ಕೋಟ: ಸೊಳ್ಳೆ ಕಾಟಕ್ಕೆ ಇಲ್ಲ ಲಗಾಮು


Team Udayavani, Jul 4, 2018, 3:10 AM IST

solle-4-7.jpg

ವಿಶೇಷ ವರದಿ – ಕೋಟ: ಮಳೆ ಜತೆಗೆ ಕೋಟ ಭಾಗದಲ್ಲಿ ಸೊಳ್ಳೆ ಕಾಟ ಜೋರಾಗಿದ್ದು, ಜನರಿಗೆ ನಿದ್ರೆ ಇಲ್ಲದ ರಾತ್ರಿಯನ್ನು ಉಂಟುಮಾಡಿದೆ. ಚರಂಡಿ, ಕೊಳಚೆ ಪ್ರದೇಶಗಳನ್ನು ಶುಚಿಗೊಳಿಸದ ಪರಿಣಾಮ ಸಮಸ್ಯೆ ಹೆಚ್ಚಿದ್ದು, ಈ ಬಗ್ಗೆ ಸ್ಥಳೀಯಾಡಳಿತವೂ ತಲೆ ಕೆಡಿಸಿ ಕೊಂಡಿಲ್ಲ. ಸಾಸ್ತಾನ ಮೀನು ಮಾರುಕಟ್ಟೆ ಸೊಳ್ಳೆ ಉತ್ಪಾದನೆ ಕೇಂದ್ರ ಸಾಸ್ತಾನದ ಮೀನು ಮಾರುಕಟ್ಟೆ ತಾತ್ಕಾಲಿಕವಾಗಿ ಕೋಡಿ ರಸ್ತೆಗೆ ತಾಗಿಕೊಂಡು ನಡೆಯುತ್ತಿದ್ದು ಇಲ್ಲಿನ ತ್ಯಾಜ್ಯ ನೀರು ರಸ್ತೆಯಲ್ಲಿ ನಿಲ್ಲುತ್ತಿದೆ. ಬುಧವಾರ ನಡೆಯುವ ಸಂತೆಯ ತ್ಯಾಜ್ಯಗಳನ್ನೂ ರಸ್ತೆ ಪಕ್ಕದಲ್ಲಿ ರಾಶಿ ಹಾಕಲಾಗುತ್ತದೆ. ಇದರಿಂದ ಇಲ್ಲೊಂದು ತ್ಯಾಜ್ಯ ಗುಂಡಿ ಸೃಷ್ಟಿಯಾಗಿ ಸೊಳ್ಳೆ ಸಮಸ್ಯೆ ವಿಪರೀತವಾಗಿದೆ. ಇದು ಸಾಂಕ್ರಾಮಿಕ ರೋಗಗಳಿಗೆ ಕಾರಣವಾಗಬಹುದು ಎನ್ನುವ ಆತಂಕ ಸ್ಥಳೀಯರಲ್ಲಿದೆ.

ಸಾಲಿಗ್ರಾಮ ಮೀನು ಮಾರುಕಟ್ಟೆಯದ್ದೂ ಅದೇ ಕಥೆ ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ ಮೀನು ಮಾರುಕಟ್ಟೆಯಲ್ಲಿ ಕೊಳಚೆ ನೀರು ನಿಲ್ಲುತ್ತದೆ ಹಾಗೂ ಪೊದೆಗಳು ಬೆಳೆದಿವೆ. ಚರಂಡಿಯಲ್ಲಿ ತ್ಯಾಜ್ಯ ನೀರು ನಿಂತು ಸೊಳ್ಳೆ ವಂಶೋತ್ಪತ್ತಿಗೆ ಕಾರಣವಾಗಿದೆ. ಕೋಟ ಮೂರುಕೈ ಅಘೋರೇಶ್ವರ ದೇವಸ್ಥಾನದ ತಿರುವಿನಿಂದ ಸುಮಾರು 200 ಮೀ. ತನಕ ಚರಂಡಿ ವ್ಯವಸ್ಥೆ ಸರಿ ಇಲ್ಲದೆ ರಸ್ತೆಯ ಮೇಲೆ ನೀರು ನಿಲ್ಲುತ್ತಿದೆ. ಸ್ಥಳೀಯ ವಾಣಿಜ್ಯ ಕಟ್ಟಡದ ಕೊಳಚೆ ನೀರು ಕೂಡ ರಸ್ತೆಯಲ್ಲೇ ಹರಿಯುತ್ತಿದೆ.

ತ್ಯಾಜ್ಯ ನೀರು 
ಕೋಟ ಗ್ರಾ.ಪಂ. ವ್ಯಾಪ್ತಿಯ ಅಮೃತೇಶ್ವರೀ ದೇವಸ್ಥಾನದ ಸಮೀಪದ ಕಾರಂತ ಬೀದಿಯಲ್ಲಿ ಚರಂಡಿಯಲ್ಲಿ ತ್ಯಾಜ್ಯ ನೀರು ನಿಲ್ಲುತ್ತದೆ. ಪೊದೆಗಳೂ ಆವರಿಸಿವೆ. ಜತೆಗೆ ಅಕ್ರಮ ಮರಳುಗಾರಿಕೆ ಮಾಡಿದ ದೋಣಿಗಳನ್ನು ವಶಪಡಿಸಿ ಪೊಲೀಸ್‌ ಠಾಣೆಯಲ್ಲಿ ಇಡಲಾಗಿದ್ದು, ಇದರಲ್ಲೂ ನೀರು ನಿಂತು ಸೊಳ್ಳೆ ಉತ್ಪಾದನೆಯಾಗುತ್ತಿದೆ. ರಾ.ಹೆ.ಯ ಚರಂಡಿಗಳಲ್ಲೂ ಹೂಳು, ತ್ಯಾಜ್ಯಗಳು ಸೇರಿ ಸಮಸ್ಯೆಯಾಗುತ್ತಿದೆ.

ಬೇಕಾಬಿಟ್ಟಿ ಫಾಗಿಂಗ್‌ ಆಗಲ್ಲ  
ಈಗ ಫಾಗಿಂಗ್‌ ಮಾಡಲೂ ಕೆಲವೊಂದು ನಿಯಮಗಳಿವೆ. ಇದರಲ್ಲಿ ಉಪಯೋಗಿಸುವ ಕೀಟನಾಶಕ ವಿಷಕಾರಿಯಾಗಿರುವುದರಿಂದ ಹೆಚ್ಚು ಬಳಸಿದರೆ ಅಪಾಯ ಎನ್ನುವ ನಿಟ್ಟಿನಲ್ಲಿ ಆರೋಗ್ಯಾಧಿಕಾರಿಗಳ ಸಲಹೆ ಪಡೆದು ನಿಗದಿತ ಪ್ರಮಾಣದಲ್ಲಿ ಉಪಯೋಗಿಸಬೇಕು ಎಂಬ ನಿಯಮವಿದೆ. ಮಲೇರಿಯಾ, ಡೆಂಗ್ಯೂ ಇತ್ಯಾದಿಗಳು ಅಪಾಯಕಾರಿ ಹಂತಕ್ಕೆ ತಲುಪಿದಾಗ ಮಾತ್ರ ಇಲಾಖೆ ಫಾಗಿಂಗ್‌ ಗೆ ಸಲಹೆ ನೀಡುತ್ತದೆ. ಸೊಳ್ಳೆಗಳನ್ನು ಮೂಲದಲ್ಲೇ ನಾಶಪಡಿಸಬೇಕು. ಇದಕ್ಕಾಗಿ ಬೇವಿನೆಣ್ಣೆ  ಇತ್ಯಾದಿ ಬಳಸಿ ಹತೋಟಿ ಮಾಡಬೇಕೆನ್ನುವುದು ಆರೋಗ್ಯ ಇಲಾಖೆಯ ಸಲಹೆಯಾಗಿದೆ.   

ಸಾರ್ವಜನಿಕರಿಗೂ ಬೇಕು ಕಾಳಜಿ 
ಸೊಳ್ಳೆ ಸಮಸ್ಯೆಗೆ ಕೇವಲ ಸ್ಥಳೀಯಾಡಳಿತವನ್ನು ದೂರಿ ಪ್ರಯೋಜನವಿಲ್ಲ. ಸಾರ್ವಜನಿಕರಲ್ಲೂ ಈ ಕುರಿತು ಕಾಳಜಿ ಇರಬೇಕು. ಮನೆಯ ಅಕ್ಕ-ಪಕ್ಕ ಸ್ವಚ್ಛವಾಗಿಡುವುದು, ಸಾರ್ವಜನಿಕರ ಸ್ಥಳದಲ್ಲಿ ಕಸ ಎಸೆಯದಿರುವುದು, ರಜಾ ದಿನಗಳಲ್ಲಿ ನೆರೆಹೊರೆಯವರೊಂದಿಗೆ ಮನೆಯ ಅಕ್ಕ-ಪಕ್ಕದ ರಸ್ತೆಗಳನ್ನು ಸ್ವಚ್ಛವಾಗಿಟ್ಟುಕೊಂಡರೆ ಸಮಸ್ಯೆ ಸ್ವಲ್ಪಮಟ್ಟಿಗೆ ಪರಿಹಾರವಾಗಲಿದೆ.

ಗುತ್ತಿಗೆವಹಿಸಿಕೊಂಡವರು ಸ್ವಚ್ಛ ಮಾಡಬೇಕು
ಸಾಸ್ತಾನ ಮೀನು ಮಾರುಕಟ್ಟೆಯ ನಿರ್ವಹಣೆಯ ಗುತ್ತಿಗೆ ನೀಡಲಾಗಿದೆ. ಅಲ್ಲಿ ಸರಿಯಾಗಿ ತ್ಯಾಜ್ಯ ವಿಲೇವಾರಿ ಮಾಡದಿರುವುದರಿಂದಲೇ ಈ ರೀತಿ ಸಮಸ್ಯೆಯಾಗಿದೆ. ಈ ಕುರಿತು ಪರಿಶೀಲಿಸಿ ಕ್ರಮಕೈಗೊಳ್ಳುತ್ತೇವೆ.
– ಸುಭಾಷ್‌, ಪಿ.ಡಿ.ಒ. ಐರೋಡಿ ಗ್ರಾ.ಪಂ.

 ನೋಟಿಸ್‌ ನೀಡಿದ್ದೇವೆ
ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ ಎಲ್ಲಾ ಅಂಗಡಿ ಮಾಲಕರಿಗೆ ಮಳೆಗಾಲದಲ್ಲಿ ಸ್ವಚ್ಛತೆ ಕಾಪಾಡುವಂತೆ ನೋಟಿಸ್‌ ನೀಡುತ್ತೇವೆ. ಈ ಬಾರಿ ನೀಡಬೇಕಷ್ಟೆ. ಸೊಳ್ಳೆ ಕಾಟ ನಿಯಂತ್ರಣಕ್ಕೆ ಜನರಿಂದ ಬೇಡಿಕೆ ಬಂದರೆ ಫಾಗಿಂಗ್‌ ಇತ್ಯಾದಿ ನಡೆಸುತ್ತೇವೆ. 
– ಶ್ರೀಪಾದ್‌ ಪುರೋಹಿತ್‌, ಮುಖ್ಯಾಧಿಕಾರಿಗಳು, ಸಾಲಿಗ್ರಾಮ ಪ.ಪಂ.

ಕ್ರಮಕೈಗೊಳ್ಳುತ್ತೇವೆ
ಪಂಚಾಯತ್‌ ವ್ಯಾಪ್ತಿಯ ತೋಡುಗಳನ್ನು ಸ್ವತ್ಛಗೊಳಿಸಲು ನಿರ್ಣಯ ಕೈಗೊಂಡಿದ್ದೇವೆ. ಹೆದ್ದಾರಿಯ ಮೋರಿಯಲ್ಲಿ ಸಾರ್ವಜನಿಕರು ಕಸವನ್ನು ತಂದು ಬಿಸಾಡುವುದರಿಂದ ಸಮಸ್ಯೆಯಾಗುತ್ತಿದೆ. ಸ್ವಚ್ಛಗೊಳಿಸುವಂತೆ ಹೆದ್ದಾರಿ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ.
– ವನಿತಾ ಶ್ರೀಧರ್‌ ಆಚಾರ್ಯ ಅಧ್ಯಕ್ಷರು, ಕೋಟ ಗ್ರಾ.ಪಂ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

16-kumbashi

Ganesh Chaturthi; ಆನೆಗುಡ್ಡೆ: ಸಂಭ್ರಮದ ಶ್ರೀ ವಿನಾಯಕ ಚತುರ್ಥಿ; ಹರಿದು ಬಂದ ಭಕ್ತ ಸಮೂಹ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.