ಸಂಪೂರ್ಣ ಹದಗೆಟ್ಟ ಸೂಡ -ಪಳ್ಳಿ ಸಂಪರ್ಕ ರಸ್ತೆಗೆ ಬೇಕಿದೆ ಕಾಯಕಲ್ಪ


Team Udayavani, Jul 4, 2018, 2:15 AM IST

palli-road-4-7.jpg

ಬೆಳ್ಮಣ್‌ : ಪಳ್ಳಿ- ಸೂಡಾ ಸಂಪರ್ಕ ರಸ್ತೆಯು ಪಿಲಾರುಖಾನದಿಂದ ಪಳ್ಳಿಯವರೆಗೆ ಸಂಪೂರ್ಣ ಹೊಂಡ ಗುಂಡಿಗಳಿಂದ ಕೂಡಿದ್ದು ಮಳೆಗಾಲಕ್ಕೆ ವಾಹನ, ಪಾದಚಾರಿಗಳ ಸಂಚಾರ ದುಸ್ತರವೆನಿಸಿದೆ. ಈ ರಸ್ತೆಗೆ ಮರು ಡಾಮರೀಕರಣ ನಡೆಸಬೇಕೆಂದು ಈ ಭಾಗದ ಜನ ಆಗ್ರಹಿಸಿದ್ದಾರೆ. ರಸ್ತೆಯುದ್ದಕ್ಕೂ ದೈತ್ಯ ಗಾತ್ರದ ಹೊಂಡಗಳು ನಿರ್ಮಾಣಗೊಂಡ ಪರಿಣಾಮ ವಾಹನ ಸವಾರರು ನಿತ್ಯ ಎಡವಟ್ಟು ಮಾಡಿಕೊಳ್ಳುತ್ತಿದ್ದಾರೆ. ಪಿಲಾರುಖಾನದಿಂದ ಸೂಡ ಮಾರ್ಗವಾಗಿ ಪಳ್ಳಿ ನಿಂಜೂರು ಕಡೆ ಸಾಗುವ ಈ ರಸ್ತೆ ಸುಮಾರು 5ರಿಂದ 6 ಕಿ.ಮೀ ಉದ್ದಕ್ಕೂ ಸಂಪೂರ್ಣ ಕಿತ್ತು ಹೋಗಿದ್ದು, ಜಲ್ಲಿ ಹಾಗೂ ಟಾರುಗಳನ್ನು ಹುಡುಕಾಡುವ ಸ್ಥಿತಿ ನಿರ್ಮಾಣಗೊಂಡಿದೆ.

ಬೆಳ್ಮಣ್‌, ಶಿರ್ವ ಭಾಗದಿಂದ ಪಳ್ಳಿ ನಿಂಜೂರು ಹಾಗೂ ಬೈಲೂರು, ಕಾರ್ಕಳಕ್ಕೆ ತೆರಳಲು ಇದೇ ಹತ್ತಿರದ ರಸ್ತೆಯಾಗಿದೆ. ರಸ್ತೆಯ ಪರಿಸ್ಥಿತಿ ಗಮನಿಸಿರುವ ಬಾಡಿಗೆ ವಾಹನಗಳೂ ಕೂಡ ಇಲ್ಲಿಗೆ ಬರಲು ಹಿಂದೇಟು ಹಾಕುತ್ತಿವೆ. ಹೀಗಾಗಿ ಗ್ರಾಮಸ್ಥರು ಕೆಲವು ಸಂದರ್ಭ ಕಾಲು ನಡಿಗೆಯಲ್ಲೇ ಸಂಚಾರ ನಡೆಸುವಂತಹ ಪರಿಸ್ಥಿತಿಯೂ ನಿರ್ಮಾಣಗೊಂಡಿದೆ.


ಟಿಪ್ಪರ್‌ ಗಳ ಸಂಚಾರವೇ ಕಾರಣ

ಪಳ್ಳಿ ಹಾಗೂ ಸೂಡದಲ್ಲಿ ಕಲ್ಲಿನ ಕೋರೆಗಳು ಅಧಿಕವಾಗಿರುವ ಪರಿಣಾಮ ಘನ ವಾಹನಗಳು ಹೆಚ್ಚಾಗಿ ಇದೇ ರಸ್ತೆಯಲ್ಲಿ ಸಾಗುತ್ತವೆ. ಈ ಕಾರಣಕ್ಕೇ ರಸ್ತೆಯಲ್ಲಿ ಹೊಂಡ ಗುಂಡಿಗಳು ನಿರ್ಮಾಣವಾಗಿವೆ ಎನ್ನುತ್ತಾರೆ ಸ್ಥಳೀಯರು. ಸಮಸ್ಯೆಯನ್ನು ಹಲವು ಬಾರಿ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಗ್ರಾಮಸ್ಥರ ಆರೋಪ.

ಶಾಸಕರಿಗೆ ಮನವಿ
ಈ ರಸ್ತೆ ಜಿಲ್ಲಾ ಪಂಚಾಯತ್‌ ರಸ್ತೆಯಾಗಿದ್ದು ಶಿರ್ವ, ಮುದರಂಗಡಿ, ಬೆಳ್ಮಣ್‌, ಪಳ್ಳಿ,  ಪಂಚಾಯತ್‌ಗಳಿಗೆ ಸಂಬಂಧಪಟ್ಟಿದೆ. ಈಗಾಗಲೇ ಕಾರ್ಕಳ ಶಾಸಕ ವಿ.ಸುನಿಲ್‌ ಕುಮಾರ್‌ ಅವರಿಗೆ ಮನವಿ ಮಾಡಲಾಗಿದ್ದು ಸ್ಪಂದಿಸುವ ಭರವಸೆ ನೀಡಿದ್ದಾರೆ.
– ಸೂಡಾ ಶಂಕರ ಕುಂದರ್‌, ಗ್ರಾ.ಪಂ. ಸದಸ್ಯ, ಬೆಳ್ಮಣ್‌

ರಸ್ತೆಯನ್ನು ದುರಸ್ತಿಮಾಡಿ
ಘನವಾಹನಗಳು ಹೆಚ್ಚಾಗಿ ಈ ಭಾಗದಲ್ಲಿ ಸಂಚಾರ ನಡೆಸುತ್ತಿರುವ ಕಾರಣ ರಸ್ತೆ ತೀರ ಹದಗೆಟ್ಟಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಬೇಕಾಗಿದೆ.
– ಪ್ರತಿಮಾ, ಸ್ಥಳೀಯರು

ಹೊಂಡಗಳಿಗೆ ಮುಕ್ತಿ ಕರುಣಿಸಿ
ರಸ್ತೆಯುದ್ದಕ್ಕೂ ಸಂಪೂರ್ಣ ಹೊಂಡಗುಂಡಿಗಳು ತುಂಬಿದ್ದು ಇಲ್ಲಿ ಸಂಚಾರ ನಡೆಸುವುದೇ ಅಸಾಧ್ಯ. ಕೂಡಲೇ ಗುಂಡಿಗಳಿಗೆ ಮುಕ್ತಿ ಕರುಣಿಸಿ.
– ಸತೀಶ್‌ ಪಿಲಾರು, ರಿಕ್ಷಾ ಚಾಲಕ

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.