ಶಹರ ಸರಕಾರಿ ಶಾಲೆಗಳಲ್ಲಿ ದಾಖಲಾತಿ ಕ್ಷೀಣ


Team Udayavani, Jul 5, 2018, 4:38 PM IST

5-july-17.jpg

ಹುಬ್ಬಳ್ಳಿ: ಸರಕಾರಿ ಶಾಲೆಗಳಲ್ಲಿ ಮಕ್ಕಳ ಪ್ರವೇಶ ಕುಸಿಯುತ್ತಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಹರ ಸರಕಾರಿ ಶಾಲೆಗಳಲ್ಲಿ ಕಳೆದ ಬಾರಿಗೆ ಹೋಲಿಸಿದರೆ, ಸುಮಾರು 163 ವಿದ್ಯಾರ್ಥಿಗಳ ಸಂಖ್ಯೆ ಕುಸಿತವಾಗಿದೆ. ಇದಕ್ಕೆ ಆರ್‌ಟಿಇ ಸೌಲಭ್ಯವೂ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. ಇನ್ನೊಂದು ಕಡೆ ಕೆಲವೊಂದು ಶಾಲೆಗಳಲ್ಲಿ ದಾಖಲಾತಿ ಹೆಚ್ಚಳವಾಗಿರುವುದು ಆಶಾದಾಯ ಸ್ಥಿತಿ ಮೂಡಿಸಿದೆ.

ಆರ್‌ಟಿಇ ಯೋಜನೆಯಡಿ ಸೌಲಭ್ಯ ಪಡೆದು ಅನೇಕರು ಖಾಸಗಿ ಶಾಲೆಗಳಿಗೆ ಪ್ರವೇಶ ಪಡೆಯುತ್ತಿದ್ದು, ಇದರಲ್ಲಿ ಹೆಚ್ಚಿನವರು ಸರಕಾರಿ ಶಾಲೆ ಪ್ರವೇಶ ಪಡೆಯುವವರೆ ಎನ್ನಲಾಗುತ್ತಿದ್ದು, ಇದರಿಂದ ಸರಕಾರಿ ಶಾಲೆಗಳಲ್ಲಿನ ಮಕ್ಕಳ ಹಾಜರಾತಿ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ. ಶಹರದಲ್ಲಿ ಬರುವ ಸುಮಾರು 88 ಶಾಲೆಗಳಲ್ಲಿ 2017-18ನೇ ಸಾಲಿನಲ್ಲಿ 1ನೇ ತರಗತಿಗೆ ದಾಖಲಾತಿ ಪಡೆದ ವಿದ್ಯಾರ್ಥಿಗಳ ಸಂಖ್ಯೆ 1987 ಇದ್ದರೆ, 2018-19ನೇ ಸಾಲಿನಲ್ಲಿ ಜೂನ್‌.15ರ ವರೆಗೆ 1824ಕ್ಕೆ ಬಂದು ನಿಂತಿದೆ. ಅಂದರೆ ವರ್ಷದಿಂದ ವರ್ಷಕ್ಕೆ ಸರಕಾರಿ ಶಾಲೆಗಳ ದಾಖಲಾತಿ ಇಳಿಮುಖವಾಗುತ್ತಿದೆ. ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸರಕಾರದಿಂದ ವಿವಿಧ ಯೋಜನೆಗಳು ಜಾರಿಯಾಗುತ್ತಿದ್ದರೂ ಕೂಡಾ, ದಾಖಲಾತಿಯಲ್ಲಿ ಏರಿಕೆಯಾಗುತ್ತಿಲ್ಲ. ಹಾಜರಾತಿ ಕೊರತೆಯಿಂದಾಗಿ ಹೆಚ್ಚುವರಿ ಶಿಕ್ಷಕರ ಸಮಸ್ಯೆ ನಿವಾರಣೆ ನಿಟ್ಟಿನಲ್ಲಿ ಅನೇಕ ಶಿಕ್ಷಕರನ್ನು ಬೇರೆ ಕಡೆ ವರ್ಗಾಯಿಸಲಾಗಿದೆ ಎನ್ನುತ್ತಾರೆ ಶಿಕ್ಷಣ ಇಲಾಖೆ ಅಧಿಕಾರಿಗಳು.

ಪ್ರವೇಶ ಹೆಚ್ಚಳದ ಶಾಲೆಗಳು: 88 ಶಾಲೆಗಳ ಪರವಾಗಿ 32 ಶಾಲೆಗಳಲ್ಲಿ ದಾಖಲಾತಿ ಹೆಚ್ಚಳವಿದ್ದು, 49 ಶಾಲೆಗಳಲ್ಲಿ ದಾಖಲಾತಿ ಕುಸಿತ ಕಂಡಿವೆ. ಇನ್ನುಳಿದ 7 ಶಾಲೆಗಳು ಯಥಾಸ್ಥಿತಿ ಕಾಯ್ದುಕೊಂಡಿವೆ. ಕಳೆದ ವರ್ಷ 2017-18ನೇ ಸಾಲಿನಲ್ಲಿ ನಾಗಶೆಟ್ಟಿಕೊಪ್ಪ ಎಚ್‌ ಪಿಎಸ್‌ ಶಾಲೆ ನಂ.15ರಲ್ಲಿ ಕಳೆದ 16 ವಿದ್ಯಾರ್ಥಿಗಳು ದಾಖಲಾತಿ ಪಡೆದರೆ, ಈ ವರ್ಷ 40 ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದಾರೆ. ನಾರಾಯಣಸೋಫಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ವರ್ಷ 31 ವಿದ್ಯಾರ್ಥಿಗಳು ದಾಖಲಾತಿ ಪಡೆದರೇ ಈ ವರ್ಷ 50 ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದಾರೆ. ಎಸ್‌.ಎಂ. ಕೃಷ್ಣಾ ನಗರದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ವರ್ಷ 58 ವಿದ್ಯಾರ್ಥಿಗಳು ದಾಖಲಾತಿ ಪಡೆದರೇ, ಈ ವರ್ಷ 74 ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದಾರೆ.

ಸದಾಶಿವನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ರಣದಮ್ಮ ಕಾಲೋನಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ವರ್ಷಕ್ಕಿಂತ 13 ವಿದ್ಯಾರ್ಥಿಗಳ ಹೆಚ್ಚಿನ ದಾಖಲಾತಿಗಳಾಗಿವೆ. ದಾಖಲಾತಿ ಕುಸಿದಿರುವ ಶಾಲೆಗಳು: ಕಸಬಾಪೇಟೆ ಸರಕಾರಿ ಉರ್ದು ಹೆಣ್ಣು ಮಕ್ಕಳ ಶಾಲೆ ನಂ.3ರಲ್ಲಿ ಕಳೆದ ವರ್ಷ 97 ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದರೇ, ಈ ವರ್ಷ 60 ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದಾರೆ. ಹೆಗ್ಗೇರಿ ಎಲ್‌ಪಿಎಸ್‌ ಶಾಲೆ ಕಳೆದ ವರ್ಷ 28 ವಿದ್ಯಾರ್ಥಿಗಳ ದಾಖಲಾತಿ ಪಡೆದಿದ್ದರೇ, ಈ ವರ್ಷ ಕೇವಲ 5 ವಿದ್ಯಾರ್ಥಿಗಳು ದಾಖಲಾತಿಯಾಗಿದೆ. ಕಸಬಾಪೇಟೆ ಸರಕಾರಿ ಗಂಡು ಮಕ್ಕಳ ಶಾಲೆ ನಂ.6ರಲ್ಲಿ ಕಳೆದ ವರ್ಷ 52 ವಿದ್ಯಾರ್ಥಿಗಳು ದಾಖಲಾತಿಯಾಗಿದ್ದರೇ, ಈ ವರ್ಷ 36 ಜನರ ದಾಖಲಾತಿಯಾಗಿದೆ. ಇದೇ ರೀತಿ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸುಮಾರು 49 ಶಾಲೆಗಳ ದಾಖಲಾತಿಯಲ್ಲಿ ಇಳಿಕೆಯಾಗಿದೆ.

ಪೂರ್ವ ಕ್ಷೇತ್ರದಲ್ಲಿ ಹೆಚ್ಚು ಸರಕಾರಿ ಶಾಲೆಗಳು: ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ವ್ಯಾಪ್ತಿಯಲ್ಲಿ ಒಟ್ಟು 88 ಶಾಲೆಗಳು ಬರುತ್ತಿದ್ದು ಇದರಲ್ಲಿ 75 ಶಾಲೆಗಳು ಪೂರ್ವ ಕ್ಷೇತ್ರದ ವ್ಯಾಪ್ತಿಯಲ್ಲಿ ಬಂದರೆ, ಇನ್ನುಳಿದ 13 ಶಾಲೆಗಳು ಕೇಂದ್ರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತವೆ. ಪೂರ್ವ ಕ್ಷೇತ್ರದಲ್ಲಿ ಖಾಸಗಿ ಶಾಲೆಗಳು ಬೆರಳೆಣಿಕೆಯಷ್ಟು ಇದ್ದು, ಸರಕಾರಿ ಶಾಲೆಗಳು ಹೆಚ್ಚಿದ್ದು ಅಲ್ಲಿ ಹೆಚ್ಚಿನ ಸೌಲಭ್ಯ ನೀಡಲು ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಪೂರ್ವ ಕ್ಷೇತ್ರದಲ್ಲಿ ಶಾಸಕರ ಅನುದಾನದಲ್ಲಿ ಸುಮಾರು 48 ಶಾಲೆಗಳಿಗೆ ಸ್ಮಾರ್ಟ್‌ ಬೋರ್ಡ್‌ ವ್ಯವಸ್ಥೆ ಮಾಡಲಾಗಿದ್ದು, ಕೇಂದ್ರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಾಸಕರ ಅನುದಾನದಲ್ಲಿ 3 ಶಾಲೆಗಳಿಗೆ ಸ್ಮಾರ್ಟ್‌ ಬೋರ್ಡ್‌ ವ್ಯವಸ್ಥೆ ಮಾಡಲಾಗಿದೆ.

ಆರ್‌ಟಿಇ ಇದ್ದರೂ ಕೂಡಾ ಶಹರ ವಿಭಾಗದಲ್ಲಿ ಹೆಚ್ಚಿನ ದಾಖಲಾತಿ ಮಾಡಲು ಹೆಚ್ಚಿನ ಒತ್ತು ನೀಡಲಾಗಿದೆ. ಇದಕ್ಕಾಗಿ ಕ್ಷೇತ್ರದಲ್ಲಿ ಹಲವಾರು ಕಾರ್ಯಕ್ರಮ, ಜಾಥಾ ಸಹ ನಡೆಸಲಾಗಿದ್ದು, ಮಕ್ಕಳನ್ನು ಸರಕಾರಿ ಶಾಲೆಗಳಿಗೆ ದಾಖಲು ಮಾಡಿ ಎಂದು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತಿದೆ. ಇದಲ್ಲದೇ ಆರಂಭದಲ್ಲಿ ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಬಿದ್ದು ಖಾಸಗಿ ಶಾಲೆಗೆ ಪ್ರವೇಶ ಪಡೆಯುವ ಬಡವರು ನಂತರದ ದಿನಗಳಲ್ಲಿ ಅಲ್ಲಿನ ಹೆಚ್ಚಿನ ಹೊರೆ ಅನುಭವಿಸಿ ಸರಕಾರಿ ಶಾಲೆಗಳಿಗೆ ಪ್ರವೇಶಕ್ಕೆ ಮುಂದಾಗುತ್ತಿದ್ದಾರೆ. ಅಂತಹ ವಿದ್ಯಾರ್ಥಿಗಳನ್ನು ಕೂಡಾ ಸರಕಾರಿ ಶಾಲೆಗಳಲ್ಲಿ ದಾಖಲಾತಿ ಮಾಡಸಿಕೊಳ್ಳಲಾಗುತ್ತಿದೆ. 
 ಅಶೋಕ ಕುಂಬಾರ,
 ಪ್ರಭಾರಿ ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ

„ಬಸವರಾಜ ಹೂಗಾರ 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

P.-Joshi

Bengaluru Jail: ಸರಕಾರದಿಂದಲೇ ದರ್ಶನ್‌ ಕೇಸ್‌ ಫೋಟೋ ವೈರಲ್‌: ಪ್ರಹ್ಲಾದ್‌ ಜೋಶಿ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.