![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Jun 29, 2018, 7:20 AM IST
ಬೆಂಗಳೂರು: ಗೌರಿಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮದ್ದೂರಿನ ಕೆ.ಟಿ.ನವೀನ್ ಕುಮಾರ್
ಅಲಿಯಾಸ್ ಹೊಟ್ಟೆ ಮಂಜನ ಜಾಮೀನು ಅರ್ಜಿ ವಿಚಾರಣೆಯನ್ನು 70ನೇ ಸಿಸಿಎಚ್ ನ್ಯಾಯಾಲಯ ಜೂ.30ಕ್ಕೆ ಮುಂದೂಡಿದೆ.
ಆರೋಪಿಗೆ ಜಾಮೀನು ನೀಡದಂತೆ ಲಿಖೀತ ರೂಪದಲ್ಲಿ ಆಕ್ಷೇಪಣೆ ಸಲ್ಲಿಸಿದ ಸರ್ಕಾರಿ ಅಭಿಯೋಜಕ ಟಿ.ಎಂ.ನರೇಂದ್ರ ಅವರು, ನವೀನ್ ಕುಮಾರ್ ಪ್ರಕರಣದಲ್ಲಿ ಭಾಗಿಯಾಗಿರುವುದು ಪ್ರಾಥಮಿಕ ಮಾಹಿತಿ ಮತ್ತು ಮೇಲ್ನೋಟಕ್ಕೆ ಸಾಬೀತಾಗಿದೆ. ಅಲ್ಲದೆ,ನವೀನ್ ಕುಮಾರ್ ಬಳಿಯಿದ್ದ ಗುಂಡುಗಳಿಗೂ ಗೌರಿ ಲಂಕೇಶ್ ದೇಹದಲ್ಲಿ ಪತ್ತೆಯಾದ ಗುಂಡುಗಳಿಗೂ ಸಾಮ್ಯತೆ ಇದೆ ಎಂದು ತಿಳಿದು ಬಂದಿದ್ದು, ಈ ಕುರಿತು ವಿಧಿ ವಿಜ್ಞಾನ ಪರೀಕ್ಷಾ ಕೇಂದ್ರದ ಅಧಿಕಾರಿಗಳು ವರದಿ ನೀಡಿದ್ದಾರೆ.
ದಾಖಲೆಗಳೆಲ್ಲವನ್ನೂ ಹಾಜರು ಪಡಿಸಲು ಕಾಲವಕಾಶ ನೀಡಬೇಕು ಎಂದು ಮನವಿ ಮಾಡಿದರು. ನ್ಯಾಯಾಲಯ
ಕಾಲಾವಕಾಶ ನೀಡಿ ಜೂ.30ಕ್ಕೆ ವಿಚಾರಣೆ ಮುಂದೂಡಿದೆ. ಈ ಮಧ್ಯೆ ಆರೋಪಿ ಪರ ವಕೀಲ ವೇದಮೂರ್ತಿ, ನವೀನ್ ಕುಮಾರ್ ಮಂಪರು ಪರೀಕ್ಷೆಗೆ ಒಪ್ಪಿದ್ದು, ತನಿಖಾಧಿಕಾರಿಗಳು ದಿನಾಂಕ ನಿಗದಿ ಮಾಡಿದರೆ ಅವರೊಟ್ಟಿಗೆ ಹೋಗಲು ಸಿದ್ಧವಾಗಿದ್ದಾನೆ ಎಂದು ಕೋರ್ಟ್ ಗಮನಕ್ಕೆ ತಂದರು
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.