ಮೈತ್ರಿಧರ್ಮ: ಎ.ಟಿ.ರಾಮಸ್ವಾಮಿ ಕಿವಿಮಾತು


Team Udayavani, Jul 4, 2018, 6:00 AM IST

p-35.jpg

ವಿಧಾನಸಭೆ: ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್‌ -ಜೆಡಿಎಸ್‌ ಪಕ್ಷಗಳ ನಡವಳಿಕೆ, ಮೈತ್ರಿ ಧರ್ಮ ಪಾಲನೆ ಕುರಿತು ಹಿರಿಯ ಸದಸ್ಯ
ಎ.ಟಿ. ರಾಮಸ್ವಾಮಿ ಸದನದಲ್ಲಿ ತಮ್ಮದೇ ಆದ ಶೈಲಿಯಲ್ಲಿ ಕಿವಿಮಾತು ಹೇಳಿದರು. ಜತೆಗೆ, ಪ್ರತಿಪಕ್ಷ ಬಿಜೆಪಿಗೂ ಮಾತಿನಲ್ಲೇ ಬಾಣ ಬಿಟ್ಟು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಖ್ಯಾಬಲ ಮುಖ್ಯ. ಯಾರಿಗೂ ಬಹುಮತ ಬರದಿದ್ದಾಗ ಸಂಖ್ಯಾಬಲ ಒಪ್ಪಿ ಸರ್ಕಾರ ಒಳ್ಳೆಯ ಕೆಲಸ ಮಾಡಲು ರಚನಾತ್ಮಕ ಸಲಹೆ ಹಾಗೂ ಹೋರಾಟ ಮಾಡಿ ಎಂದು ಹೇಳಿದರು. ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಪರ ಮಾತನಾಡಿದ ಅವರು, ಎರಡೂ ಪಕ್ಷಗಳಲ್ಲಿ ಸಚಿವ ಸ್ಥಾನಕ್ಕಾಗಿ ನಡೆಯುತ್ತಿರುವ ಪೈಪೋಟಿಯನ್ನೂ ಟೀಕಿಸಿದರು.

ರಾಮಸ್ವಾಮಿ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿಯ ಜೆ.ಸಿ.ಮಾಧುಸ್ವಾಮಿ, ನೀವು ನಿಮ್ಮ ಸಮನ್ವಯ ಸಮಿತಿ, ಪಕ್ಷದ ಶಾಸಕಾಂಗ ಸಭೆಯಲ್ಲಿ ಮಾತನಾಡುವುದನ್ನು ಇಲ್ಲಿ ಮಾತನಾಡುತ್ತಿದ್ದೀರಿ. ನಮಗೆ ಅದು ಸಂಬಂಧವಿಲ್ಲ. ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲೆ ಮಾತನಾಡಿ ಎಂದು ತಿಳಿಸಿದರು. ಕಾಂಗ್ರೆಸ್‌, ಜೆಡಿಎಸ್‌ನ ನಡುವೆ ಮೈತ್ರಿಧರ್ಮ ಪಾಲನೆ, ಸಚಿವಗಿರಿಗೆ ಕಿತ್ತಾಟ ನಮಗೇಕೆ ಹೇಳುತ್ತೀರಿ ಎಂದು ತರಾಟೆಗೆ ತೆಗೆದುಕೊಂಡರು. ಆಗ, ಎ.ಟಿ. ರಾಮಸ್ವಾಮಿ, ಬರುತ್ತೇನೆ, ನಾನು ಅಲ್ಲಿಗೆ ಬರುತ್ತೇನೆ. ಆದರೆ, ಸಮ್ಮಿಶ್ರ ಸರ್ಕಾರ ರಚನೆಯಾದ ನಂತರ ವ್ಯಕ್ತವಾದ ಅಭಿಪ್ರಾಯ, ಹೇಳಿಕೆಗಳ ಬಗ್ಗೆ ಪ್ರಸ್ತಾಪಿಸಿದೆ ಅಷ್ಟೇ ಎಂದು ಮಾತು ಮುಂದುವರಿಸಿದರು. ಸಿದ್ದರಾಮಯ್ಯ ಅವರನ್ನು ಜಿ.ಟಿ.ದೇವೇಗೌಡರ ಮೂಲಕ ಸೋಲಿಸಿದಿರಿ ಎಂಬ ಮಾತುಗಳನ್ನು ಆಡುತ್ತೀರಿ. ಇದೇ ಯಡಿಯೂರಪ್ಪ ಅವರು ಮೈಸೂರಿಗೆ ಹೋಗಿ 150 ಸ್ಥಾನ ಗೆಲ್ಲುವುದು ನಮಗೆ ಮುಖ್ಯವಲ್ಲ, ಸಿದ್ದರಾಮಯ್ಯ ಸೋಲುವುದು ನಮಗೆ ಮುಖ್ಯ ಎಂದು ಹೇಳಿಲ್ಲವೇ? ಎಂದು ಟಾಂಗ್‌ ನೀಡಿದರು.

ರಾಜಕಾರಣದಲ್ಲಿ ಗೆರೆಗಳಿಲ್ಲ, ಮೌಲ್ಯಗಳನ್ನು ಕಿತ್ತೆಸೆದು ಬಂದಿದ್ದೇವೆ. ಆ ನೋವು ನನಗೂ ಕಾಡುತ್ತಿದೆ. 24 ಕ್ಯಾರೆಟ್‌ ಬಂಗಾರದಲ್ಲಿ ಯಾರೂ ಒಡವೆ ಮಾಡಲು ಆಗುವುದಿಲ್ಲ, 22 ಕ್ಯಾರೆಟ್‌ ಅಂತಾರೆ ಮತ್ತೆ ಕೆಲವರು 20 ಕ್ಯಾರೆಟ್‌ಗೂ ಇಳಿಸಬಹುದು ಆ ನಂತರ ರೋಲ್ಡ್‌ ಗೋಲ್ಡ್‌ ಸಹ ಆಗಬಹುದು.
● ಎ.ಟಿ.ರಾಮಸ್ವಾಮಿ, ಜೆಡಿಎಸ್‌ ಸದಸ್ಯ

ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ
ನಿರ್ಣಯ ಪರ ಮಾತನಾಡಿದ ರಾಮಸ್ವಾಮಿ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

Result: ಇಂದು ಯುಜಿನೀಟ್‌ ಪರಿಷ್ಕೃತ ತಾತ್ಕಾಲಿಕ ಫ‌ಲಿತಾಂಶ ಪ್ರಕಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.