ರೇವಣ್ಣ “ಕುರ್ಚಿ’ ಕಾಲೆಳೆದ ಬಿಜೆಪಿ


Team Udayavani, Jul 5, 2018, 11:54 AM IST

blore-4.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಕೇಂದ್ರ ಬಿಂದುವಾಗಿರುವ ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ವಿಧಾನಸಭೆಯಲ್ಲಿ ತಮಗೆ ನೀಡಿದ ಆಸನದಲ್ಲಿ ಕುಳಿತುಕೊಳ್ಳದೇ ಇರುವ ವಿಷಯ ಸ್ವಾರಸ್ಯಕರ ಚರ್ಚೆಗೆ ಕಾರಣವಾಯಿತು.

ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ಬಿಜೆಪಿಯ ಜಗದೀಶ್‌ ಶೆಟ್ಟರ್‌ ಮಾತನಾಡಿ, ಅಧಿವೇಶನ 10 ದಿನದ ಬದಲು 9 ದಿನ ಮಾಡಿದ್ದಾರೆ. ಇದರ ಹಿಂದೆ ರೇವಣ್ಣ ಅವರ ಜ್ಯೋತಿಷಿಗಳ ಸಲಹೆ ಇರಬಹುದು ಎಂದರು.

ಮಧ್ಯಪ್ರವೇಶಿಸಿದ ಬಿಜೆಪಿಯ ಜೆ.ಸಿ.ಮಾಧುಸ್ವಾಮಿ, ರೇವಣ್ಣ ಇದುವರೆಗೂ ಅವರಿಗೆ ನೀಡಿದ ಆಸನದಲ್ಲಿ ಕುಳಿತುಕೊಂಡಿಲ್ಲ. ಅಲ್ಲಿಯೂ ಏನಾದರೂ ವಾಸ್ತು ದೋಷವಿದೆಯೇ ಎಂಬುದನ್ನು ಸಭಾಧ್ಯಕ್ಷರು ಪರಿಶೀಲಿಸಬೇಕು ಎಂದರು. ಪ್ರತಿಕ್ರಿಯಿಸಿದ ಸ್ಪೀಕರ್‌ ರಮೇಶ್‌ ಕುಮಾರ್‌, ಸದನದಲ್ಲಿ ಹಿರಿತನದ ಆಧಾರದಲ್ಲಿ ಕುರ್ಚಿ ಹಂಚಲಾಗಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ನಂತರ ಕಾನೂನು ಸಂಸದೀಯ ವ್ಯವಹಾರಗಳ ಸಚಿವರಿಗೆ ಅವಕಾಶ ನೀಡಲಾಗುತ್ತದೆ. ಆದರೆ, ದೇಶಪಾಂಡೆ ಹಾಗೂ ಡಿ.ಕೆ.ಶಿವಕುಮಾರ್‌ ಹಿರಿಯ ಸದಸ್ಯರಾಗಿರುವುದರಿಂದ ಅವರಿಗೆ ಮೊದಲು ಕುರ್ಚಿ ಹಂಚಿಕೆ ಮಾಡಿ ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡಗೆ ಅವಕಾಶ ಕಲ್ಪಿಸಲಾಗಿದೆ. ಅವರ ನಂತರದ ಸ್ಥಾನದಲ್ಲಿ ರೇವಣ್ಣಗೆ ಕುರ್ಚಿ ಹಂಚಲಾಗಿದೆ. ಅವರಿಗೆ ಬೇಸರವಿದ್ದರೆ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಚರ್ಚಿಸಿ ಹೇಳಿದರೆ ಹಿರಿಯ ನಾಯಕರ ಪಕ್ಕದಲ್ಲಿ ಸ್ಥಳಾವಕಾಶ ಮಾಡಿಕೊಡಲಾಗುವುದು ಎಂದರು.

ಈ ವೇಳೆ ರೇವಣ್ಣ ಸದನದಲ್ಲಿ ಹಾಜರಿರಲಿಲ್ಲ. ನಂತರ ಸದನಕ್ಕೆ ಆಗಮಿಸಿದ ಎಚ್‌.ಡಿ.ರೇವಣ್ಣ ತಮಗೆ ಮೀಸಲಾಗಿದ್ದ ಕುರ್ಚಿಯಲ್ಲಿ ಕೂಡದೇ ಬೇರೆಯವರಿಗೆ ಮೀಸಲಾಗಿದ್ದ ಕುರ್ಚಿಯಲ್ಲಿ ಕುಳಿತುಕೊಂಡರು. ಇದನ್ನು ಗಮನಿಸಿದ ಮಾಧುಸ್ವಾಮಿ, ಸಭಾಧ್ಯಕ್ಷರೇ, ರೇವಣ್ಣ ಬೇರೆ ಕುರ್ಚಿಯಲ್ಲಿ ಕುಳಿತಿದ್ದಾರೆ ಎಂದಾಗ, ರೇವಣ್ಣ ತಮಗೆ ಮೀಸಲಿಟ್ಟ ಕುರ್ಚಿಯಲ್ಲಿ ಕುಳಿತುಕೊಳ್ಳದಿರುವುದಕ್ಕೆ ಕಾರಣ ಹೇಳಬೇಕೆಂದು ಬಿಜೆಪಿ ಸದಸ್ಯರು ಆಗ್ರಹಿಸಿದರು.

ವಾಸ್ತು ಸರಿಯಾಗೇ ಇದೆ: ರೇವಣ್ಣ ತಮಗೆ ಮೀಸಲಿಟ್ಟ ಆಸನದಲ್ಲಿ ಕುಳಿತುಕೊಳ್ಳದ ಬಗ್ಗೆ ಬೆಳಗ್ಗೆಯೂ ಚರ್ಚೆ ನಡೆಯಿತು. ಕೊನೆಯ ಸಾಲಿನಲ್ಲಿ ರೇವಣ್ಣ ಕುಳಿತಿದ್ದುದನ್ನು ಗಮನಿಸಿದ ಸ್ಪೀಕರ್‌, ಮೀಸಲಿಟ್ಟ ಸ್ಥಾನಕ್ಕೆ ಹೋಗುವಂತೆ ಸಲಹೆ ಮಾಡಿದರು. ಆದರೆ, ನನಗೆ ಹಿಂದಿನ ಸಾಲಿನಲ್ಲೇ ಕುರ್ಚಿ ಕೊಡಿ ಎಂದು ರೇವಣ್ಣ ಕೇಳಿದಾಗ, ಅದೆಲ್ಲಾ ಸಾಧ್ಯವಿಲ್ಲ. ನಿಮಗೆ ಕೊಟ್ಟಿರುವ ಸ್ಥಾನ ವಾಸ್ತು ಪ್ರಕಾರವೇ ಇದೆ. ಅಲ್ಲೇ ಕುಳಿತುಕೊಳ್ಳಿ ಎಂದರು.

ಸಿದ್ದು ದನಿ ಮಿಮಿಕ್ರಿ ಮಾಡಿದ್ದಾರೆ: ಅಪ್ಪಾಜಿಗೌಡ
ವಿಧಾನ ಪರಿಷತ್ತು: ಧರ್ಮಸ್ಥಳದ ಶಾಂತಿವನದಲ್ಲಿ ಸಮ್ಮಿಶ್ರ ಸರ್ಕಾರದ ಬಗ್ಗೆ ಹೊರಬಂದ ವಿಡಿಯೋದಲ್ಲಿ ಇರುವುದು ಸಿದ್ದರಾಮಯ್ಯ ಅವರ ಧ್ವನಿ ಅಲ್ಲ, ಯಾರೋ ಮಿಮಿಕ್ರಿ ಮಾಡಿ ವಿಡಿಯೋ ಬಿಡುಗಡೆ ಮಾಡಿದ್ದಾರೆ ಎಂದು ಜೆಡಿಎಸ್‌ ಸದಸ್ಯ ಅಪ್ಪಾಜಿಗೌಡ ಹೇಳಿದರು.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, 37 ಸ್ಥಾನ ಗೆದ್ದರೂ ಪ್ರಜಾಪ್ರಭುತ್ವದಲ್ಲಿ ಇರುವ ಅವಕಾಶವನ್ನು ಬಳಸಿಕೊಂಡು ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾರೆ. ಈ ಸರ್ಕಾರ 5 ವರ್ಷ ಸುಭದ್ರವಾಗಿರುತ್ತದೆ. ಅಸೂಯೆ ಬಿಟ್ಟು ರಚನಾತ್ಮಕ ಪ್ರತಿಪಕ್ಷವಾಗಿ ಕೆಲಸ ಮಾಡಿ ಎಂದು ಬಿಜೆಪಿಯವರಿಗೆ ಕಿವಿಮಾತು ಹೇಳಿದರು.

ನಾವು ಅಸೂಯೆ ಪಟ್ಟುಕೊಳ್ಳುತ್ತಿಲ್ಲ. ಸರ್ಕಾರದ ಅಸ್ತಿತ್ವ, ಆಯಸ್ಸು ಮತ್ತು ಬಜೆಟ್‌ ಮಂಡನೆ ಬಗ್ಗೆ ಶಾಂತಿವನದಲ್ಲಿ ಸಿದ್ದರಾಮಯ್ಯನವರೇ ಹೇಳಿದ್ದಾರೆ ಎಂದು ಬಿಜೆಪಿ ಸದಸ್ಯರು ತಿರುಗೇಟು ನೀಡಿದರು. “ಅದು ಸಿದ್ದರಾಯ್ಯನವರ ಧ್ವನಿ ಅಲ್ಲ, ಯಾರೋ ಮಿಮಿಕ್ರಿ ಮಾಡಿ ವಿಡಿಯೋ ರಿಲೀಸ್‌ ಮಾಡಿದ್ದಾರೆ ಎಂದು ಅಪ್ಪಾಜಿಗೌಡ ಹೇಳುತ್ತಿದ್ದಂತೆ ಬಿಜೆಪಿ ಸದಸ್ಯರೆಲ್ಲರೂ ಜೋರಾಗಿ ನಕ್ಕರು.

ಶಾಸಕರ ಭವನಕ್ಕೆ ಸಮಯ ನಿಗದಿಗೆ ಸ್ಪೀಕರ್‌ ಸಮರ್ಥನೆ ಶಾಸಕರ ಭವನಕ್ಕೆ ಸಾರ್ವಜನಿಕರ ವಾಹನ ಮತ್ತು ಸಾರ್ವಜನಿಕರ ಪ್ರವೇಶಕ್ಕೆ ಸಮಯ ನಿಗದಿ ಮಾಡಿರುವ ನಿರ್ಬಂಧ ತೆರವುಗೊಳಿಸುವಂತೆ ಶಾಸಕರ ಕೋರಿಕೆಯನ್ನು ಸ್ಪೀಕರ್‌ ರಮೇಶ್‌ಕುಮಾರ್‌ ತಳ್ಳಿಹಾಕಿದ್ದಾರೆ. ಬುಧವಾರ ಈ ಕುರಿತಂತೆ ಶಾಸಕರು ಮಾಡಿಕೊಂಡ ಮನವಿಗೆ ಪ್ರತಿಕ್ರಿಯಿಸಿದ ಸ್ಪೀಕರ್‌, ಶಾಸಕರ ಭವನದಲ್ಲಿ ಅನೇಕ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ. 

ಎಲ್ಲವನ್ನೂ ಗಮನದಲ್ಲಿಟ್ಟುಕೊಂಡೇ ನಿರ್ಬಂಧ ಹೇರಿದ್ದೇನೆ. ಜನಪ್ರತಿನಿಧಿಗಳಾದ ನಮಗೆ ಖಾಸಗಿತನ ಇರಬೇಕು. ಹಾಗಾಗಿ ಜನರು ಬೆಳಗ್ಗೆ 9 ಗಂಟೆ ನಂತರ ಬಂದರೆ ತೊಂದರೆಯಿಲ್ಲ ಎಂದು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.