ಆಹಾರ್ ನಿಯೋಗದಿಂದ ಬಿಎಂಸಿ ವಾರ್ಡ್ ಅಧಿಕಾರಿ ಭೇಟಿ
Team Udayavani, Jul 3, 2018, 2:57 PM IST
ಮುಂಬಯಿ: ಹೊಟೇಲಿಗರ ಪ್ರತಿಷ್ಠಿತ ಸಂಸ್ಥೆಯಾಗಿರುವ ಆಹಾರ್ನ ನಿಯೋಗವೊಂದು ಮುಂಬಯಿ ಮಹಾನಗರ ಪಾಲಿಕೆಯ ವಾರ್ಡ್ ಅಧಿಕಾರಿಯನ್ನು ಭೇಟಿಯಾಗಿ ಹೊಟೇಲಿಗರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಸಲ್ಲಿಸಿತು.
ಆಹಾರ್ನ ಉಪಾಧ್ಯಕ್ಷ ಕೃಷ್ಣ ವಿ. ಶೆಟ್ಟಿ ಅವರ ನೇತೃತ್ವದಲ್ಲಿ ಇತರ ಪದಾಧಿಕಾರಿಗಳು ಮತ್ತು ಸದಸ್ಯರು ಮುಂಬಯಿ ಮಹಾನಗರ ಪಾಲಿಕೆಯ ವಾರ್ಡ್ ಅಧಿಕಾರಿಯನ್ನು ಭೇಟಿಯಾಗಿ ಮಾನ್ಸೂನ್ ಶೆಡ್, ಗಾರ್ಬೆಜ್ ವ್ಯವಸ್ಥೆ, ನೂತನ ಫಾಯರ್ ನಿಯಮಾವಳಿಗಳು, ಸೈನ್ಬೋರ್ಡ್ ಲೈಸನ್ಸ್ ನವೀಕರಣ ಸಹಿತ ವಿವಿಧ ವಿಷಯಗಳ ಕುರಿತಂತೆ ಚರ್ಚಿಸಿ ವಿವಿಧ ಸಮಸ್ಯೆಗಳಿಗೆ ಅನುಗುಣವಾಗಿ ಮನವಿ ಸಲ್ಲಿಸಿದರು.
ಹೊಟೇಲಿಗರು ಅನುಭವಿಸುತ್ತಿ ರುವ ವಿವಿಧ ರೀತಿಯ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಇತ್ಯರ್ಥ ಗೊಳಿಸಲು ಹಾಗೂ ಮುಂಬಯಿ ಮಹಾನಗರ ಪಾಲಿಕೆ ಮತ್ತು ಆಹಾರ್ ಸಂಸ್ಥೆಯ ಸದಸ್ಯರ ಮಧ್ಯೆ ಸ್ನೇಹ ಸಂಪರ್ಕ ನಿರ್ಮಿಸುವ ಉದ್ದೇಶ ವನ್ನಿಟ್ಟುಕೊಂಡು ಆಹಾರ್ ನಿಯೋಗವು ಈ ಸಂದರ್ಭದಲ್ಲಿ ಚರ್ಚಿಸಿತು.
ಆಹಾರ್ನ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ವಿವಿಧ ವಲಯಗಳ ಪದಾಧಿಕಾರಿಗಳು, ಉಪಸಮಿತಿಗಳ ಪದಾಧಿಕಾರಿಗಳು, ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ
Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ
ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್: ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಯಕ್ಷಧ್ರುವ ಪಟ್ಲ ಫೌಂಡೇಶನ್: 75 ದಿನಗಳ ಯಕ್ಷಯಾನ ಸಮಾರೋಪ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.