30% ಕಮಿಷನ್‌ ಕಥೆ ಬಿಚ್ಚಿಟ್ಟ ಮಾಧುಸ್ವಾಮಿ


Team Udayavani, Jul 4, 2018, 11:49 AM IST

30commission.jpg

ಬೆಂಗಳೂರು: ಹಿಂದಿನ ಸರ್ಕಾರದಲ್ಲಿ ಶೇ.20 ರಿಂದ 30ರಷ್ಟು  ಕಮಿಷನ್‌ಗಾಗಿ ಪ್ಯಾಕೇಜ್‌ ಗುತ್ತಿಗೆ ನೀಡಿ ಎಲ್ಲ ವ್ಯವಸ್ಥೆಯನ್ನು ಔಟ್‌ಸೋರ್ಸ್‌ ಮಾಡಿದೆ. ವಿಧಾನಸೌಧವನ್ನೂ ಔಟ್‌ಸೋರ್ಸ್‌ ಮಾಡಿದರೆ ನಾವೂ ಅವರ ಕೆಳಗೆ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ಸದಸ್ಯ ಮಾಧುಸ್ವಾಮಿ ಗಂಭೀರ ಆರೋಪ ಮಾಡಿದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯಪಾಲರ ಭಾಷಣದಲ್ಲಿ ಯಾವುದೇ ಭರವಸೆಯಿಲ್ಲ.

ಅನಿವಾರ್ಯವಾಗಿ ಪೋಸ್ಟ್‌ಮಾರ್ಟ್‌ಂ ಮಾಡಬೇಕಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರ ವಹಿಸಿಕೊಂಡು ಈಗ ಸಾಂದರ್ಭಿಕ ಶಿಶು ಎಂದು ಆನಾರೋಗ್ಯದ ಕಾರಣ ಹೇಳಿದ್ದಾರೆ. ನಾವಿಕನೇ ಆನಾರೋಗ್ಯ ಎಂದರೆ ನಾವೆಲ್ಲ ಎಲ್ಲಿ ಹೋಗುವುದು ಎಂದರು.  ಕಾಂಗ್ರೆಸ್‌ ಅವಧಿಯಲ್ಲಿ ಜಾರಿಗೆ ಬಂದಿದ್ದ ಎಸಿಬಿ ಮುಚ್ಚಿಸುವುದು, ಕಲಬೆರೆಕೆ ಎಣ್ಣೆ ನಿಯಂತ್ರಣ ಮಾಡುವುದು.

ರಾಜಕೀಯ ಪ್ರೇರಿತ ಕೊಲೆಗಳ ಬಗ್ಗೆ ತನಿಖೆ ಮಾಡಿಸುವುದಾಗಿ ಕುಮಾರಸ್ವಾಮಿ ಹೇಳಿದ್ದರು. ಆದರೆ, ಈಗ ಅವರೊಂದಿಗೆ ಸರ್ಕಾರ ರಚನೆ ಮಾಡಿದ್ದಾರೆ ಎಂದರು.  ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಸಿ.ಟಿ. ರವಿ ಸರ್ಕಾರವೇ ಕಲಬೆರಕೆಯಾಗಿದೆ ಎಂದಾಗ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ, ಹಿಂದೆ ನೀವು ಜೆಡಿಎಸ್‌ ಜತೆ ಕೈ ಜೋಡಿಸಿದಾಗ ಕಲಬೆರಕೆಯಾಗಿರಲಿಲ್ಲವೇ ಎಂದು ಪ್ರಶ್ನಿಸಿದರು.  

ಮತ್ತೆ ಮಾತು ಮುಂದುವರಿಸಿದ ಮಾಧುಸ್ವಾಮಿ, ಶಾಸಕರಿಗೆ ಗೊತ್ತಿಲ್ಲದೆಯೇ ಬೆಂಗಳೂರಿನಲ್ಲಿಯೇ ಎಲ್ಲ ಯೋಜನೆಗಳನ್ನು ಟೆಂಡರ್‌ ಕರೆಯದೆ ಕ್ರೆಡೆಲ್‌, ನಿರ್ಮಿತಿ ಕೇಂದ್ರಕ್ಕೆ ವಹಿಸಲಾಗುತ್ತಿದೆ. ಇದರ ಹಿಂದಿನ ಉದ್ದೇಶವೇನು? ಎಪಿಎಂಸಿಗಳನ್ನು ಆನ್‌ಲೈನ್‌ ಮಾಡಿದ್ದೇವೆಂದು ಹೇಳಿದ್ದಾರೆ. ಅದನ್ನು ಔಟ್‌ಸೋರ್ಸ್‌ ಮಾಡಿ ರೈತರಿಗೆ ಯಾವುದೇ ಅನುಕೂಲವಾಗದಂತಾಗಿದೆ.

ಕೇವಲ ಮೂರು ನಾಲ್ಕು ಕಂಟ್ರಾಕ್ಟರ್‌ಗಳನ್ನು ಇಟ್ಟುಕೊಂಡು ಹಿಂದಿನ ಸರ್ಕಾರ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಆರೋಪಿಸಿದರು. ಅಂಗನವಾಡಿಗೆ ಆಹಾರ ಸರಬರಾಜು ಯಾರಿಗೆ ಕೊಟ್ಟಿದ್ದೀರಿ ? ಸಣ್ಣ ನೀರಾವರಿ ಇಲಾಖೆಯಲ್ಲಿ ಕೆರೆ ತುಂಬಿಸಲು ಕಾಲುವೆ ನಿರ್ಮಿಸಲು ಜಮೀನು ವಶ ಪಡಿಸಿಕೊಳ್ಳದೇ ಯೋಜನೆ ಪೂರ್ಣಗೊಳಿಸಿರುವುದಾಗಿ ಬೋರ್ಡ್‌ ಹಾಕಿಕೊಂಡಿದ್ದಾರೆ.

ನೆಂಟರಿಗೆ ಸಹಾಯ ಮಾಡಲು ಯೋಜನೆಗಳ ಗುತ್ತಿಗೆ ನೀಡಿದ್ದಾರೆ.  ಎಸ್ಸಿ, ಎಸ್ಟಿ ಸಮುದಾಯದ ಅಭಿವೃದ್ಧಿಗೆ ಎಸ್‌ಟಿಪಿ, ಟಿಎಸ್‌ಪಿ ಯೋಜನೆ ಜಾರಿಗೆ ತಂದು ದಲಿತರ ಕೇರಿಗಳಲ್ಲಿ ಕಾಂಕ್ರೀಟ್‌ ರಸ್ತೆ ಮಾಡಲಾಗಿದೆ, ಬಿಟ್ಟರೆ ಅವರ ಆರ್ಥಿಕ ಅಭಿವೃದ್ಧಿಗೆ ಯಾವುದೇ ಯೋಜನೆ ರೂಪಿಸಿಲ್ಲ ಎಂದು ವಾಗ್ಧಾಳಿ ನಡೆಸಿದರು.

ಅವರ ಆರೋಪಕ್ಕೆ ಜೆಡಿಎಸ್‌ನ ಶಿವಲಿಂಗೇಗೌಡ ಆಕ್ಷೇಪ ಎತ್ತಿ ಹಿಂದಿನ ಅವಧಿಯಲ್ಲಿದ್ದ ಎಲ್ಲ ಶಾಸಕರು ಭ್ರಷ್ಟರು ಎನ್ನುವುದು ಸರಿಯಲ್ಲ. ನಮ್ಮ ಕ್ಷೇತ್ರಗಳಿಗೆ ಬನ್ನಿ ಸಾಕಷ್ಟು ಕೆಲಸ ಮಾಡಿದ್ದೇವೆಂದು ಸವಾಲು ಹಾಕಿದರು. ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ಕೂಡ ಅವರ ಬೆಂಬಲಕ್ಕೆ ನಿಂತು ಹಿಂದಿನ ಸರ್ಕಾರದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳಾಗಿವೆ ಎಂದು ಸಮರ್ಥಿಸಿಕೊಂಡರು. 

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.