ಕೌಡಿಚ್ಚಾರ್: ಕಿಂಡಿ ಅಣೆಕಟ್ಟು ಸ್ವಚ್ಛತೆ
Team Udayavani, Jul 5, 2018, 2:55 AM IST
ಕಾವು: ಕೇಂದ್ರ ಸರಕಾರದ ಸ್ವಚ್ಛ ಭಾರತ್ ಸಮ್ಮರ್ ಇಂಟರ್ನ್ಶಿಪ್ ಅಭಿಯಾನದಡಿ ಮಂಗಳೂರು ನೆಹರೂ ಯುವ ಕೇಂದ್ರದ ಸಹಯೋಗದಲ್ಲಿ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಕಾವು ನನ್ಯ ತುಡರ್ ಯುವಕ ಮಂಡಲದ ವತಿಯಿಂದ ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ ನಡೆಯಿತು. ಕೌಡಿಚ್ಚಾರ್ ಸೇತುವೆ ಬಳಿ ಇರುವ ಕಿಂಡಿ ಅಣೆಕಟ್ಟು, ಹೊಳೆಯ ಇಕ್ಕೆಲಗಳಲ್ಲಿ ಕಿಂಡಿ ಅಣೆಕಟ್ಟಿನ ಪಿಲ್ಲರ್ ನ ಮಧ್ಯದಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಮರದ ತುಂಡು, ಕಸ ಕಡ್ಡಿ, ಪ್ಲಾಸ್ಟಿಕ್, ತ್ಯಾಜ್ಯಗಳನ್ನು ತೆರವುಗೊಳಿಸಲಾಯಿತು. ಹೊಳೆಯ ನೀರು ಕಿಂಡಿ ಅಣೆಕಟ್ಟಿನ ಮೂಲಕ ಸರಾಗವಾಗಿ ಹರಿಯುವಂತೆ ಮಾಡಿ ಮಣ್ಣಿನ ಸವಕಳಿ ಆಗದಂತೆ ತಡೆಯಲಾಯಿತು.
ಸ್ವಚ್ಛತಾ ಕಾರ್ಯದಲ್ಲಿ ಯುವಕ ಮಂಡಲದ ಅಧ್ಯಕ್ಷ ಗಂಗಾಧರ ನಾಯ್ಕ, ಪ್ರಧಾನ ಕಾರ್ಯದರ್ಶಿ ನವೀನ ನನ್ಯಪಟ್ಟಾಜೆ, ಉಪಾಧ್ಯಕ್ಷ ಜಗದೀಶ ಆಚಾರಿಮೂಲೆ, ಜತೆಕಾರ್ಯದರ್ಶಿ ಶ್ರೀಕಾಂತ್ ಗೌಡ, ಸಾಂಸ್ಕೃತಿಕ ಕಾರ್ಯದರ್ಶಿ ಸಂದೇಶ್ ಚಾಕೋಟೆ, ಕೋಶಾಧಿಕಾರಿ ಸತೀಶ ಮದ್ಲ, ಕ್ರೀಡಾ ಕಾರ್ಯದರ್ಶಿ ರಾಘವ ಬಿ., ಸ್ವಚ್ಛತಾ ಸಮಿತಿ ಉಸ್ತುವಾರಿಗಳಾದ ಧನಂಜಯ ನಾಯ್ಕ ಕುಂಞಿಕುಮೇರು, ಸಂಕಪ್ಪ ಪೂಜಾರಿ ಚಾಕೋಟೆ, ಶ್ರೀಕುಮಾರ್ ಬಲ್ಯಾಯ, ಸದಸ್ಯರಾದ ಕಾರ್ತಿಕ್ ನನ್ಯಪಟ್ಟಾಜೆ, ಭವಿತ್ ರೈ, ಹರ್ಷ ಎ.ಆರ್., ದಿನೇಶ್ ಮದ್ಲ, ಪುರುಷೋತ್ತಮ ಆಚಾರ್ಯ ನನ್ಯ, ಸುರೇಶ ಮದ್ಲ, ತಿರುಮಲೇಶ್, ರಾಘವ ಪಿ.ಎಸ್., ಯತೀಶ್ ಮದ್ಲ, ಲಿಂಗಪ್ಪ ನಾಯ್ಕ ನನ್ಯ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ
Eid Milad: ರ್ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ
Sullia: ಬೈಕ್ ಗಳ ನಡುವೆ ಅಪಘಾತ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.