ಅರೆಬರೆ ಹೆದ್ದಾರಿ ಕಾಮಗಾರಿ: ಪ್ರಾಣಕ್ಕೆ ಎರವಾಗುವ ಭೀತಿ


Team Udayavani, Jul 4, 2018, 2:00 AM IST

kamagari-3-7.jpg

ಕುಂದಾಪುರ: ಮಳೆ ಬಿರುಸುಗೊಂಡಿದ್ದು, ಈ ಮಧ್ಯೆ ಅರೆಬರೆಯಾಗಿರುವ ಕುಂದಾಪುರ – ಕಾರವಾರ ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿಯು ದಿನಕ್ಕೊಂದು ಅಧ್ವಾನವನ್ನು ಸೃಷ್ಟಿಸುತ್ತಿದೆ. ಕುಂದಾಪುರದ ವಿನಾಯಕ ಚಿತ್ರ ಮಂದಿರ ಬಳಿಯಿಂದ ಆರಂಭಗೊಂಡು, ಶಾಸ್ತ್ರಿ ಸರ್ಕಲ್‌ ಬಳಿ, ತಲ್ಲೂರು, ಹೆಮ್ಮಾಡಿಯಾಗಿ ತ್ರಾಸಿಯವರೆಗೂ ಹೆದ್ದಾರಿಯಲ್ಲಿ ಬೃಹತ್‌ ಗಾತ್ರದ ಹೊಂಡಗಳು ಕಾಣಿಸಿಕೊಂಡಿದ್ದು, ವಾಹನ ಸವಾರರ ಪ್ರಾಣಕ್ಕೆ ಎರವಾಗುವ ಭೀತಿ ಎದುರಾಗಿದೆ. ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು, ಅದರಲ್ಲೂ ದ್ವಿಚಕ್ರ ವಾಹನ ಸವಾರರಂತೂ ಪ್ರಾಣವನ್ನು ಕೈಯಲ್ಲಿಟ್ಟು ಕೊಂಡೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. 

ರಾಶಿ ಹಾಕಿದ ಮಣ್ಣು ರಸ್ತೆಗೆ
ಚತುಷ್ಪಥ ಕಾಮಗಾರಿಯ ವೇಳೆ ತಲ್ಲೂರು ಪೇಟೆಯಿಂದ ರಾಜಾಡಿ ಸೇತುವೆಯವರೆಗೆ ರಸ್ತೆಯ ಬಲಬದಿಗೆ ರಾಶಿ ಹಾಕಿದ ಮಣ್ಣು ಮಳೆಯಿಂದಾಗಿ ಕುಸಿದಿದ್ದು, ರಸ್ತೆಗೆ ಬಿದ್ದ ಪರಿಣಾಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ತಾತ್ಕಾಲಿಕ ರಸ್ತೆ ಮಾಡುವ ವೇಳೆಯಲ್ಲಿ ಮಣ್ಣನ್ನು ಗಟ್ಟಿಗೊಳಿಸದೆ, ಸೇಡಿ ಮಣ್ಣಿನ ಮೇಲೆ ಡಾಮರು ಹಾಕಲಾಗಿತ್ತು. ಆದರೆ ಕಳೆದ ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹೆದ್ದಾರಿಯ ಎಡ ಭಾಗದಲ್ಲಿ ಕುಸಿತ ಉಂಟಾಗಿದ್ದು, ವಾಹನಗಳ ಸಂಚಾರಕ್ಕೆ ನಿತ್ಯವೂ ಅಡಚಣೆಯಾಗುತ್ತಿದೆ. ನಾವುಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡಿರುವ ಬೃಹತ್‌ ಗಾತ್ರದ ಹೊಂಡಕ್ಕೆ ವಾಹನ ಸವಾರರು ಬೀಳಬಾರದು ಎಂದು ಸ್ಥಳೀಯರು ಪಪ್ಪಾಯಿ ಗಿಡವೊಂದನ್ನು ನೆಟ್ಟಿದ್ದಾರೆ.

ಟ್ರಾಫಿಕ್‌ ಜಾಂ
ಕುಂದಾಪುರದಿಂದ ಹೆಮ್ಮಾಡಿಯವರೆಗೆ ಹದಗೆಟ್ಟ ಹೆದ್ದಾರಿಯಿಂದಾಗಿ ನಿತ್ಯ ಬೆಳಗ್ಗೆ ಹಾಗೂ ಸಂಜೆ ಸಮಯದಲ್ಲಿ ವಾಹನ ದಟ್ಟಣೆ ಹೆಚ್ಚಿರುವುದರಿಂದ ಟ್ರಾಫಿಕ್‌ ಜಾಂ ಉಂಟಾಗುತ್ತಿದೆ.

ಎರಡೇ ದಿನದಲ್ಲಿ ತೇಪೆ ಮಾಯ
ತಲ್ಲೂರಿನ ಹೆದ್ದಾರಿಯಲ್ಲಿ ಹೊಂಡ- ಗುಂಡಿಗಳು ಹೆಚ್ಚಿರುವ ಕಡೆ ಸಿಮೆಂಟ್‌ ಮಿಶ್ರಿತವಾದ ಜಲ್ಲಿಯ ತೇಪೆ ಹಾಕುವ ಕಾರ್ಯ ಮಂಗಳವಾರ ನಡೆದಿತ್ತು. ಆದರೆ ಆ ತೇಪೆಯೂ ಎರಡೇ ದಿನಗಳಲ್ಲಿ ಎದ್ದು ಹೋಗಿದೆ.

ಟಾಪ್ ನ್ಯೂಸ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BUS driver

Bus ticket; ದೀಪಾವಳಿ ಸಂಭ್ರಮಕ್ಕೆ ಬಸ್‌ ಟಿಕೆಟ್‌ ದರ ತಣ್ಣೀರು

1-mahe

MAHE-Mangalore University ಒಡಂಬಡಿಕೆ : ಮೂಳೆ ಅಲೋಗ್ರಾಫ್ಟ್‌ಗಳ ಗಾಮಾ ವಿಕಿರಣ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

1-ottin

Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bagheera movie song out

Bagheera ರುಧಿರ ಗಾನ…; ಶ್ರೀಮುರಳಿ ಸಿನಿಮಾದ ಹಾಡು ಬಂತು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.