ಮಳೆಯಿಂದಾಗಿ ಮುಂಬೈ ಸೇತುವೆ ಬಿರುಕು
Team Udayavani, Jul 5, 2018, 6:00 AM IST
ಮುಂಬೈ: ಮುಂಬೈನ ಅಂಧೇರಿಯಲ್ಲಿ ಮಂಗಳವಾರ ಸೇತುವೆ ಕುಸಿದ ಕೆಲವೇ ಗಂಟೆಗಳಲ್ಲಿ ಗ್ರಾಂಟ್ ರೋಡ್ನಲ್ಲಿನ ಸೇತುವೆಯೂ ಬಿರುಕು ಬಿಟ್ಟಿರುವುದು ಕಂಡುಬಂದಿದೆ. ರಾತ್ರಿ 11.30 ರ ಸುಮಾರಿಗೆ ಫ್ರೆರೆ ಸೇತುವೆ ಬಿರುಕು ಬಿಟ್ಟಿದ್ದು ಕಂಡುಬಂದಿದ್ದರಿಂದ, ಈ ಸೇತುವೆಯ ಮೇಲೆ ವಾಹನ ಸಂಚಾರ ಬಂದ್ ಮಾಡಲಾಗಿದೆ. ಬೃಹನ್ಮುಂಬೈ ಪಾಲಿಕೆ ಎಂಜಿನಿಯರ್ಗಳು ಮತ್ತು ರೈಲ್ವೆ ಇಲಾಖೆ ಎಂಜಿನಿಯರ್ಗಳಿಗೆ ಈ ಸೇತುವೆಯನ್ನು ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಲಾಗಿದೆ. ಅಂಧೇರಿ ರೈಲ್ವೆ ಸ್ಟೇಷನ್ ಬಳಿ ವಿಪರೀತ ಮಳೆಯಿಂದಾಗಿ ಸೇತುವೆ ಕುಸಿದು, ಐವರಿಗೆ ಗಾಯವಾಗಿತ್ತು.
ಚಂಡೀಗಢದಲ್ಲಿ ಇಬ್ಬರು ಮಕ್ಕಳು ಸಾವು: ಹರಿಯಾಣದ ಸಿರ್ಸಾ ಬಳಸಿ ಭಾರಿ ಮಳೆಯಿಂದಾಗಿ ಮನೆಯೊಂದು ಕುಸಿದಿದ್ದು, ಇಬ್ಬರು ಮಕ್ಕಳು ಅಸುನೀಗಿದ್ದಾರೆ. ನಾಲ್ಕು ವರ್ಷದ ಹೆಣ್ಣುಮಗು ಹಾಗೂ ಎರಡು ವರ್ಷದು ಗಂಡುಮಗು ಸಾವನ್ನಪ್ಪಿದೆ. ಪಂಜಾಬ್ ಹಾಗೂ ಹರಿಯಾಣದ ಬಹುತೇಕ ಭಾಗಗಳಲ್ಲಿ ಸತತ ಮೂರು ದಿನಗಳವರೆಗೆ ಭಾರಿ ಮಳೆಯಾಗುತ್ತಿದೆ. ಇದೇ ಗುಜರಾತ್ನ ಹಲವು ಭಾಗಗಳಲ್ಲಿಯೂ ಧಾರಾಕಾರ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ESI Hospital: ಬೆಳ್ಳಂಬೆಳಗ್ಗೆ ಇಎಸ್ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
MUST WATCH
ಹೊಸ ಸೇರ್ಪಡೆ
Hunsur: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಹಲ್ಲೆ, ಆರೋಪಿ ಬಂಧನ
BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್
ESI Hospital: ಬೆಳ್ಳಂಬೆಳಗ್ಗೆ ಇಎಸ್ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು
Bagheera ರುಧಿರ ಗಾನ…; ಶ್ರೀಮುರಳಿ ಸಿನಿಮಾದ ಹಾಡು ಬಂತು
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.