ರಸ್ತೆ ಗುಂಡಿ ಮುಚ್ಚಲು ವಿಶೇಷ ತಂಡ ರಚನೆ


Team Udayavani, Jun 19, 2018, 11:05 AM IST

19-june-2.jpg

ಮಹಾನಗರ : ಮಳೆಗಾಲ ಪ್ರಾರಂಭಗೊಂಡು ವಾರಗಳು ಕಳೆದಿವೆಯಷ್ಟೇ; ಆಗಲೇ ನಗರದ ಬಹುತೇಕ ಕಡೆಗಳಲ್ಲಿರುವ ಡಾಮರು ರಸ್ತೆಗಳು ಹೊಂಡ ಗುಂಡಿಗಳಾಗಿ ಬದಲಾಗಿದ್ದು, ಆ ಬಗ್ಗೆ ‘ಸುದಿನ’ವು ‘ರಸ್ತೆ ಕಥೆ’ ಹೆಸರಿನಡಿ ವಿಸ್ತೃತ ವರದಿಯೊಂದಿಗೆ ಒಂದು ವಾರದಿಂದ ಅಭಿಯಾನ ನಡೆಸಿತ್ತು. ಈ ಅಭಿಯಾನಕ್ಕೆ ಮಂಗಳೂರು ಪಾಲಿಕೆಯು ಎಚ್ಚೆತ್ತುಕೊಂಡಿದ್ದು, ಪ್ರಯಾಣಕ್ಕೆ ದುಸ್ತರವೆನಿಸಿರುವ ನಗರದ ಆಯ್ದ ರಸ್ತೆಯ ಗುಂಡಿಗಳನ್ನು ಸರಿಪಡಿಸುವ
ಉದ್ದೇಶದಿಂದ ಮನಪಾ ‘ವಿಶೇಷ ತಂಡ’ವನ್ನು ರಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಕ್ಕೆ ಮುಂದಾಗಿದೆ.

ಈ ಅಭಿಯಾನದ ಕುರಿತು ‘ಸುದಿನ’ ಜತೆಗೆ ಮಾತನಾಡಿದ ಮಂಗಳೂರು ಪಾಲಿಕೆ ಮೇಯರ್‌ ಭಾಸ್ಕರ್‌ ‘ರಸ್ತೆ ಹೊಂಡ-ಗುಂಡಿಗಳ ಬಗ್ಗೆ ಉದಯವಾಣಿಯಲ್ಲಿ ಒಂದು ವಾರದಿಂದ ಬಂದ ವರದಿಯನ್ನು ಗಮನಿಸಿದ್ದೇನೆ. ಪತ್ರಿಕೆ ಬೆಳಕು ಚೆಲ್ಲಿರುವ ಎಲ್ಲ ಸಮಸ್ಯೆಗಳನ್ನು ಪಾಲಿಕೆಯು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳ ಜತೆಗೂ ಈ ಬಗ್ಗೆ ಚರ್ಚಿಸಲಾಗಿದೆ. ಆದರೆ, ಮಳೆ ಬರುವ ಸಮಯದಲ್ಲಿ ಗುಂಡಿ ಬಿದ್ದ ರಸ್ತೆಗೆ ಪೂರ್ಣ ಮಟ್ಟದಲ್ಲಿ ತೇಪೆ ಹಚ್ಚಲು ಕಷ್ಟವಾಗುತ್ತಿದೆ. ಯಾಕೆಂದರೆ ಈ ಹಿಂದೆಯೂ ಮಳೆ ಬಂದ ಸಮಯದಲ್ಲಿ ತೇಪೆ ಹಾಕಿದಾಗಲೂ ಅನಂತರದ ಮಳೆಗೆ ಅದು ಕಿತ್ತು ಹೋಗಿತ್ತು. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಬೇಕಾಗಿದೆ. ಹೀಗಾಗಿ, ಸಾಧ್ಯ-ಸಾಧ್ಯತೆಗಳ ಬಗ್ಗೆ ಪರಿಶೀಲಿಸಿ ಗುಂಡಿಬಿದ್ದ ರಸ್ತೆಗಳನ್ನು ಸರಿಪಡಿಸುವುದಕ್ಕೆ ಪಾಲಿಕೆಯ ವಿಶೇಷ ತಂಡ ರಚಿಸಲಾಗುವುದು’ ಎಂದರು.

ಸಾರ್ವಜನಿಕರು ಸಹಕರಿಸಿ
ಒಂದು ವಾರದ ಒಳಗೆ ಪಾಲಿಕೆಯ ವಿಶೇಷ ತಂಡ ರಚಿಸಿ, ಸಾರ್ವಜನಿಕರಿಗೆ ಸಮಸ್ಯೆ ಆಗುವ ಪ್ರಮುಖ ರಸ್ತೆಯ ಹೊಂಡಗಳನ್ನು ಗುರುತಿಸಿ ಅದನ್ನು ತಾತ್ಕಾಲಿಕವಾಗಿ ಮುಚ್ಚಲು ಕ್ರಮ ಕೈಗೊಳ್ಳಲಾಗುವುದು. ಮಳೆಗಾಲ ಮುಗಿದ ಬಳಿಕ ಉಳಿದೆಲ್ಲಾ ರಸ್ತೆಗಳನ್ನು ಹೊಂಡ-ಗುಂಡಿ ಮುಕ್ತ ಮಾಡಲಾಗುವುದು. ಸಾರ್ವಜನಿಕರು ಈ ಕುರಿತಂತೆ ಸಹಕರಿಸಬೇಕು’ ಎಂದು ಅವರು ಭರವಸೆ ನೀಡಿದ್ದಾರೆ.

ಪಾಲಿಕೆ ಅಧಿಕಾರಿಗಳಿಗೆ ಶಾಸಕರ ಸೂಚನೆ
ಮಂಗಳೂರಿನಲ್ಲಿ ಮಳೆಗೆ ಉಂಟಾದ ಹೊಂಡ ಗುಂಡಿಗಳ ಬಗ್ಗೆ ‘ಸುದಿನ’ ಒಂದು ವಾರದಿಂದ ವಿಸ್ತೃತ ವರದಿಯನ್ನು ಪ್ರಕಟಿಸುತ್ತಿರುವುದನ್ನು ಗಮನಿಸಿದ್ದೇವೆ. ಮೊದಲ ದಿನದ ವರದಿ ಬಂದ ತತ್‌ ಕ್ಷಣವೇ ಪಾಲಿಕೆ ಅಧಿಕಾರಿಗಳನ್ನು ಸಂಪರ್ಕಿಸಿ, ಹೊಂಡ ಮುಚ್ಚಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ನಾನೇ ಖುದ್ದು ನಿರ್ದೇಶನ ನೀಡಿದ್ದೆ. ಆದರೆ, ಕೆಲವು ಕಡೆ ಮಳೆಯ ಕಾರಣದಿಂದ ಪೂರ್ಣ ಮಟ್ಟದಲ್ಲಿ ಹೊಂಡ ಮುಚ್ಚುವ ಕೆಲಸ ನಡೆಸುವುದು ಸ್ವಲ್ಪ ಕಷ್ಟ ಸಾಧ್ಯ. ಆದರೂ, ಪ್ರಯಾಣಿಕರಿಗೆ ಸಮಸ್ಯೆ ಆಗುವಂತಹ ಹೊಂಡಗಳನ್ನು ತತ್‌ ಕ್ಷಣವೇ ಮುಚ್ಚಲು ಕ್ರಮ ಕೈಗೊಳ್ಳುವ ಬಗ್ಗೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹೀಗಾಗಿ, ಈ ಬಗ್ಗೆ ಕೆಲವೇ ದಿನದಲ್ಲಿ ಪಾಲಿಕೆ ಅಧಿಕಾರಿಗಳಿಂದ ಮತ್ತೆ ವಿವರ ಪಡೆದುಕೊಳ್ಳುವ ಮೂಲಕ ಹೆಚ್ಚಿನ ನಿಗಾವಹಿಸಲಾಗುವುದು ಎಂದರು.

ಸೂಕ್ತ ಕ್ರಮ ಅಗತ್ಯ
ಸ್ಮಾರ್ಟ್‌ಸಿಟಿ ಆಗುತ್ತಿರುವ ಮಂಗಳೂರಿನಲ್ಲಿ ಮೊದಲ ಮಳೆಯ ಸಮಯದಲ್ಲಿಯೇ ರಸ್ತೆಗಳೆಲ್ಲ ಹೊಂಡ ಗುಂಡಿಗಳಾಗುತ್ತಿರುವುದು ಸ್ಥಳೀಯ ಆಡಳಿತ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. ತತ್‌ಕ್ಷಣವೇ ರಸ್ತೆ ಗುಂಡಿ ಸರಿಪಡಿಸುವ ನಿಟ್ಟಿನಲ್ಲಿ ಪಾಲಿಕೆ ಅಧಿಕಾರಿಗಳು ಈ ಕೂಡಲೇ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದರು.

ಮಳೆ ಮುನ್ನ ಎಚ್ಚೆತ್ತುಕೊಳ್ಳಬೇಕಿತು
ಮಳೆ ಶುರು ಆಗುವ ಮುನ್ನವೇ ಹೊಂಡ ಗುಂಡಿಯ ಅಪಾಯದ ರಸ್ತೆಯನ್ನು ತೇಪೆ ಹಚ್ಚಿ ಸನ್ನದ್ಧ ಸ್ಥಿತಿಯಲ್ಲಿಡಬೇಕಿತ್ತು. ಯಾವ ರಸ್ತೆಯ ಯಾವ ಭಾಗದಲ್ಲಿ ಸಮಸ್ಯೆ ಆಗಲಿದೆ ಎಂಬುದು ಪಾಲಿಕೆ ಅಧಿಕಾರಿಗಳಿಗೂ ಸ್ಪಷ್ಟವಾಗಿ ಗೊತ್ತಿರುತ್ತದೆ. ಆದರೆ, ಮಳೆಯ ಮುನ್ನ ಇದನ್ನು ಗಂಭೀರವಾಗಿ ತೆಗೆದುಕೊಳ್ಳದ ಪಾಲಿಕೆ ಈಗ ಹೊಂಡ-ಗುಂಡಿ ರಸ್ತೆಯ ಅಧ್ವಾನ ಸರಿಪಡಿಸಲು ಮಳೆ ನಿಲ್ಲುವವರೆಗೆ ಕಾಯುವಂತಾಗಿರುವುದು ಪಾಲಿಕೆಯ ಆಡಳಿತ ವ್ಯವಸ್ಥೆ ಹೇಗಿದೆ ಎಂಬುದು ಸ್ಪಷ್ಟಪಡಿಸುತ್ತದೆ’ ಎಂದು ಮನಪಾ ವಿಪಕ್ಷ ನಾಯಕ ಪ್ರೇಮಾನಂದ ಶೆಟ್ಟಿ ತಿಳಿಸಿದ್ದಾರೆ. ‘ಉದಯವಾಣಿ ಸುದಿನ’ವು ರಸ್ತೆ ಹೊಂಡದ ಬಗ್ಗೆ ಬರೆದ ವರದಿಯನ್ನು ಪಾಲಿಕೆ ಗಂಭೀರವಾಗಿ ಪರಿಗಣಿಸಬೇಕು. ಪ್ರಸ್ತುತ ಬಿದ್ದಿರುವ ಹೊಂಡವನ್ನು ಕೋಲ್‌ ಟಾರ್‌ ಹಾಕುವ ಮೂಲಕ ಮುಚ್ಚಲು ಕ್ರಮ ತೆಗೆದುಕೊಳ್ಳಬೇಕು. ಕಾಂಕ್ರೀಟ್‌ ಮಿಕ್ಸ್‌ ಡಾಮರು ಹಾಕಬಹುದು. ಜತೆಗೆ ಯಾವುದೇ ರಸ್ತೆಯಲ್ಲಿ ಮಳೆ ನೀರು ನಿಲ್ಲದಂತೆ ನೋಡಿಕೊಳ್ಳುವ ಕೆಲಸವನ್ನು ಪಾಲಿಕೆ ಮಾಡಬೇಕು ಎಂದವರು ಹೇಳಿದರು.

ದಿನೇಶ್‌ ಇರಾ

ಟಾಪ್ ನ್ಯೂಸ್

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

police

Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು

puttige

Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.