ಕುಸಿಯುವ ಭೀತಿಯಲ್ಲಿ ಕರ್ನೂರು, ಕೋಟಿಗದ್ದೆ  ಸೇತುವೆಗಳು


Team Udayavani, Jul 4, 2018, 11:28 AM IST

4-july-4.jpg

ಈಶ್ವರಮಂಗಲ : ಪಳ್ಳತ್ತೂರು ಸೇತುವೆ ಕಾಮಗಾರಿ ನಡೆಯುತ್ತಿರುವ ಕಾರಣ ಕೇರಳ ಸಂಪರ್ಕಕ್ಕೆ ಪರ್ಯಾಯ ರಸ್ತೆಯಾದ ಕಾವು – ಪಳ್ಳತ್ತೂರಿನಲ್ಲಿ ಎರಡು ಸೇತುವೆಗಳು ವಾಹನಗಳ ಸಂಚಾರದ ಒತ್ತಡದಿಂದ ಅಪಾಯದಲ್ಲಿವೆ. ಹೀಗಾಗಿ, ಕೇರಳ ಸಂಪರ್ಕ ಆತಂಕಿತವಾಗಿದೆ. ಪಳ್ಳತ್ತೂರು ಸೇತುವೆ ಕಾಮಗಾರಿಯನ್ನು ಕೇರಳ ರಾಜ್ಯದ ಲೋಕೋಪಯೋಗಿ ಇಲಾಖೆ ನಿರ್ವಹಿಸುತ್ತಿದ್ದು, ಈ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಿದೆ. ಸದ್ಯಕ್ಕೆ ಕಾಮಗಾರಿ ಮುಗಿಯುವಂತಿಲ್ಲ. ಹೀಗಾಗಿ, ಪಂಚೋಡಿಯಿಂದ ಕರ್ನೂರು, ಗಾಳಿ ಮುಖ ಮೂಲಕ ಜಿ.ಪಂ.ರಸ್ತೆಯಲ್ಲಿ ಸಂಚರಿಸಬೇಕು. ಆದರೆ, ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೇ ಮಳೆಯ ನೀರು ರಸ್ತೆ ಅಂಚಿನಲ್ಲಿಯೇ ಹೋಗುವುದರಿಂದ ರಸ್ತೆ ಅಂಚಿನಲ್ಲಿ ಹೊಂಡಗಳಾಗಿ ವಾಹನ ಸಂಚಾರ ದುಸ್ತರವಾಗಿದೆ. ಅಧಿಕ ಸಾಮರ್ಥ್ಯದ ಘನ ವಾಹನಗಳು ಈ ರಸ್ತೆಯ ಮೂಲಕವೇ ಕೇರಳಕ್ಕೆ ಹೋಗಿ ಬರುತ್ತಿವೆ. ಮಣ್ಣಿನ ತೇವಾಂಶ ಹೆಚ್ಚು ಇರುವುದರಿಂದ ರಸ್ತೆಯ ಇಕ್ಕೆಲಗಳಲ್ಲಿ ಕೆಸರುಮಯವಾಗಿದೆ.

ಜಿ.ಪಂ. ರಸ್ತೆಯ ಮೇಲೆ ಒತ್ತಡ ಹೆಚ್ಚಿರುವುದರಿಂದ ಎರಡೂ ಕಡೆಯ ಸೇತುವೆಗಳು ಅಲುಗಾಡಲು ಶುರುವಾಗಿವೆ. ಸುಮಾರು 30 ವರ್ಷಗಳಷ್ಟು ಹಳೆಯ ಸೇತುವೆಗಳ ಕೆಳಭಾಗದಲ್ಲಿ ಆಧಾರ ಕಲ್ಲುಗಳು ಮಳೆಯ ನೀರಿಗೆ ಕೊಚ್ಚಿ ಹೋಗಿವೆ. ಸೇತುವೆ ಕೆಳಭಾಗದ ಕಬ್ಬಿಣದ ಸರಳುಗಳು ತುಕ್ಕು ಹಿಡಿದಿದ್ದು, ಸಿಮೆಂಟ್‌ ಪದರಗಳು ಉದುರಲು ಆರಂಭಿಸಿವೆ. ಘನ ವಾಹನಗಳು ಸಂಚರಿಸುವಾಗ ಈ ಸೇತುವೆಯೇ ಅಲುಗಾಡುತ್ತದೆ. ಒಟ್ಟಾರೆಯಾಗಿ ಈ ರಸ್ತೆ ಹಾಗೂ ಸೇತುವೆಗಳಲ್ಲಿ ಆತಂಕಪಡುತ್ತಲೇ ಸಾಗುವಂತಾಗಿದೆ.

ನೆಟ್ಟಣಿಗೆ ಮುಟ್ನೂರು ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ಈ ಸೇತುವೆ ಹಾಗೂ ರಸ್ತೆಯ ಬಗ್ಗೆ ತಾಸುಗಟ್ಟಲೆ ಚರ್ಚೆ ನಡೆದಿದೆ. ಈ ರಸ್ತೆಯಲ್ಲಿ ಅಕ್ರಮ ಮರಳು, ಕೆಂಪು ಕಲ್ಲುಗಳನ್ನು ಲಾರಿಗಳಲ್ಲಿ ಮಿತಿಮೀರಿ ಹೇರಿ, ಸಾಗಿಸಲಾಗುತ್ತದೆ. ಹಲವು ವಾಹನಗಳಿಗೆ ಪರವಾನಿಗೆಯೂ ಇಲ್ಲ. ಆದರೂ ಸಂಬಂಧಿಸಿದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸೇತುವೆ ಅಲುಗಾಡುತ್ತಿದೆ. ಹೀಗೇ ಮುಂದುವರಿದರೆ ಸೇತುವೆ ಕುಸಿದು ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ಘನ ವಾಹನಗಳಿಗೆ ಸಂಚಾರ ನಿರ್ಬಂಧಿಸುವ ಬ್ಯಾನರ್‌ ಆಳವಡಿಸುವಂತೆ ಸದಸ್ಯರು ಆಗ್ರಹಿಸಿದರು. ಅಧಿಕಾರಿಗಳಿಗೆ ಬರೆಯಲು ತೀರ್ಮಾನಿಸಲಾಯಿತು.

ಪರ್ಯಾಯ ರಸ್ತೆಯಿಲ್ಲ
ರಸ್ತೆ ಕುಸಿತ ಅಥವಾ ರಿಪೇರಿ ಮಾಡಲು ಹೊರಟರೆ ಸಂಪರ್ಕಕ್ಕೆ ಪರ್ಯಾಯ ರಸ್ತೆ ಯಾವುದೂ ಇಲ್ಲ. ಈಗಾಗಲೇ ಪಳ್ಳತ್ತೂರು ಸೇತುವೆಯ ಕಾಮಗಾರಿಗೆ ಸಂಚಾರ ನಿರ್ಬಂಧಿಸುವುದರಿಂದ ಬೆದ್ರಾಡಿ ಅಥವಾ ಕೋಟಿಗದ್ದೆ ಸೇತುವೆ ಕುಸಿತ ಕಂಡರೆ ಕಾವು, ಜಾಲ್ಸೂರು ಮೂಲಕ ಗಾಳಿಮುಖವಾಗಿ ಸಂಚರಿಸಬೇಕಾಗುತ್ತದೆ. ಆದ್ದರಿಂದ ಈ ಕೂಡಲೇ ಸೇತುವೆಯ ಸಾಮರ್ಥ್ಯವನ್ನು ಪರಿಶೀಲನೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ನಿರ್ಣಯ ಕೈಗೊಂಡಿದ್ದೇವೆ
ನೆಟ್ಟಣಿಗೆಮುಟ್ನೂರು ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಣಯ ಕೈಗೊಂಡು ಜಿ.ಪಂ. ಎಂಜಿನಿಯರಿಂಗ್‌ ವಿಭಾಗಕ್ಕೆ ಹಾಗೂ ಶಾಸಕರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಬರೆಯಲಾಗಿದೆ. ಶಕುಂತಳಾ ಶೆಟ್ಟಿ ಶಾಸಕರಾಗಿದ್ದಾಗ ಪಂಚೋಡಿ- ಗಾಳಿಮುಖ ಜಿ.ಪಂ. ರಸ್ತೆಯನ್ನು ಎಂಡಿಆರ್‌ಗೆ ಮೇಲ್ದರ್ಜೆಗೆ ಏರಿಸುವಂತೆ ಲೋಕೋಪಯೋಗಿ ಇಲಾಖೆ ಮೂಲಕ ಪ್ರಸ್ತಾವನೆ ಸಲ್ಲಿಸಿದ್ದಾರೆ. ತತ್‌ಕ್ಷಣ ಸ್ಪಂದಿಸಬೇಕು.
– ಶ್ರೀರಾಮ್‌ ಪಕ್ಕಳ, ಉಪಾಧ್ಯಕ್ಷರು,
ನೆಟ್ಟಣಿಗೆಮುಟ್ನೂರು ಗ್ರಾ.ಪಂ.

ಮಾಧವ ನಾಯಕ್‌

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.