ಸಾಮಾಜಿಕ ಜಾಲತಾಣ ಧನಾತ್ಮಕವಾಗಿ ಬಳಸಿ: ನವೀನ್‌ ಕುಮಾರ್‌ ಪುತ್ರಕಳ


Team Udayavani, Jul 5, 2018, 7:35 AM IST

04ksde7.jpg

ಕಾಸರಗೋಡು: ಜಗತ್ತು ವೇಗವಾಗಿ ಬದಲಾಗುತ್ತಿರುವಾಗ ಆ ಬದಲಾವಣೆಗಳನ್ನು ಅರಿತುಕೊಂಡು ಅದರೊಂದಿಗೆ ಹೆಜ್ಜೆ ಹಾಕದಿದ್ದರೆ ಬೆಳವಣಿಗೆ ಸಾಧ್ಯವಿಲ್ಲ. ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವು ಗೆಲುವನ್ನು ಪಡೆಯಬೇಕಿದ್ದರೆ ಹೊಸ ಹೊಸ ವಿಷಯಗಳಿಗೆ  ತೆರೆದುಕೊಳ್ಳಬೇಕು. ಸಾಮಾಜಿಕ ಜಾಲತಾಣಗಳನ್ನು ಧನಾತ್ಮಕವಾಗಿ  ಬಳಸಿಕೊಳ್ಳುವ ಮೂಲಕ ನಾವು ಬೆಳೆಯುವುದಕ್ಕೆ ಸಾಧ್ಯ. ಉದ್ಯೋಗ ಮಾಹಿತಿಗೆ ಸಂಬಂಧಿಸಿದ ಹಲವು ಜಾಲತಾಣಗಳು ಇಂದು ಲಭ್ಯವಿವೆ. ಅವುಗಳ ಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳುವುದು ಅತ್ಯಂತ ಅಗತ್ಯ ಎಂದು ಬೆಳ್ಳೂರು ಸರಕಾರಿ ಹೈಯರ್‌ ಸೆಕೆಂಡರಿ ಶಾಲೆಯ ಅಧ್ಯಾಪಕ ನವೀನ್‌ ಕುಮಾರ್‌ ಪುತ್ರಕಳ ಅಭಿಪ್ರಾಯಪಟ್ಟರು.

ಅವರು ಸಿರಿಚಂದನ ಕನ್ನಡ ಯುವಬಳಗ ಕಾಸರಗೋಡು  ಇದರ ಆಶ್ರಯದಲ್ಲಿ ಕೋಟೆಕಣಿ ಶ್ರೀ ರಾಮನಾಥ ಸಾಂಸ್ಕೃತಿಕ ಭವನದಲ್ಲಿ ನಡೆದ ಮೂರನೇ ಉದ್ಯೋಗ ಮಾಹಿತಿ ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಕೇರಳದ ಕಾಸರಗೋಡು, ಕಣ್ಣೂರು, ವಯನಾಡು, ಮಲಪ್ಪುರ, ಪಾಲಾ^ಟ್‌, ಕಲ್ಲಿಕೋಟೆ, ತೃಶ್ಶೂರು, ಎರ್ನಾಕುಳಂ ಮತ್ತು ಇಡುಕ್ಕಿ ಜಿಲ್ಲೆಗಳ ಸಮಗ್ರ ಮಾಹಿತಿಯನ್ನು ತಿಳಿಸಿದ ಅವರು ನಮ್ಮ ನಾಡಿನ ವಿಶೇಷತೆಗಳ ಆಳವಾದ ಅರಿವು ನಮಗೆ ಇರಬೇಕಾದುದು ಅತ್ಯಗತ್ಯ ಎಂದರು.

ಅಭ್ಯಾಸಕ್ಕೆಂದೇ ಸಮಯ ಮೀಸಲಿಡಿ: ಸೌಮ್ಯಾ
ಉದ್ಯೋಗ ಮಾಹಿತಿ ಶಿಬಿರದ ಸಹಸಂಚಾಲಕಿ ಸೌಮ್ಯಾ ಕುರುಮುಜ್ಜಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ನಿಯಮಿತವಾದ ಅಭ್ಯಾಸ ಬೇಕು. ದಿನದಲ್ಲಿ ಒಂದಷ್ಟು   ಸಮಯವನ್ನು ಇದಕ್ಕಾಗಿ ಮೀಸಲಿರಿಸಬೇಕು. ಹಾಗಾದರೆ ಯಶಸ್ಸನ್ನು ಪಡೆಯುವುದು ಕಷ್ಟವಲ್ಲ ಎಂದರು. ಕೇರಳದ ಪ್ರಮುಖ  ವ್ಯಕ್ತಿಗಳು, ಅವರಿಗೆ ಲಭಿಸಿದ ಪ್ರಶಸ್ತಿಗಳು, ವಿಶೇಷ ದಿನಗಳು ಮೊದಲಾದ ವಿಷಯಗಳ ಬಗ್ಗೆ ಮಾಹಿತಿ  ನೀಡಿದ   ಅವರು   ಸಂಕೇತಗಳ   ಮೂಲಕ ಅವುಗಳನ್ನು ಹೇಗೆ ನೆನಪಿರಿಸಿಕೊಳ್ಳಬಹುದು ಎಂಬುದನ್ನು ತಿಳಿಸಿದರು.

ಶಿಬಿರದ ಕೊನೆಯಲ್ಲಿ ಆಯ್ದ ಶೀಬಿರಾರ್ಥಿಗಳಿಂದ ತರಗತಿಯ ಅವಲೋಕನ ನಡೆಸಲಾಯಿತು. ಸಂಯೋಜಕ  ಮಹೇಶ ಏತಡ್ಕ,  ಬಳಗದ ಕೋಶಾಧಿಕಾರಿ ವಿನೋದ್‌ ಕುಮಾರ್‌ ಸಿ.ಎಚ್‌. ಅವರು ಶಿಬಿರದ ಯಶಸ್ಸಿನ ಬಗೆಗೆ ಸಂತೋಷ ವ್ಯಕ್ತಪಡಿಸಿ ಪೂರ್ಣವಾದ ಪ್ರಯೋಜನ ಪಡೆದುಕೊಳ್ಳುವಂತೆ ಕರೆ ನೀಡಿದರು.

ಸಿರಿಚಂದನ ಕನ್ನಡ ಯುವಬಳಗದ  ಮಾರ್ಗದರ್ಶಕ ಡಾ| ರತ್ನಾಕರ ಮಲ್ಲಮೂಲೆ, ಅಧ್ಯಕ್ಷ ರಕ್ಷಿತ್‌ ಪಿ. ಎಸ್‌., ಉಪಾಧ್ಯಕ್ಷ ಪ್ರಶಾಂತ್‌ ಹೊಳ್ಳ, ಜತೆ ಕಾರ್ಯದರ್ಶಿ ಸೌಮ್ಯ ಪ್ರಸಾದ್‌, ಸದಸ್ಯರಾದ ಧನೇಶ್‌ ಕೋಟೆಕಣಿ, ಶ್ರದ್ಧಾ  ನಾಯರ್ಪಳ್ಳ, ಜಯಪ್ರಕಾಶ ಪಳ್ಳತಡ್ಕ, ಶಿವಪ್ರಸಾದ್‌  ಮೈಲಾಟಿ, ಮೋಹಿತ್‌, ಕಾರ್ತಿಕ್‌ ಪಡ್ರೆ, ಸುಬ್ರಹ್ಮಣ್ಯ ಹೇರಳ ಮತ್ತಿತರರು ನೇತೃತ್ವ ನೀಡಿದರು.

ಶಿಬಿರ ನಡೆಸಲು ಸ್ಥಳಾವಕಾಶ ನೀಡಿ ಉಪಾಹಾರದ  ವ್ಯವಸ್ಥೆ   ಮಾಡಿದ ಗುರು ಪ್ರಸಾದ್‌ ಕೋಟೆಕಣಿ ಮತ್ತು ಬಳಗ ದವರಿಗೆ ಬಳಗದ ಸದಸ್ಯೆ ಶ್ರದ್ಧಾ ನಾಯರ್ಪಳ್ಳ ಕೃತಜ್ಞತೆ ಸಲ್ಲಿಸಿದರು. 

ಕಣ್ಣೂರು ವಿ.ವಿ. ಬಿ.ಎ. ಕನ್ನಡ ಪದವಿ ಪರೀಕ್ಷೆಯಲ್ಲಿ  ಅನುಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಬಳಗದ ಸದಸ್ಯರಾದ ಸುನೀತಾ ಮಯ್ಯ ಹಾಗೂ ಅನುರಾಧಾ ಕೆ. ಅವರನ್ನು  ಯುವಬಳಗದ ಮಾರ್ಗದರ್ಶಕ ಡಾ| ರತ್ನಾಕರ ಮಲ್ಲಮೂಲೆ ಅಭಿನಂದಿಸಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Road Mishap ಮಂಜನಾಡಿ: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದು ಓರ್ವ ಸಾವು

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod: ತನಿಖೆಗೆ ಬಂದ ಪೊಲೀಸರಿಗೆ ಕಾರು ಢಿಕ್ಕಿ; ಆನ್‌ಲೈನ್‌ ವಂಚನೆ ಆರೋಪಿ ಪರಾರಿ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಆರಂಭ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ಮನೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ: ಬಂಧನ

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ 

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.