ಮರುಸೇರ್ಪಡೆಗೆ ಆಗ್ರಹಿಸಿ ಮುಂದುವರಿದ ಹೋರಾಟ


Team Udayavani, Jul 5, 2018, 5:32 PM IST

5-july-21.jpg

ಲಕ್ಷ್ಮೇಶ್ವರ: ಪಟ್ಟಣದ ಪುರಸಭೆಯಲ್ಲಿ 2012 ರಿಂದ ಹೊರಗುತ್ತಿಗೆ ಆಧಾರದಲ್ಲಿ ಮನೆಮನೆ ಕಸ ಸಂಗ್ರಹ ಮಾಡುತ್ತಿದ್ದ 12 ಜನ ಮಹಿಳಾ ಕಾರ್ಮಿಕರು ತಮ್ಮನ್ನು ಕೆಲಸಕ್ಕೆ ಮರು ಸೇರ್ಪಡೆಗೊಳಿಸಬೇಕು ಎಂದು ಆಗ್ರಹಿಸಿ ಮಂಗಳವಾರದಿಂದ ಪುರಸಭೆ ಮುಂದೆ ನಡೆಸುತ್ತಿರುವ ಧರಣಿ ಸತ್ಯಾಗ್ರಹ 2ನೇ ದಿನವಾದ ಬುಧವಾರ ವಿವಿಧ ಸಂಘಟನೆಗಳ ಬೆಂಬಲ ಮತ್ತು ರಸ್ತೆ ತಡೆ ಪ್ರತಿಭಟನೆ ಮೂಲಕ ತೀವ್ರ ಸ್ವರೂಪ ಪಡೆದುಕೊಂಡಿತು.

ಗಾಳೆಮ್ಮ ನಿರಂತರ ಉಳಿತಾಯ ಮತ್ತು ಸ್ವಸಹಾಯ ಗುಂಪಿನಿಂದ ಮನೆ ಮನೆಗೆ ಕಸ ಸಂಗ್ರಹ ಮಾಡುವ ಕಾರ್ಯಕ್ಕೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ 12 ಮಹಿಳಾ ಕಾರ್ಮಿಕರು ತಮ್ಮನ್ನು ಟೆಂಡರ್‌ ಅವಧಿ ಮುಗಿದಿದೆ ಎಂಬ ಕಾರಣ ನೀಡಿ ಕೆಲಸದಿಂದ ಬಿಡಿಸಿದ್ದಾರೆ. ಪ್ರಶ್ನಿಸಿದ್ದಕ್ಕೆ ಮರು ಟೆಂಡರ್‌ ಕರೆದು ಮತ್ತೇ ಕೆಲಸಕ್ಕೆ ಸೇರಿಸಿಕೊಳ್ಳುವುದಾಗಿ ಹೇಳಿದ್ದರು. ನಮನ್ನು ಕೆಲಸಕ್ಕೆ ಸೇರಿಸಿಕೊಳ್ಳಿ ಎಂದು ಹಿರಿಯರು, ಸದಸ್ಯರು, ಅಧ್ಯಕ್ಷರು, ಅಧಿಕಾರಿಗಳಲ್ಲಿ ಅಂಗಲಾಚಿದರೂ ಯಾವುದೇ ಪ್ರಯೋಜನವಾಗದ್ದರಿಂದ ಜಿಲ್ಲಾಧಿಕಾರಿಗಳ ಗಮನ ಸೆಳೆಯುವ ನಿಟ್ಟಿನಲ್ಲಿ ಧರಣಿ ಸತ್ಯಾಗ್ರಹ ಹೂಡಿರುವುದಾಗಿ ಹೇಳಿದ್ದಾರೆ.

ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್‌ ಡಾ|ವೆಂಕಟೇಶ ನಾಯಕ ಅವರು ಪ್ರತಿಭಟನಾನಿರತರಿಗೆ ತಮ್ಮ ಬೇಡಿಕೆಯ ಬಗ್ಗೆ ಪುರಸಭೆ ಆಡಳಿತ ಮಂಡಳಿ, ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಸದ್ಯದಲ್ಲಿಯೇ ನಡೆಯುವ ಪುರಸಭೆ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ನಿಮ್ಮ ಪರವಾದ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ. ವಿಷಯವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಕೆಲ ದಿನ ಕಾಲಾವಕಾಶ ನೀಡಿ ಪ್ರತಿಭಟನೆಯಿಂದ ಹಿಂದೆ ಸರಿಯುವುವಂತೆ ಹೇಳಿದರು. ಆದರೆ ಇದಕ್ಕೆ ಒಪ್ಪದ ಪ್ರತಿಭಟನಾಕಾರರರು ಪುರಸಭೆ ಸಾಮಾನ್ಯ ಸಭೆ ಮುಗಿಯುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯುತ್ತದೆ. ಸಭೆಯಲ್ಲಿ ನಮ್ಮ ಪರ ಕೈಗೊಳ್ಳುವ ತೀರ್ಮಾನದ ಮೇಲೆ ಹಿಂದೆ ಸರಿಯುವ ಬಗ್ಗೆ ನಿರ್ಧರಿಸುತ್ತೇವೆ. ಕೆಲಸಕ್ಕೆ ಸೇರಿಸಿಕೊಳ್ಳದಿದ್ದರೆ ಪುರಸಭೆ ಮುಂದೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮಹಿಳೆಯರು ಹೇಳಿದರು.

ಪ್ರತಿಭಟನೆಗೆ ಸಾಥ್‌ ನೀಡಿ ಇನ್ನು ಮಹಿಳೆಯರ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟಕ್ಕಿಳಿಯುವುದಾಗಿ ಹೇಳಿದ ಶರಣು ಗೋಡಿ ನೇತೃತ್ವದ ಕರವೇ, ಸುರೇಶ ನಂದೆಣ್ಣವರ ನೇತೃತ್ವದ ದಲಿತ ಸಂಘರ್ಷ ಸಮಿತಿ, ರಮೇಶ ಗಡದವರ ನೇತೃತ್ವದ ಅಂಬೇಡ್ಕರ ಸೇನೆ, ಸುರೇಶ ಹಟ್ಟಿ ನೇತೃತ್ವದ ಸಂಗೊಳ್ಳಿ ರಾಯಣ್ಣ ಯುವಶಕ್ತಿ ವೇದಿಕೆ, ಕರ್ನಾಟಕ ಜನಪರ, ಜಯಕರ್ನಾಟಕ, ಟಿಪ್ಪು ಸುಲ್ತಾನ ಸಂಘಟನೆಗಳ ಕಾರ್ಯಕರ್ತರು ತಹಸೀಲ್ದಾರರು, ಮುಖ್ಯಾಧಿಕಾರಿಗಳು, ಪುರಸಭೆ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

P.-Joshi

Bengaluru Jail: ಸರಕಾರದಿಂದಲೇ ದರ್ಶನ್‌ ಕೇಸ್‌ ಫೋಟೋ ವೈರಲ್‌: ಪ್ರಹ್ಲಾದ್‌ ಜೋಶಿ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.