ಇಂದು ಮನ್ನಾ ಬಜೆಟ್‌?


Team Udayavani, Jul 5, 2018, 6:00 AM IST

budget-2018-19.jpg

ಬೆಂಗಳೂರು: ಹಣಕಾಸು ಖಾತೆಯ ಜವಾಬ್ದಾರಿಯೂ ಹೊತ್ತಿರುವ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಗುರುವಾರ ಬೆಳಗ್ಗೆ 11.30ಕ್ಕೆ ಸಮ್ಮಿಶ್ರ ಸರ್ಕಾರದ ಚೊಚ್ಚಲ ಬಜೆಟ್‌ 
ಮಂಡಿಸುತ್ತಿದ್ದಾರೆ. ಇದು ಬಜೆಟ್‌ ಮಾತ್ರವಲ್ಲ. ಕಾಂಗ್ರೆಸ್‌- ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಮುಂದಿನ ಐದು ವರ್ಷದ ಅಭಿವೃದ್ಧಿಯ ಮುನ್ನೋಟವೂ ಒಳಗೊಂಡಿರಲಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಯವರೇ ಹೇಳಿದ್ದಾರೆ.

ರೈತರ ಸಾಲ ಮನ್ನಾ
ಐದು ಎಕರೆವರೆಗೆ ಜಮೀನು ಹೊಂದಿರುವ ರೈತರ ಸಹಕಾರ ಬ್ಯಾಂಕ್‌ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ಬೆಳೆ ಸಾಲ ಮನ್ನಾ ಘೋಷಣೆ ಮಾಡುವ ನಿರೀಕ್ಷೆಯಿದೆ.  ಈಗಾಗಲೇ ಸಿದ್ಧವಾಗಿರುವ ಕರಡು ಮಾರ್ಗಸೂಚಿ ಪ್ರಕಾರ ಮೊದಲ ಹಂತದಲ್ಲಿ ಕನಿಷ್ಠ ಎರಡು ಲಕ್ಷ ರೂ.ವರೆಗೆ ಸಾಲ ಮನ್ನಾ ಆಗಲಿದೆ. ಸರ್ಕಾರಕ್ಕೆ ಇದರಿಂದ 25 ರಿಂದ 30 ಸಾವಿರ ಕೋಟಿ ರೂ. ಹೊರೆ ಬೀಳುವ ಸಾಧ್ಯತೆಯಿದೆ. ಸಾಲ ಮನ್ನಾ ಜತೆಗೆ ಹೊಸ ಕೃಷಿ ನೀತಿ ಜಾರಿಯಾಗಲಿದೆ.

ಉಚಿತ ಬಸ್‌ ಪಾಸ್‌ ಎಲಿÅಗೂ ಸಿಗುತ್ತಾ?
ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಘೋಷಣೆಯೂ ಬಜೆಟ್‌ನಲ್ಲಿ ಆಗಲಿದೆ. ಪ್ರಸ್ತುತ ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ಮಾತ್ರ ಇರುವ ಸೌಲಭ್ಯ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ವಿಸ್ತರಣೆಯಾಗಲಿದೆ. ಇದರಿಂದ ಸರ್ಕಾರಕ್ಕೆ ವಾರ್ಷಿಕ 1000 ಕೋಟಿ ರೂ. ಹೆಚ್ಚುವರಿ ಹೊರೆ ಬೀಳುವ ನಿರೀಕ್ಷೆಯಿದೆ.

ಮಾಸಾಶನ ಯಾರಿಗೆಲ್ಲಾ ಸಿಗಬಹುದು ?
ಬಡ ಕುಟುಂಬದ ಗರ್ಭಿಣಿಯರಿಗೆ ಆರು ತಿಂಗಳು ಮಾಸಾಶನ ಘೋಷಣೆಯಾಗುವ ಸಾಧ್ಯತೆಯಿದೆ. ಹಿರಿಯ ನಾಗರಿಕರು ಹಾಗೂ 25 ವರ್ಷದ ದಾಟಿದ ಬಡ ಮಹಿಳೆಯರಿಗೆ ಜೀವನ ನಿರ್ವಹಣೆಗಾಗಿ ಎರಡು ಸಾವಿರ ರೂ. ಮಾಸಾಶನ ಪ್ರಕವಾಗುವ ನಿರೀಕ್ಷೆಯಿದೆ. ಇವೆಲ್ಲವೂ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಅನುದಾನದಲ್ಲಿ ಹೊಂದಾಣಿಕೆಯಾಗಲಿದೆ. ಹೀಗಾಗಿ, ಇದರಿಂದ ಹೆಚ್ಚುವರಿ ಹೊರೆ ಬೀಳುವುದಿಲ್ಲ ಎಂದು ಹೇಳಲಾಗಿದೆ.

ಉದ್ಯೋಗ ಸೃಷ್ಟಿ ಹೇಗೆ ?
ಯುವ ಸಮೂಹಕ್ಕೆ ಉದ್ಯೋಗ ಸೃಷ್ಟಿಗಾಗಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಜಿಲ್ಲಾ ಉದ್ಯೋಗ ಮತ್ತು ತರಬೇತಿ ಇಲಾಖೆ ಅಧಿಕಾರಿ ಒಳಗೊಂಡ ಸಮಿತಿ ರಚನೆ. ಖಾಸಗಿ ಉದ್ಯಮಿಗಳು, ಕಾರ್ಖಾನೆ ಮಾಲೀಕರ ಜತೆ  ಒಪ್ಪಂದ ಮಾಡಿಕೊಂಡು ಕಾಲೇಜು ಹಂತದಲ್ಲೇ ಸಂದರ್ಶನ ನಡೆಸಿ ಶಿಕ್ಷಣ ಮುಗಿದ ತಕ್ಷಣ ಉದ್ಯೋಗಕ್ಕೆ ಸೇರುವ ವ್ಯವಸ್ಥೆ ಜಾರಿಗೊಳಿಸುವುದು. ಇದಕ್ಕಾಗಿ ಶಿಕ್ಷಣದಲ್ಲಿ ಕೌಶಲ್ಯ ಸಹಿತ ವೃತ್ತಿ ತರಬೇತಿ ಕಡ್ಡಾಯಗೊಳಿಸುವುದು.

ನೀರಾವರಿಗೆ ಕೊಡುಗೆ ಏನು?
ಅಂತರ್ಜಲ ವೃದ್ಧಿ ನಿಟ್ಟಿನಲ್ಲಿ ಕೆರೆ ತುಂಬಿಸುವ ಯೋಜನೆ ರಾಜ್ಯಾದ್ಯಂತ ವಿಸ್ತರಿಸುವ ಘೊಷಣೆ ಬಜೆಟ್‌ನಲ್ಲಿ ಹೊರ ಬೀಳಲಿದೆ. ಜತೆಗೆ ಎತ್ತಿನಹೊಳೆ, ಭದ್ರಾ ಮೇಲ್ದಂಡೆ, ಮೇಕೆ ದಾಟು ಬಳಿ ಅಣೆಕಟ್ಟು ನಿರ್ಮಾಣ ಸೇರಿದಂತೆ ಕಾವೇರಿ, ಕೃಷ್ಣಾ ಕಣಿವೆಯಲ್ಲಿ ಐದು ವರ್ಷಗಳಲ್ಲಿ ಕೈಗೊಳ್ಳುವ ಯೋಜನೆಗಳ ಕಾರ್ಯಯೋಜನೆ ಬಜೆಟ್‌ನಲ್ಲಿ ಘೋಷಣೆಯಾಗಲಿದೆ.

ಚೊಚ್ಚಲ ಬಜೆಟ್‌
ಎಚ್‌.ಡಿ.ಕುಮಾರಸ್ವಾಮಿಯವರು ಇದೇ ಮೊದಲ ಬಾರಿಗೆ ಹಣಕಾಸು ಸಚಿವರೂ ಆಗಿದ್ದಾರೆ. ಹೀಗಾಗಿ, ಸಹಜವಾಗಿ ಅವರ ಬಜೆಟ್‌ ಕುರಿತು ರಾಜಕೀಯ ವಲಯವಷ್ಟೇ ಅಲ್ಲದೆ ಉದ್ಯಮ, ಕೈಗಾರಿಕೆ, ಐಟಿ-ಬಿಟಿ ವಲಯಗಳಲ್ಲೂ ಕುತೂಹಲ ಮೂಡಿಸಿದೆ. ಬಜೆಟ್‌ ಪೂರ್ವಭಾವಿಯಾಗಿ ಎಫ್ಕೆಸಿಸಿಐ, ಕಾಸಿಯಾ ಸೇರಿದಂತೆ ಎಲ್ಲ ವರ್ಗದ ಪ್ರಮುಖರೊಂದಿಗೆ ಸುದೀರ್ಘ‌ ಸಮಾಲೋಚನೆ ನಡೆಸಿದ್ದಾರೆ. ಚುನಾವಣೆಗೆ ಮುನ್ನವೂ ಸಂವಾದ ನಡೆಸಿ ಜನಸಾಮಾನ್ಯರ ಬೇಡಿಕೆಗಳ ಪಟ್ಟಿ ಮಾಡಿಕೊಂಡಿದ್ದಾರೆ. ಹೀಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಯ ನೀಲ-ನಕ್ಷೆ ಬಜೆಟ್‌ನಲ್ಲಿ ಇರುತ್ತಾ ಎಂಬುದು ಕಾದು ನೋಡಬೇಕಾಗಿದೆ.
2.15 ಲಕ್ಷ ಕೋಟಿ ಸಂಭಾವ್ಯ ಬಜೆಟ್‌ ಗಾತ್ರ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

Result: ಇಂದು ಯುಜಿನೀಟ್‌ ಪರಿಷ್ಕೃತ ತಾತ್ಕಾಲಿಕ ಫ‌ಲಿತಾಂಶ ಪ್ರಕಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.