ಕಡಿದ ಮರಗಳು ರಸ್ತೆಯಲ್ಲಿ, ಬೀದಿ ದೀಪ ಮಾಯ!


Team Udayavani, Jun 21, 2018, 12:30 PM IST

21-june-7.jpg

ಮಹಾನಗರ: ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ನಗರದ ಬಹುತೇಕ ಭಾಗ ಕೃತಕ ನೆರೆಯಿಂದ ಮುಳುಗಡೆಗೊಂಡು ಅನೇಕ ನಾಶನಷ್ಟಗಳು ಉಂಟಾಗಿತ್ತು. ಇದರಿಂದ ಎಚ್ಚೆತ್ತ ಪಾಲಿಕೆ ಚರಂಡಿ ಸ್ವಚ್ಛತೆ, ಅಪಾಯಕಾರಿ ಮರಗಳ ತೆರವು ಕಾರ್ಯ ಮುಂದಾಗಿತ್ತು. ಆದರೆ ಕೆಲವು ಭಾಗಗಳಲ್ಲಿ ಕಡಿದ ಮರಗಳನ್ನು ರಸ್ತೆಯಲ್ಲೇ ಬಿಟ್ಟು ಹೋಗಿರುವುದು ವಾಹನ ಸವಾರರ ಪಾಲಿಕೆ ಸಂಕಷ್ಟವಾಗಿ ಪರಿಣಮಿಸಿದೆ.

 ದೇರೆಬೈಲು-ಎಯ್ನಾಡಿ ಸಂಪರ್ಕಿಸುವ ಹರಿಪದವು ರಸ್ತೆ ನೋಡಲು ಕಾಂಕ್ರೀಟ್‌ ಹಾಕಿ ಸುಂದರವಾಗಿಯೇ ಇದೆ. ಆದರೆ ಈ ಒಂದು ರಸ್ತೆಯಲ್ಲಿ ಹಲವು ಸಮಸ್ಯೆಗಳಿವೆ. ಅಪಾಯಕಾರಿ ಮರಗಳನ್ನು ಪಾಲಿಕೆ ಸಿಬಂದಿಗಳು ಇತ್ತೀಚೆಗೆ ಕಡಿದಿದ್ದರೂ ಅದನ್ನು ತೆರವು ಮಾಡುವಲ್ಲಿ ನಿರ್ಲಕ್ಷ್ಯ ತೋರಿರುವುದರಿಂದ ಸುಮಾರು ಒಂದು ತಿಂಗಳಿನಿಂದ ಮರ, ಗೆಲ್ಲುಗಳು ರಸ್ತೆಯಲ್ಲೇ ಬಿದ್ದಿವೆ. ಇದರಿಂದ ಈ ಭಾಗದಲ್ಲಿ ಓಡಾಡುವ ಜನರಿಗೆ ತೊಂದರೆಯಾಗುತ್ತಿದೆ.

ದಾರಿದೀಪವಿಲ್ಲ
 ಹರಿಪದವು ರಸ್ತೆಯನ್ನು ಎಯ್ನಾಡಿಗೆ ತೆರಳಲು ಅಡ್ಡರಸ್ತೆಯಾಗಿ ಬಳಸಲಾಗುತ್ತದೆ. ಅಲ್ಲದೆ ಹಲವು ಮನೆಗಳಿರುವ ಮಂದಾರಬೈಲು ಭಾಗಕ್ಕೂ ಈ ರಸ್ತೆಯ ಮೂಲಕವೇ ಸಾಗಬೇಕು. ಅದರೊಂದಿಗೆ ಒಂದು ಖಾಸಗಿ ಆಸ್ಪತ್ರೆಯ ವಸತಿನಿಲಯ, ಬೃಹತ್‌ ಖಾಸಗಿ ಕಂಪೆನಿಯೂ ಇದೆ. ಈ ಹಿನ್ನಲೆಯಲ್ಲಿ ದಿನನಿತ್ಯ ಈ ಭಾಗದಲ್ಲಿ ನೂರಾರು ಜನ ಓಡಾಟ ನಡೆಸುತ್ತಾರೆ. ಆದರೆ ಈ ಭಾಗದಲ್ಲಿ ಬೀದಿ ದೀಪಗಳಿಲ್ಲದೆ ಜನರು ಕತ್ತಲಲ್ಲೇ ಸಾಗಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಇದರಿಂದ ರಾತ್ರಿ ವೇಳೆ ಮಹಿಳೆಯರು ಈ ಭಾಗದಲ್ಲಿ ಸಂಚರಿಸಲು ಆತಂಕಕ್ಕೊಳಗಾಗುತ್ತಿದ್ದಾರೆ. ಅಲ್ಲದೆ ಈ ಕಾರಣದಿಂದ ಈ ಭಾಗದಲ್ಲಿ ಅನೈತಿಕ ಚಟುವಟಿಕೆಗಳು ನಡೆಯುವ ಸಾಧ್ಯತೆ ಇದೆ ಎಂಬುದು ಸ್ಥಳೀಯರು ಆತಂಕ
ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸ್ಥಳೀಯ ಪ್ರತಿನಿಧಿಯನ್ನು ಕೇಳಿದರೆ ಸೂಕ್ತ ಸ್ಪಂದನೆ ನೀಡುತ್ತಿಲ್ಲ ಎಂಬುದಾಗಿ ಅಲ್ಲಿನ ನಿವಾಸಿಯೊಬ್ಬರು ಸುದಿನಕ್ಕೆ ತಿಳಿಸಿದ್ದಾರೆ.

ಗುಡ್ಡ ಕುಸಿದು ತಿಂಗಳೂ ಕಳೆದರೂ ಕೇಳ್ಳೋರಿಲ್ಲ
ಮೇ 29ರಂದು ಸುರಿದ ಭಾರಿ ಮಳೆಗೆ ದೇರೆಬೈಲಿನಿಂದ ಹರಿಪದವು ರಸ್ತೆ ಆರಂಭವಾಗುವ ತಿರುವಿನಲ್ಲಿ ಗುಡ್ಡ ಕುಸಿದು ರಸ್ತೆಗೆ ಮಣ್ಣು ಬಿದ್ದಿದ್ದು, ಈವರೆಗೆ ಅದನ್ನು ತೆರವು ಗೊಳಿಸುವ ಕಾರ್ಯ ಪಾಲಿಕೆ ಮಾಡಿಲ್ಲ. ಮಳೆ ನೀರಿಗೆ ಮಣ್ಣುಗಳೆಲ್ಲಾ ರಸ್ತೆಯಲ್ಲೇ ಹರಿಯುತ್ತಿದ್ದು, ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಕೆಸರಿನಲ್ಲೇ ಸಾಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪಾಲಿಕೆಯನ್ನು ಅನೇಕ ಬಾರಿ ಸಂಪರ್ಕಿಸಿದರೂ ಯಾವುದೇ ಪ್ರಯೋಜನವಾಗಿಲ್ಲ . 

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

12-epson

Epson ಇಕೊ ಟ್ಯಾಂಕ್ ಪ್ರಿಂಟರ್: ರಶ್ಮಿಕಾ ಮಂದಣ್ಣ ಅಭಿಯಾನ

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.