಗ ಪರದಾಡಿಕೊಂಡು ಹೋಗಬೇಕಾಗುತ್ತದೆ ಎನ್ನುವುದು ಸಿಬಂದಿಯ ಅಳಲು.

ಅಪಾಯಕಾರಿ ಮರಗಳು
ವಸತಿ ಗೃಹಗಳ ಮನೆಗಳ ಮೇಲ್ಭಾಗದಲ್ಲಿ ಬೃಹತ್‌ ಗಾತ್ರದ ಮರಗಳ ರೆಂಬೆಗಳು ಹರಡಿಕೊಂಡಿವೆ. ದೇವದಾರು, ಧೂಪ, ಹಲಸು ಸಹಿತ ದೊಡ್ಡ ಗಾತ್ರದ ಮರಗಳಿವೆ. ಇತ್ತೀಚೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಮರಗಳ ಆಯುಷ್ಯ ಗಟ್ಟಿಯಾಗಿದೆ ಎಂದು ಭರವಸೆ ನೀಡಿದ್ದಾರೆ. ಆದರೆ ಪ್ರಕೃತಿಯ ಮುಂದೆ ಇಂತಹ ಭರವಸೆಗಳ ಜತೆ ಬದುಕಲು ಸಾಧ್ಯವಿಲ್ಲ. ಗಾಳಿ, ಮಳೆ ಜೋರಾಗಿರುವುದರಿಂದ ಯಾವುದೇ ಸಂದರ್ಭದಲ್ಲೂ ಮರಗಳು ಮುರಿದು ಬೀಳುವ ಅಪಾಯ ಇದ್ದೇ ಇದೆ.

ಕೆಲವು ವರ್ಷಗಳ ಹಿಂದೆ ವಸತಿಗೃಹಗಳ ಪರಿಸರದಲ್ಲಿ ಸೊಳ್ಳೆಗಳ ಉಪಟಳವನ್ನು ದೂರ ಮಾಡುವ ನಿಟ್ಟಿನಲ್ಲಿ ‘ಗಪ್ಪೆ ಮೀನಿನ ಟ್ಯಾಂಕ್‌’ ನಿರ್ಮಿಸಲಾಗಿದೆ. ಈ ಪೊದೆಗಳ ಮಧ್ಯದಲ್ಲಿ ಟ್ಯಾಂಕ್‌ ಇದೆ ಎನ್ನುವುದನ್ನು ಬಿಟ್ಟರೆ ವ್ಯವಸ್ಥೆಯೇ ನಿರರ್ಥಕವಾಗಿದೆ. ಸೊಳ್ಳೆಗಳಿಂದ ರಕ್ಷಣೆಗಾಗಿ ನಿರ್ಮಿಸಲಾದ ಟ್ಯಾಂಕ್‌ ಈಗ ಕೊಳಚೆ ನೀರು ತುಂಬಿ ಸೊಳ್ಳೆಗಳ ಉತ್ಪಾದನಾ ಟ್ಯಾಂಕ್‌ ಆಗಿ ಪರಿವರ್ತನೆಗೊಂಡಿದೆ.

ಮೇಲಧಿಕಾರಿಗಳ ಗಮನಕ್ಕೆ
ವಸತಿಗೃಹಗಳ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಮೇಲಧಿಕಾರಿಗಳ ಗಮನಕ್ಕೆ ತರುತ್ತೇವೆ. ಪ್ರತಿ ವರ್ಷ ಮರದ ರೆಂಬೆಗಳನ್ನು ಕಡಿಯುವ ಕೆಲಸವನ್ನು ಮಾಡಲಾಗುತ್ತದೆ. ಸಣ್ಣಪುಟ್ಟ ದುರಸ್ತಿಗಳನ್ನು ಸಿಬಂದಿಯೇ ಹಣ ಖರ್ಚು ಮಾಡಿ ಮಾಡುತ್ತಾರೆ.
– ಡಾ| ವೀಣಾ
ಆಡಳಿತ ವೈದ್ಯಾಧಿಕಾರಿ, ಸರಕಾರಿ ಆಸ್ಪತ್ರೆ ಪುತ್ತೂರು

ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.