ಸರಕಾರಿ ಶಾಲೆ ಉಳಿಸಲು ಹಳೆ ವಿದ್ಯಾರ್ಥಿಗಳ ಭಗೀರಥ ಪ್ರಯತ್ನ


Team Udayavani, Jul 6, 2018, 6:00 AM IST

0407kdpp9.jpg

ಕಂಬದಕೋಣೆ: ದಾಖಲಾತಿ ಕುಸಿತದಿಂದ ಮುಚ್ಚುವ ಹಂತಕ್ಕೆ ತಲುಪಿದ್ದ ಶಾಲೆಯನ್ನು ಉಳಿಸುವ ಉದ್ದೇಶದಿಂದ ಕಂಬದಕೋಣೆ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘವು ಈ ವರ್ಷದಿಂದ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಿದೆ.
 
ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಆಂಗ್ಲ ಭಾಷೆಗೆ ಪ್ರಾಧಾನ್ಯತೆ ಕೊಡುವುದಿಲ್ಲ ಎನ್ನುವ ಸಾಮಾನ್ಯ ಆರೋಪಕ್ಕೆ ವಿರುದ್ಧವೆನ್ನುವಂತೆ  ಇಲ್ಲಿನ ಶಾಲೆಯಲ್ಲಿ  ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ಹಳೆ ವಿದ್ಯಾರ್ಥಿ ಸಂಘ ಮುಂದಾಗಿದೆ. ಇದಕ್ಕೆ  ಶಾಲಾ ಎಸ್‌ಡಿಎಂಸಿ ಸಮಿತಿಯು ಕೈಜೋಡಿಸಿದೆ.
 
ಹಿಂದೆ ಈ ಶಾಲೆಯಲ್ಲಿ 700 ರಿಂದ 800 ವಿದ್ಯಾರ್ಥಿಗಳು ಪ್ರತಿ ವರ್ಷ ಕಲಿಯುತ್ತಿದ್ದರು. ಬಳಿಕ ಖಾಸಗಿ ಶಾಲೆಗಳು, ಇಂಗ್ಲಿಷ್‌ ವ್ಯಾಮೋಹ ಹೆಚ್ಚಾದಂತೆ ಮಕ್ಕಳ ಸಂಖ್ಯೆ ಕುಸಿಯತೊಡಗಿತು. ಈಗ ಮಕ್ಕಳ ಸಂಖ್ಯೆ 100 ಕೂಡ ಇಲ್ಲ.  

ಹಳೆ ವಿದ್ಯಾರ್ಥಿಗಳಿಂದಲೇ ಅಭಿಯಾನ
ಮಕ್ಕಳನ್ನು ಶಾಲೆಗೆ ಸೆಳೆಯಲು ಹಳೆ ವಿದ್ಯಾರ್ಥಿಗಳು ಸ್ವತಃ ಸನಿಹದ ಊರುಗಳ  ಎಲ್‌ಕೆಜಿ- ಯುಕೆಜಿ ವಯೋಮಾನದ ಮಕ್ಕಳಿರುವ ಮನೆ – ಮನೆಗೆ ಭೇಟಿ ನೀಡಿ, ಪೋಷಕರಲ್ಲಿ ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸಿ, ಉಚಿತವಾಗಿ ಉತ್ತಮ ಗುಣಮಟ್ಟದ ಶಿಕ್ಷಣ ಕೊಡುತ್ತೇವೆ ಎನ್ನುವುದನ್ನು ಅಭಿಯಾನದ ಮೂಲಕ ಮನವರಿಕೆ ಕೂಡ ಮಾಡಿದ್ದರು. 

24 ವಿದ್ಯಾರ್ಥಿಗಳು ದಾಖಲು
ಹಳೆ ವಿದ್ಯಾರ್ಥಿಗಳ ಪ್ರಯತ್ನಕ್ಕೆ ಫ‌ಲ ಎಂಬಂತೆ ಈ ವರ್ಷ ಎಲ್‌ಕೆಜಿಗೆ 8 ಹಾಗೂ ಯುಕೆಜಿಗೆ 16 ಒಟ್ಟು 24 ಮಂದಿ ಮಕ್ಕಳು ದಾಖಲಾತಿಯಾಗಿದ್ದಾರೆ.  ಇಬ್ಬರು ಗೌರವ ಶಿಕ್ಷಕಿಯರನ್ನು ಕೂಡ ನೇಮಿಸಲಾಗಿದೆ.

ಖರ್ಚು ಭರಿಸಲಿದೆ 
ಹಳೆ ವಿದ್ಯಾರ್ಥಿ ಸಂಘ

ಈ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಉಚಿತವಾಗಿ ನಡೆಸುವುದು ಅಷ್ಟು ಸುಲಭವಲ್ಲ.  ಶಿಕ್ಷಕರ ಸಂಬಳ, ಮಕ್ಕಳಿಗೆ ಹೊಸದಾಗಿ ಕುರ್ಚಿ, ಟೇಬಲ್‌, ಆಟದ ಸಾಮಗ್ರಿಗಳು, ಪಠ್ಯ, ನೋಟ್‌ ಪುಸ್ತಕಗಳೆಲ್ಲ ಸೇರಿ ವರ್ಷಕ್ಕೆ ಸುಮಾರು  2 ಲಕ್ಷ ರೂ. ಗೂ ಅಧಿಕ ಹಣ ಬೇಕು. ಅದನ್ನೆಲ್ಲ ಹಳೆ ವಿದ್ಯಾರ್ಥಿಗಳೇ ಭರಿಸಲಿದ್ದಾರೆ. 

ಶಾಲೆ ಉಳಿಸುವ ಉದ್ದೇಶ
ಅಂದು ತರಗತಿಯಲ್ಲಿ ಕುಳಿತಕೊಳ್ಳಲು ಸಾಧ್ಯವಿಲ್ಲದಷ್ಟು ಮಕ್ಕಳು ಇರುತ್ತಿದ್ದರು. ಈಗ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಭವಿಷ್ಯದಲ್ಲಿ ಈ ಶಾಲೆಯನ್ನು ಇನ್ನಷ್ಟು ವರ್ಷಗಳ ಕಾಲ ಮುಂದುವರಿಸಿಕೊಂಡು ಹೋಗಲು ನಾವೇ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ಮುಂದಾಗಿದ್ದೇವೆ. ಅದರೊಂದಿಗೆ ಬಾಕಿ ಉಳಿದ 1 ರಿಂದ 7 ನೇ ವರೆಗಿನ ತರಗತಿಗಳಿಗೆ ಅಗತ್ಯವಿರುವ ಎಲ್ಲ ಸವಲತ್ತುಗಳನ್ನು ಪೂರೈಸಲಾಗುವುದು.
– ವಿಜಯ ಕುಮಾರ್‌ ಶೆಟ್ಟಿ, 
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ 

ಉತ್ತಮ ಬೆಳವಣಿಗೆ
ಇಂಗ್ಲಿಷ್‌ ವ್ಯಾಮೋಹದಿಂದ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕುಸಿಯುತ್ತಿದೆ. ಆ ಕಾರಣಕ್ಕೆ ಹಳೆ ವಿದ್ಯಾರ್ಥಿಗಳೇ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಲು ಮುಂದಾಗಿದ್ದಾರೆ. ಇದೊಂದು ಉತ್ತಮ ಬೆಳವಣಿಗೆ. ಎಲ್ಲ ಸಹಕಾರ ನೀಡಲಿದ್ದೇವೆ. 
– ಗಂಗಾಧರ ಬಂಟ್‌,ಮುಖ್ಯೋಪಾಧ್ಯಾಯರು

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

16-kumbashi

Ganesh Chaturthi; ಆನೆಗುಡ್ಡೆ: ಸಂಭ್ರಮದ ಶ್ರೀ ವಿನಾಯಕ ಚತುರ್ಥಿ; ಹರಿದು ಬಂದ ಭಕ್ತ ಸಮೂಹ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.