ಸಂಪರ್ಕ ಕಡಿತಗೊಳುವ ಭೀತಿ: ಕಾಮಗಾರಿ ಲೋಪದ ಆರೋಪ 


Team Udayavani, Jun 29, 2018, 12:47 PM IST

29-june-11.jpg

ಸುಳ್ಯಪದವು: ಗ್ರಾಮೀಣ ಭಾಗದ ರಸ್ತೆಗಳಿಗೆ ಕಾಯಕಲ್ಪ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ನಮ್ಮ ಗ್ರಾಮ ನಮ್ಮ ರಸ್ತೆಯನ್ನು ಜಾರಿಗೊಳಿಸಿದೆ. ಮೈಂದನಡ್ಕ-ಪದಡ್ಕ ರಸ್ತೆಯನ್ನು ಕಳೆದ ಬೇಸಗೆಯಲ್ಲಿ 2.70 ಕಿ.ಮೀ.ರಸ್ತೆ ಯನ್ನು
ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಲ್ಲಿ ಅಭಿವೃದ್ಧಿಗೊಳಿಸಲಾಗಿತ್ತು. ರಸ್ತೆ ರಚನೆಗೆ 1.84 ಕೋಟಿ ರೂ. ಮತ್ತು 5ವರ್ಷಗಳ ನಿರ್ವಹಣೆ ಹಾಗೂ 6ನೇ ವರ್ಷದ ನವೀಕರಣಕ್ಕೆ 31.83 ಲಕ್ಷ, ಅಂದರೆ ಈ ರಸ್ತೆ ಅಭಿವೃದ್ಧಿಗೆ 221.50 ಲಕ್ಷ ರೂ. ಅನುದಾನ ಇರಿಸಲಾಗಿದೆ.

ಇದೀಗ ಕನ್ನಡ್ಕ ಬಸ್ಸು ತಂಗುದಾಣದ ಬಳಿ ರಸ್ತೆ ಕುಸಿದು ಹೋಗಿದ್ದು ರಸ್ತೆಯಲ್ಲಿ ಹೊಂಡಗಳು ಸೃಷ್ಟಿಯಾಗಿದೆ. ಇದರಿಂದ ಸುಮಾರು 100 ಮೀಟರ್‌ ರಸ್ತೆ ಮಧ್ಯೆ ಬಿರುಕು ಕಾಣಿಸಿಕೊಂಡಿದ್ದು, ಮೋರಿಯ ಪಕ್ಕದಲ್ಲಿ ನೀರು ಶೇಖರಣೆಗೊಳುತ್ತಿದೆ. ಇದೀಗ ರಸ್ತೆ ಸಂಪರ್ಕ ಕಡಿತಗೊಳ್ಳುವ ಅತಂಕ ಸಾರ್ವಜನಿಕರಲ್ಲಿ ಮೂಡಿದೆ.

ಒರತೆ ಹೆಚ್ಚು
ಕನ್ನಡ್ಕ ಎಂಬಲ್ಲಿ ರಸ್ತೆ ನಿರ್ಮಿಸುವಾಗ ಮಣ್ಣು ಹಾಕಿ ಹದ ಮಾಡಿ ಎತ್ತರ ತಗ್ಗನ್ನು ಸರಿಪಡಿಸಲಾಗಿತ್ತು. ಮಣ್ಣು ಸರಿಯಾಗಿ ಸೆಟ್‌ ಆಗದೇ ಇರುವುದು ಮತ್ತು ನೀರಿನ ಒರತೆ ಹೆಚ್ಚು ಇರುವುದರಿಂದ ಕುಸಿತವಾಗಿದೆ ಎಂಬ ಮಾತು ಸಾರ್ವಜನಿಕರಿಂದ ವ್ಯಕ್ತವಾಗಿದೆ. 

ಕೇರಳ-ಕರ್ನಾಟಕ ಸಂಪರ್ಕಿಸುವ ರಸ್ತೆ ಇದಾಗಿದ್ದು.ಸರಕಾರಿ, ಖಾಸಗಿ ಬಸ್‌ಗಳು, ಇತರ ವಾಹನಗಳು ದಿನನಿತ್ಯ ಸಂಚರಿಸುತ್ತಿವೆ. ಕನ್ನಡ್ಕ, ಸುಳ್ಯಪದವು, ಗಡಿಭಾಗದ ಜನರಿಗೆ ಈ ರಸ್ತೆ ಮುಖ್ಯವಾಗಿದೆ. ಲಾರಿಗಳಲ್ಲಿ ಮಿತಿಗಿಂತ ಹೆಚ್ಚು ಕೆಂಪುಕಲ್ಲು ಗಳನ್ನು ಸಾಗಾಟ ಮಾಡಲಾಗುತ್ತಿದೆ. ನಿರಂತರವಾಗಿ ಘನ ವಾಹನಗಳು ಸಂಚರಿಸುತ್ತಿರುವುದರಿಂದ ಮೋರಿಯ ಸಮೀಪ ದೊಡ್ಡ ಗಾತ್ರದ ಹೊಂಡ ನಿರ್ಮಾಣವಾಗಿದೆ.

ನೀರು ನಿಂತು ದ್ವಿಚಕ್ರವಾಹನ ಸವಾರಿಗೆ ತೊಂದರೆಯಾಗುತ್ತಿದೆ. ಲಘುವಾಹನಗಳ ಭಾಗಗಳು ಜಖಂಗೊಳ್ಳುತ್ತಿರುವುದು ಸಾಮಾನ್ಯವಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕಾಗಿದೆ. ರಸ್ತೆಯ ಮೇಲೆ ನೀರು ಹರಿದು ರಸ್ತೆ ಪಕ್ಕದಲ್ಲಿರುವ ಮಣ್ಣು ಕೂಡ ಮಳೆಯ ನೀರಿನಲ್ಲಿ ಕೊಚ್ಚಿಹೋಗಿದೆ.

ಕಾಮಗಾರಿಯಲ್ಲಿ ಕೊರತೆ
ರಸ್ತೆ ನಿರ್ಮಾಣ ಮಾಡುವಾಗ ಮಣ್ಣು ತುಂಬಿಸಲಾಗಿತ್ತು. ಮಣ್ಣು ಹಾಕಿರುವುದರಿಂದ ರಸ್ತೆ ಬಿರುಕು ಬಿಟ್ಟಿದೆ. ಒರತೆ ಇರುವ ಪ್ರದೇಶವಾಗಿದೆ. ಇದೀಗ ಮಣ್ಣು ಸಡಿಲಗೊಂಡಿದೆ. ಮಳೆಗಾಲದಲ್ಲಿಯೂ ಕೆಂಪು ಕಲ್ಲು ಸಾಗಾಟದ ಲಾರಿಗಳು ನಿರಂತರವಾಗಿ ಸಂಚರಿಸುತ್ತಿವೆ. ಜನಪ್ರತಿನಿಧಿಗಳು, ಅಧಿಕಾರಿಗಳು ಈ ರಸ್ತೆಯ ಭಾಗದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಸೂಕ್ತ ಕ್ರಮಕೈಗೊಳ್ಳಬೇಕು.
 - ಶ್ರೀಧರ ಪೂಜಾರಿ,
ಸಾಮಾಜಿಕ ಕಾರ್ಯಕರ್ತ

ನನ್ನ  ಗಮನಕ್ಕೆ ಬಂದಿಲ್ಲ
ರಸ್ತೆ ಪರಿಸ್ಥಿತಿಯ ಕುರಿತು ನನ್ನ ಗಮನಕ್ಕೆ ಬಂದಿಲ್ಲ. ಬಿರುಕು ಬಿಟ್ಟ ಮತ್ತು ಹೊಂಡಗಳ ರಸ್ತೆಯನ್ನು ಪರಿಶೀಲನೆ ಮಾಡುತ್ತೇನೆ. ರಸ್ತೆಯಲ್ಲಿ ಹೊಂಡಗಳು ಇದ್ದರೆ ದುರಸ್ತಿಗೊಳಿಸಲು ಕ್ರಮಕೈಗೊಳ್ಳಲಾಗುವುದು ನಂತರ ಪುನ: ಡಾಮರೀಕರಣ ಗೊಳಿಸಲಾಗುವುದು.
– ಜನಾರ್ದನ
ಎಂಜಿನಿಯರ್‌ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆ 

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.