ಬಂಡೆ ಉರುಳಿ ರೈಲು ಸಂಚಾರ ಮತ್ತೆ ಸ್ಥಗಿತ


Team Udayavani, Jul 4, 2018, 11:49 AM IST

bamnde-uruli.jpg

ಸಕಲೇಶಪುರ/ ಸುಬ್ರಹ್ಮಣ್ಯ: ಮಂಗಳೂರು-ಹಾಸನ ರೈಲು ಮಾರ್ಗದ ಎಡಕುಮೇರಿ-ಕಡಗರಹಳ್ಳಿ ನಿಲ್ದಾಣದ ನಡುವೆ ಎಡಕುಮೇರಿ ಬಳಿ ಮಂಗಳವಾರ ಗುಡ್ಡ ಕುಸಿದು ಬಂಡೆಕಲ್ಲು, ಮಣ್ಣು, ಮರಗಳು ಹಳಿಗಳ ಮೇಲೆ ಬಿದ್ದಿವೆ. ಪರಿಣಾಮ ಸುಬ್ರಹ್ಮಣ್ಯ ರಸ್ತೆ – ಸಕಲೇಶಪುರ ಮಾರ್ಗದಲ್ಲಿ ಮಂಗಳವಾರ ಮಧ್ಯಾಹ್ನ ಸಂಚರಿಸಬೇಕಿದ್ದ ಮಂಗಳೂರು-ಬೆಂಗಳೂರು ರೈಲನ್ನು ಎಡಕುಮೇರಿ ನಿಲ್ದಾಣದಿಂದ ವಾಪಸು ಮಂಗಳೂರಿಗೆ ಕರೆಸಿಕೊಳ್ಳಲಾಗಿದೆ.

ಪುತ್ತೂರಿನಿಂದ ಮಧ್ಯಾಹ್ನ 1.20ಕ್ಕೆ ಹೊರಟ ರೈಲು ಸಂಜೆ 5.30ಕ್ಕೆ ಪುತ್ತೂರಿಗೆ ಮರಳಿದೆ. ಸುಮಾರು 8 ಗಂಟೆವರೆಗೆ ಪ್ರಯಾಣಿಕರು ರೈಲು ನಿಲ್ದಾಣದ ಆವರಣದಲ್ಲೇ ಕುಳಿತಿದ್ದರು. ಮಕ್ಕಳ ಅಳು, ದೊಡ್ಡವರ ಜಗಳ, ಕೆಲಸಕ್ಕೆಂದು ಹೊರಟು ನಿಂತವರ ತೊಳಲಾಟ ಕಂಡುಬಂತು. ಬಳಿಕ 9 ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಕರನ್ನು ಬೆಂಗಳೂರಿಗೆ ಕಳಿಹಿಸಲಾಯಿತು. ಕೆಲವು ಪ್ರಯಾಣಿಕರು ಟಿಕೆಟ್‌ ಹಣ ಹಿಂದಕ್ಕೆ ಪಡೆದುಕೊಂಡಿದ್ದಾರೆ.

ರೈಲು ಘಾಟಿ ಏರಲಿರುವುದರಿಂದ ಸುಬ್ರಹ್ಮಣ್ಯದಲ್ಲಿ ಹಿಂಬದಿಗೂ ಎಂಜಿನ್‌ ಒಂದನ್ನು ಜೋಡಿಸಲಾಗುತ್ತದೆ. ಆ ಕಾರಣದಿಂದಾಗಿ ರೈಲು ಎಡಕುಮೇರಿ ತಲುಪಿದ್ದರೂ ಹಿಂದಕ್ಕೆ ಮರಳಿ ಬರಲು ಸಾಧ್ಯವಾಯಿತು.

ಪಾರಾದ ರೈಲು: ಯಶವಂತಪುರ-ಮಂಗಳೂರು ರೈಲು ಪೂರ್ವಾಹ್ನ 11.30ಕ್ಕೆ ಸಕಲೇಶಪುರ ನಿಲ್ದಾಣದಿಂದ ಹೊರಟಿದ್ದು, ಸಿರಿಬಾಗಿಲನ್ನು ದಾಟಿ 20 ನಿಮಿಷಗಳಲ್ಲಿ ಭೂ ಕುಸಿತ ಸಂಭವಿಸಿದೆ. ಕಳೆದ ಜೂನ್‌ ತಿಂಗಳಲ್ಲಿ ಈ ಭಾಗದಲ್ಲಿ ದಾಖಲೆ ಪ್ರಮಾಣದ ಮಳೆ ಬಿದ್ದ ಪರಿಣಾಮ ಎರಡು ಬಾರಿ ಭೂಕುಸಿತ ಉಂಟಾಗಿ ರೈಲು ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಮತ್ತೂಮ್ಮೆ ಈ ರೀತಿಯ ಘಟನೆ ನಡೆದಿರುವುದು ಆತಂಕಕಾರಿಯಾಗಿದೆ.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.