ನೀರಾವರಿಗೂ ಕೆರೆ ನೀರು ಯೋಜನೆ ವಿಸ್ತರಿಸಿ: ಕುಮಾರ್ ಬಂಗಾರಪ್ಪ
Team Udayavani, Jul 5, 2018, 6:10 AM IST
ವಿಧಾನಸಭೆ: “ರಾಜ್ಯ ಸರ್ಕಾರದ ಕೆರೆ-ಕಟ್ಟೆ ತುಂಬಿಸುವ ಯೋಜನೆಯನ್ನು ಕೇವಲ ಕುಡಿಯುವ ನೀರಿಗೆ ಸೀಮಿತಗೊಳಿಸದೆ ನೀರಾವರಿಗೂ ವಿಸ್ತರಿಸಬೇಕು’ ಎಂದು ಬಿಜೆಪಿ ಸದಸ್ಯ ಕುಮಾರ್ ಬಂಗಾರಪ್ಪ ಒತ್ತಾಯಿಸಿದ್ದಾರೆ.
ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ಮಾತನಾಡಿದ ಅವರು,ಕೆರೆ-ಕಟ್ಟೆಗಳು ಇರುವುದೇ ನೀರಾವರಿಗಾಗಿ. ಈ ಹಿಂದೆ ಅದೇ ಉದ್ದೇಶಕ್ಕೆ ಅವುಗಳ ಅಭಿವೃದ್ಧಿ ಮತ್ತು ನೀರು ತುಂಬಿಸುವ ಯೋಜನೆ ಬಗ್ಗೆ ಪ್ರಸ್ತಾವನೆ ಕಳುಹಿಸಿಕೊಡಲಾಗಿತ್ತು. ಆದರೆ, ಪ್ರಸ್ತುತ ಕೆರೆ-ಕಟ್ಟೆ ತುಂಬಿಸುವ ಯೋಜನೆಯನ್ನು ಕೇವಲ ಕುಡಿಯುವ ನೀರಿಗಾಗಿ ಮಾತ್ರ ಸೀಮಿತಗೊಳಿಸಲಾಗಿದೆ. ಇದರಿಂದ ನೀರಾವರಿಗೆ ತೊಂದರೆಯಾಗಿದೆ ಎಂದು ಹೇಳಿದರು.
ಮಧ್ಯಪ್ರವೇಶಿಸಿದ ಬಿಜೆಪಿಯ ಸಿ.ಟಿ.ರವಿ,ಐದು ನದಿ ಹುಟ್ಟುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಪರದಾಡುವಂತಾಗಿದೆ. ಅಂತರ್ಜಲ ಕುಸಿದು ಬಯಲು ಸೀಮೆ ಭಾಗಗಳಲ್ಲಿ ಫ್ಲೋರೈಡ್ ಸಮಸ್ಯೆ ಕಾಣಿಸಿಕೊಂಡಿದೆ. ಆದ್ದರಿಂದ ಚಿಕ್ಕಮಗಳೂರು ಜಿಲ್ಲೆಯ ಕೆರೆಗಳನ್ನು ತುಂಬಿಸಲು ಸರ್ಕಾರ ಆದ್ಯತೆ ನೀಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್ ವೆಲೋಡ್ರೋಮ್
Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ
Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ
Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು
Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.