ಉತ್ತರಾಖಂಡದ 700 ಗ್ರಾಮಗಳಲ್ಲಿ ಜನರೇ ಇಲ್ಲ!


Team Udayavani, Jun 25, 2018, 4:35 AM IST

village-24-6.jpg

ಡೆಹ್ರಾಡೂನ್‌: ಬಡತನ ಹಾಗೂ ಉದ್ಯೋಗ ಅವಕಾಶದ ಕೊರತೆಯಿಂದ ಹಳ್ಳಿಗಳ ಜನರು ನಗರಗಳಿಗೆ ವಲಸೆ ಹೋಗುವ ಪ್ರಕ್ರಿಯೆ ಹೊಸದೇನೂ ಅಲ್ಲ. ಹಾಗೆಂದ ಮಾತ್ರ ಇಡೀ ಊರಿಗೆ ಊರೇ ವಲಸೆ ಹೋಗುವುದಿಲ್ಲ. ಆದರೆ ಉತ್ತರಾಖಂಡದ ಪರಿಸ್ಥಿತಿ ತೀರಾ ವಿಷಮವಾಗಿದೆ. ಇಲ್ಲಿನ 700 ಗ್ರಾಮಗಳ ಜನರು ಉದ್ಯೋಗ ಹಾಗೂ ಉತ್ತಮ ಮೂಲ ಸೌಕರ್ಯಕ್ಕಾಗಿ ಕಳೆದ 10 ವರ್ಷಗಳಲ್ಲಿ ಸಂಪೂರ್ಣವಾಗಿ ಊರನ್ನೇ ತೊರೆದು ಹೋಗಿದ್ದಾರೆ. ಈಗ 700 ಗ್ರಾಮಗಳು ಸಂಪೂರ್ಣ ನಿರ್ಜನವಾಗಿದ್ದು, ಪಾಳುಬಿದ್ದ ಮನೆ ಹಾಗೂ ಗುಡಿಗಳು ಮಾತ್ರ ಕಾಣಸಿಗುತ್ತಿವೆ. ಸುಮಾರು 3.83 ಲಕ್ಷ ಜನರು ಉದ್ಯೋಗ, ಉತ್ತಮ ಮೂಲಸೌಕರ್ಯವನ್ನು ಅರಸಿ ನಗರಗಳಿಗೆ ವಲಸೆ ಹೋಗಿದ್ದಾರೆ. ಇಂತಹ ಗ್ರಾಮಗಳನ್ನು ಭೂತಿಯಾ ಗಾಂವ್‌ (ಭೂತದ ಊರು) ಎಂದು ಸಾಮಾನ್ಯವಾಗಿ ಕರೆಯಲಾಗುತ್ತದೆ.

ಚೀನ ಗಡಿಯನ್ನು ಉತ್ತರಾಖಂಡ ಹಂಚಿಕೊಂಡಿದ್ದು, ಈ ಗಡಿ ಗ್ರಾಮಗಳಲ್ಲಿ ಮೂಲ ಸೌಕರ್ಯ ಕೊರತೆ, ಉದ್ಯೋಗಾವಕಾಶದ ಕೊರತೆಯೇ ಇಂಥ ಸಾಮೂಹಿಕ ವಲಸೆಗೆ ಮುಖ್ಯ ಕಾರಣವಾಗಿದೆ. ವಲಸೆ ಸಮಸ್ಯೆಯನ್ನು ಅರಿಯಲು ಕಳೆದ ವರ್ಷ ಉತ್ತರಾಖಂಡ ಸರಕಾರ ಸಮಿತಿ ರಚಿಸಿತ್ತು. ಕೆಲವು ದಿನಗಳ ಹಿಂದೆ ಸಮಿತಿ ವರದಿಯನ್ನೂ ಸಲ್ಲಿಸಿದೆ. ವಲಸೆ ಹೋದವರ ಪೈಕಿ ಶೇ. 70ರಷ್ಟು ಜನರು ರಾಜ್ಯದಲ್ಲೇ ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಸಾಗಿದ್ದಾರೆ. ಚೀನ ಗಡಿ ಹಂಚಿಕೊಂಡಿರುವ 14 ಗ್ರಾಮಗಳೂ ನಿರ್ಜನವಾಗಿವೆ. ಇನ್ನೂ 565 ಗ್ರಾಮಗಳು ನಿರ್ಜನಾಗುವತ್ತ ಸಾಗಿವೆ. ಈ ಗ್ರಾಮಗಳ ಜನಸಂಖ್ಯೆ ಶೇ. 50ರಷ್ಟು ಕುಸಿದಿದೆ. ಅಚ್ಚರಿಯ ಸಂಗತಿಯೆಂದರೆ 13 ಜಿಲ್ಲೆಗಳ 850 ಗ್ರಾಮಗಳಲ್ಲಿ ಜನಸಂಖ್ಯೆ ಏರಿಕೆಯೂ ಆಗಿದೆ. ಸಾಮಾನ್ಯವಾಗಿ ಪ್ರವಾಸೋದ್ಯಮ ಚಟುವಟಿಕೆ ಹೆಚ್ಚಿರುವ ಗ್ರಾಮಗಳಲ್ಲಿ ಜನಸಂಖ್ಯೆ ಏರಿಕೆ ಕಂಡಿದ್ದರೆ, ಗುಡ್ಡಗಾಡು ಪ್ರದೇಶಗಳಲ್ಲಿ ಜನಸಂಖ್ಯೆ ಇಳಿಕೆಯಾಗಿದೆ ಎಂದು ಸಮಿತಿ ತನ್ನ ವರದಿಯಲ್ಲಿ ತಿಳಿಸಿದೆ.

ಸೇನೆಗೆ ಸೇರುವವರೂ ಹೆಚ್ಚು: ಗಡಿ ಗ್ರಾಮಗಳಲ್ಲಿ ಸೇನೆಗೆ ಸೇರುವವರ ಸಂಖ್ಯೆ ಹೆಚ್ಚಿದ್ದು, ರಾಜ್ಯದಲ್ಲಿ ಒಟ್ಟು 60 ಸಾವಿರ ಜನರು ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. 2 ಲಕ್ಷಕ್ಕೂ ಹೆಚ್ಚು ನಿವೃತ್ತ ಯೋಧರಿದ್ದಾರೆ. ನಿವೃತ್ತಿಯ ಅನಂತರ ಉತ್ತಮ ಮೂಲಸೌಕರ್ಯಕ್ಕಾಗಿ ಇವರು ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಇತ್ತೀಚೆಗೆ ಉತ್ತರಾಖಂಡಕ್ಕೆ ಭೇಟಿ ನೀಡಿದ್ದ ಗೃಹ ಸಚಿವ ರಾಜನಾಥ್‌ ಸಿಂಗ್‌, ರಾಜ್ಯದ ವಲಸೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಹೇಳಿದ್ದಾರೆ. ಅಲ್ಲದೆ ಗಡಿ ಭಾಗದ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವುದಾಗಿಯೂ ಅವರು ಹೇಳಿದ್ದಾರೆ.

10 ವರ್ಷಗಳಲ್ಲಿ ಗುಳೆ ಹೋದವರು : 3.83 ಲಕ್ಷ  ಮಂದಿ
565 ಗ್ರಾಮಗಳಲ್ಲಿ ಜನಸಂಖ್ಯೆ ಇಳಿಕೆ : 50%
ಚೀನ ಗಡಿಯ 14 ಗ್ರಾಮಗಳು ನಿರ್ಜನ
850 ಗ್ರಾಮಗಳಲ್ಲಿ ಜನಸಂಖ್ಯೆ ಏರಿಕೆ

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.