ರವಿ ಬೆಳಗೆರೆ ಜಾಮೀನು ರದ್ದು ನಿರಾಕರಿಸಿದ ಹೈಕೋರ್ಟ್
Team Udayavani, Jun 29, 2018, 11:38 AM IST
ಬೆಂಗಳೂರು: ಸಹೋದ್ಯೋಗಿ ಕೊಲೆಗೆ ಸುಪಾರಿ ನೀಡಿದ್ದ ಆರೋಪ ಪ್ರಕರಣದಲ್ಲಿ ಹಿರಿಯ ಪತ್ರಕರ್ತ ರವಿ ಬೆಳಗೆರೆಗೆ ಅಧೀನ ನ್ಯಾಯಾಲಯ ಮಂಜೂರು ಮಾಡಿದ್ದ ಜಾಮೀನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಜಾಮೀನು ಷರತ್ತುಗಳನ್ನು ಉಲ್ಲಂಘಿಸಿರುವ ಕಾರಣದಿಂದ ರವಿ ಬೆಳಗೆರೆಗೆ ನೀಡಿರುವ ಜಾಮೀನು ರದ್ದುಪಡಿಸುವಂತೆ ಸಿಸಿಬಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯ ಪೀಠ, ಅರ್ಜಿ ತಿರಸ್ಕರಿಸಿತು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಯು ಜಾಮೀನು ಷರತ್ತು ಉಲ್ಲಂಘಿಸಿರುವುದಕ್ಕೆ ಪ್ರಬಲ ಸಾಕ್ಷ್ಯಗಳನ್ನು ನೀಡುವಲ್ಲಿ ಪ್ರಾಸಿಕ್ಯೂಶನ್ ವಿಫಲವಾಗಿದೆ. ಅಲ್ಲದೆ, ಪ್ರಕರಣ ಸಂಬಂಧ ದೋಷಾರೋಪ ಪಟ್ಟಿ ಕೂಡ ಸಲ್ಲಿಕೆಯಾಗಿದೆ. ಜತೆಗೆ ಅಧೀನ ನ್ಯಾಯಾಲಯ ಜಾಮೀನು ನೀಡುವಾಗ ಸ್ಪಷ್ಟ ಕಾರಣಗಳನ್ನು ನೀಡಿದೆ. ಹೀಗಾಗಿ ಜಾಮೀನು ರದ್ದುಪಡಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕುಡಿದು ಗಲಾಟೆ ಮಾಡುತ್ತಿದ್ದ ಮಗನ ಕೊಂದ ಅಪ್ಪ!
Crime: ಹೆಂಡತಿಯನ್ನು ಮಾಂಸ ಕತ್ತರಿಸುವ ಮಚ್ಚಿನಿಂದ ಕೊಂದ ಕೋಳಿ ವ್ಯಾಪಾರಿ
Bengaluru: ತಂದೆ ಬೈದಿದ್ದಕ್ಕೆ ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ
ಮುನಿರತ್ನ ವಿರುದ್ಧ ವೋಟರ್ ಐಡಿ ಪ್ರಕರಣ: ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ದೂರು
Mayur Patel: ಭೂಮಿ ಅತಿಕ್ರಮಣ ಆರೋಪ; ನಟ ಮಯೂರ್ ವಿರುದ್ಧ ಎಫ್ಐಆರ್
MUST WATCH
ಹೊಸ ಸೇರ್ಪಡೆ
Bagheera Trailer: ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್ ಔಟ್
INDvsNZ 2ನೇ ಪಂದ್ಯಕ್ಕೆ ಪಂತ್ ಅನುಮಾನ;ಕೋಚ್-ಕ್ಯಾಪ್ಟನ್ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ
Chikkamagaluru: ಕಾಫಿನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ
BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು
Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.