ಕುಕ್ಕುಂದೂರು: 36 ಸೋಲಾರ್‌ ದೀಪಗಳ ಬ್ಯಾಟರಿ ಕಳವು


Team Udayavani, Jul 3, 2018, 6:00 AM IST

0207kar5.jpg

ಕಾರ್ಕಳ: ತಾಲೂಕಿನ ಕುಕ್ಕುಂದೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಹಾಕಲಾಗಿದ್ದ ಸೋಲಾರ್‌ ದೀಪಗಳ ಬ್ಯಾಟರಿಗಳು ಕಳೆದ ಐದಾರು ತಿಂಗಳ ಹಿಂದೆ ಕಳವಾಗಿದ್ದು, ಪಂಚಾಯತ್‌ಗೆ ಅಂದಾಜು 3 ಲಕ್ಷ ರೂ. ನಷ್ಟ ಉಂಟಾಗಿದೆ. ಹೀಗಾಗಿ ಮುಂದೆ ಸೋಲಾರ್‌ ದೀಪ ಅಳವಡಿಸದೆ ವಿದ್ಯುತ್‌ ದೀಪಗಳನ್ನು ಅಳವಡಿಸಲು ಪಂಚಾಯತ್‌ ಚಿಂತನೆ ನಡೆಸಿದೆ.

14ನೇ ಹಣಕಾಸು ಯೋಜನೆ ಹಾಗೂ ಕುಕ್ಕುಂದೂರು ಗ್ರಾ.ಪಂ.ನಿಂದ ಪಂಚಾಯತ್‌ ವ್ಯಾಪ್ತಿಯ ಕೆಲವು ಆಯ್ದ ಪ್ರದೇಶಗಳಲ್ಲಿ ಸುಮಾರು 52 ಸೋಲಾರ್‌ ದೀಪಗಳನ್ನು ಅಂದಾಜು 7 ಲಕ್ಷ ರೂ. ವೆಚ್ಚದಲ್ಲಿ ಅಳವಡಿಸಲಾಗಿತ್ತು. ಆ ಪೈಕಿ ಒಟ್ಟು 36 ದೀಪಗಳ ಬ್ಯಾಟರಿಗಳನ್ನು ಕಳವುಗೈದಿದ್ದಾರೆ. 2016-17ನೇ ಸಾಲಿನಲ್ಲಿ ದೀಪಗಳನ್ನು ಅಳವಡಿಸಿದ್ದು, ಒಂದೇ ವರ್ಷದೊಳಗೆ ಬ್ಯಾಟರಿಗಳ ಕಳ್ಳತನವಾಗಿದೆ.

ಒಂದೇ ದಿನದಲ್ಲಿ 20 ಬ್ಯಾಟರಿ ಕಳವು…
ಕುಕ್ಕುಂದೂರು ಗ್ರಾ.ಪಂ. ವ್ಯಾಪ್ತಿಯ ನಕ್ರೆ ಭಾಗದಲ್ಲಿ ಗ್ರಾಮೀಣ ಭಾಗ ಇರುವ ಹಿನ್ನೆಲೆಯಲ್ಲಿ ಆ ಭಾಗಕ್ಕೆ ಹೆಚ್ಚು ಸೋಲಾರ್‌ ದೀಪಗಳನ್ನು ಅಳವಡಿಸಲಾಗಿತ್ತು. ಕಳೆದ ನಾಲ್ಕು ತಿಂಗಳ ಹಿಂದೆ ಒಂದೇ ರಾತ್ರಿಯಲ್ಲಿ ಆ ಭಾಗದಿಂದ ಅಂದಾಜು 20 ಬ್ಯಾಟರಿಗಳನ್ನು ಕಳವುಗೈಯಲಾಗಿದೆ ಎಂದು ಹೇಳಲಾಗುತ್ತಿದೆ. ಉಳಿದಂತೆ ಜಾರ್ಕಳ ಭಾಗದಲ್ಲಿ ಅಧಿಕ ಬ್ಯಾಟರಿಗಳ ಕಳವಾಗಿದೆ.

ಸೂಕ್ತ ಭದ್ರತೆಯಿಲ್ಲ
ವಿದ್ಯುತ್‌ ದೀಪದ ವ್ಯವಸ್ಥೆ ಇಲ್ಲದ ಕೆಲವು ಭಾಗಗಳಿಗೆ ಸೋಲಾರ್‌ ಲೈಟ್‌ಗಳನ್ನು ಅಳವಡಿಸಲಾಗಿತ್ತು. ಆದರೆ ಅದಕ್ಕೆ ಸೂಕ್ತ ಭದ್ರತೆ ಇಲ್ಲದ ಕಾರಣ 36 ದೀಪಗಳ ಬ್ಯಾಟರಿ ಕಳವಾಗಿದೆ. ಇನ್ನು ಮುಂದೆ ಅದನ್ನು ಸರಿಪಡಿಸಿದರೂ ಉಳಿಯುತ್ತದೆ ಎನ್ನುವ ಗ್ಯಾರಂಟಿಯೂ ಪಂಚಾಯತ್‌ಗೆ ಇಲ್ಲ. ಹೀಗಾಗಿ ವಿದ್ಯುತ್‌ ಸಂಪರ್ಕ ವ್ಯವಸ್ಥೆ ಇರುವ ಹಾಗೂ ವಿದ್ಯುತ್‌ ತಂತಿ ಎಳೆದು ಸಾಧ್ಯವಾಗುವ ಭಾಗಗಳಿಗೆ ವಿದ್ಯುತ್‌ ದೀಪಗಳನ್ನೇ ಅಳವಡಿಸಲು ಪಂಚಾಯತ್‌ ಚಿಂತನೆ ನಡೆಸಿದೆ.

ಇನ್ನೂ ಪತ್ತೆಯಾಗದ ಕಳ್ಳರುಳ್ಳತನದ ಬಗ್ಗೆ ಈಗಾಗಲೇ ಕಾರ್ಕಳ ನಗರ ಠಾಣೆಗೆ ಅಂದು ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ. ಅಲ್ಲದೇ ನಕ್ರೆಯಲ್ಲಿ ಕಳ್ಳತನ ನಡೆಸಿ ಪರಾರಿಯಾಗುತ್ತಿದ್ದ ವೇಳೆ ಸ್ಥಳೀಯರೊಬ್ಬರು ವಾಹನದ ಸಂಖ್ಯೆಯನ್ನು ನೋಡಿ ಪಂಚಾಯತ್‌ಗೆ ತಿಳಿಸಿದ್ದು, ಆ ಸಂಖ್ಯೆಯನ್ನೂ ಠಾಣೆಗೆ ನೀಡಲಾಗಿದೆ ಎನ್ನಲಾಗುತ್ತಿದೆ.

ಸೋಲಾರ್‌ ದೀಪ ಅಳವಡಿಕೆ ಕಷ್ಟ
ಪಂಚಾಯತ್‌ನ ಗ್ರಾಮಾಂತರ ಪ್ರದೇಶಗಳನ್ನು ಆಯ್ದುಕೊಂಡು ಸೋಲಾರ್‌ ದೀಪಗಳನ್ನು ಅಳವಡಿಸಲಾಗಿತ್ತು. ಆದರೆ ಅಂತಹ ಪ್ರದೇಶಗಳಲ್ಲಿ ಸೋಲಾರ್‌ ದೀಪಗಳನ್ನು ಅಳವಡಿಸುವುದು ಕಷ್ಟ. ಆ ಬ್ಯಾಟರಿ ಬಾಕ್ಸ್‌ಗೆ ಲಾಕ್‌ ಇರುವುದಿಲ್ಲ. ಮೊಬೈಲ್‌ ಬ್ಯಾಟರಿಯಲ್ಲಿರುವ ಸಂಖ್ಯೆಯಂತೆ ಸೋಲಾರ್‌ ದೀಪಗಳ ಪ್ರತೀ ಬ್ಯಾಟರಿಗಳಿಗೆ ಸಂಖ್ಯೆಗಳಿವೆ.
– ಸುಧಾಕರ್‌ ಶೆಟ್ಟಿ, 
ಕುಕ್ಕುಂದೂರು ಗ್ರಾಪಂ. ಪಿಡಿಒ

ಟಾಪ್ ನ್ಯೂಸ್

Kota–Railway

Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

1-weqwe

Lebanon ಪೇಜರ್‌ ಸ್ಫೋ*ಟಕ್ಕೆ ಮೊಸಾದ್‌ 2 ವರ್ಷದ ಯೋಜನೆ ಹೇಗಿತ್ತು?

Crime-2-Sulya

Sulya: ವಾರಂಟ್‌ ಆರೋಪಿ ಪರಾರಿ ಪ್ರಕರಣ; ಆರೋಪಿಯ ಮಾಹಿತಿಗೆ ಪೊಲೀಸರ ಮನವಿ

Shabarimale

Sabarimala;ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್‌ಲೈನ್‌ ನೋಂದಣಿ ಕಡ್ಡಾಯ

1-canda

Canada: ವೇಟರ್‌ ಕೆಲಸಕ್ಕೆ 3,000 ಭಾರತೀಯ ವಿದ್ಯಾರ್ಥಿಗಳ ಕ್ಯೂ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

9

Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್‌ ಸ್ಪೋರ್ಟ್ಸ್ ಮತ್ತೆ ಆರಂಭ

8

Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

Mangaluru: ಅಸಭ್ಯ ವರ್ತನೆ, ಹಲ್ಲೆ ಘಟನೆ ಯುವಕನನ್ನು ಕೆಲಸದಿಂದ ತೆಗೆದ ಮಾಲಕರು

POlice

Gangolli: ಶ್ರೀ ಮಹಾಂಕಾಳಿ ದೇಗುಲದ ಅಡವಿರಿಸಿದ್ದ 256 ಗ್ರಾಂ ಚಿನ್ನಾಭರಣ ವಶ

Kota–Railway

Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.