ಬಾರಾಳಿ ಶಾಲೆ ದೈಹಿಕ ಶಿ.ಶಿಕ್ಷಕ ರಾಜಾರಾಮ್‌ ಡಬ್ಬಲ್‌ ಡ್ಯೂಟಿ


Team Udayavani, Jul 6, 2018, 6:00 AM IST

0507kota7e.jpg

ವಿಶೇಷ ವರದಿ -ಕೋಟ: ಆಂಗ್ಲ ಮಾಧ್ಯಮ ಶಾಲೆಗಳ ಹಳದಿ ಬಸ್ಸುಗಳ ಮಾಯೆಯಿಂದ ಇಂದು ಸರಕಾರಿ ಕನ್ನಡ ಶಾಲೆಗಳು ಸಂಕಷ್ಟಕ್ಕೆ ಸಿಲುಕುತ್ತಿದೆ. ಹೀಗಾಗಿ ಮಕ್ಕಳ ಸಂಖ್ಯಾಬಲ ಉಳಿಸಿಕೊಳ್ಳಲು ಸರಕಾರಿ ಶಾಲೆಗಳಲ್ಲೂ ವಾಹನದ ವ್ಯವಸ್ಥೆ ಮಾಡಲಾಗುತ್ತಿದೆ. ಇದೇ ರೀತಿ ಮಂದಾರ್ತಿ ಸಮೀಪ  ಬಾರಾಳಿ ಸ.ಹಿ.ಪ್ರಾ. ಶಾಲೆಯಲ್ಲೂ ಕಳೆದ ವರ್ಷದಿಂದ ಬಸ್ಸಿನ ವ್ಯವಸ್ಥೆ ಮಾಡಲಾಗಿದ್ದು,  ಇಲ್ಲಿನ ದೈ.ಶಿ.ಶಿಕ್ಷಕ ರಾಜಾರಾಮ್‌ ಚಾಲಕನಾಗಿ ಉಚಿತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ಶಾಲೆಯಲ್ಲಿ ಇವರದ್ದು ಡಬ್ಬಲ್‌ ಡ್ಯೂಟಿ.

ಶಿಕ್ಷಣಾಭಿಮಾನಿಗಳಿಂದ 
ಮಿನಿ ಬಸ್ಸು ಕೊಡುಗೆ

ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿರುವು ದನ್ನು  ಮನಗೊಂಡ ಹಳೆ ವಿದ್ಯಾರ್ಥಿ ವಿಜಯ್‌ ಹೆಗ್ಡೆ ಅವರು  ಕಳೆದ ವರ್ಷ ಶ್ರೀರಾಮ್‌ ಸೇವಾ ಸಮಿತಿ ಮೂಲಕ ಶಾಲೆಗೆ ಮಿನಿ ಬಸ್ಸು ಕೊಡುಗೆಯಾಗಿ ನೀಡಿದ್ದಾರೆ.  ಇದರ  ನಿರ್ವಹಣೆ ಹಳೆ ವಿದ್ಯಾರ್ಥಿಗಳ ಮೂಲಕ ನಡೆಯುತ್ತಿದೆ. ನಿರ್ವಹಣಾ ವೆಚ್ಚ ಅಧಿಕವಾಗುವುದರಿಂದ ಚಾಲಕನ ಸಂಬಳ ಉಳಿಸಲು ದೈ.ಶಿ.ಶಿಕ್ಷಕರೇ ಚಾಲಕನಾಗಿದ್ದಾರೆ.

ಬೆಳಗ್ಗೆ  6ಗಂಟೆಯಿಂದ ಸಂಜೆ 5.30ರ ವರೆಗೆ ಡ್ನೂಟಿ
ದೈ.ಶಿ.ಶಿಕ್ಷಕ ರಾಜಾರಾಮ್‌ ಅವರು ಮೂಲತಃ ಹೆಬ್ರಿ ನಿವಾಸಿಯಾಗಿದ್ದು ಇದೀಗ 15ವರ್ಷದಿಂದ ಈ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಹಾಗೂ ಬಾರಳಿಯಲ್ಲೇ ವಾಸವಾಗಿದ್ದಾರೆ. ಬೆಳಗ್ಗೆ  6ಗಂಟೆಗೆ ಶಾಲೆಯ ಕರ್ತವ್ಯಕ್ಕೆ ಹಾಜರಾಗುವ ಇವರು ಮೊದಲಿಗೆ ಹತ್ತಿರದ ವಿದ್ಯಾರ್ಥಿಗಳಿಗೆ ಕ್ರೀಡಾ ತರಬೇತಿ ನೀಡುತ್ತಾರೆ. ಅನಂತರ 8ಗಂಟೆಗೆ ಚಾಲಕನ ಸೀಟಿನಲ್ಲಿ ಕುಳಿತು ಐದಾರು ಕಿ.ಮೀ. ದೂರದ ವಿದ್ಯಾರ್ಥಿಗಳನ್ನು ಶಾಲೆಗೆ ತಂದು ಬಿಡುತ್ತಾರೆ. ಸಂಜೆ ಮಕ್ಕಳನ್ನು ಮನೆ ಸೇರಿಸಿ 6ಗಂಟೆಗೆ ಮನೆ ತಲಪುತ್ತಾರೆ. ನಾಲ್ಕೈದು ದಿನ ರಜೆಯಲ್ಲಿದ್ದರೆ ಮಾತ್ರ ಬೇರೆ ಚಾಲಕನನ್ನು ನೇಮಿಸಲಾಗುತ್ತದೆ ಹಾಗೂ ಬಸ್ಸಿನ ನಿರ್ವಹಣೆಗೂ 65ಸಾವಿರಕ್ಕೂ ಅಧಿಕ ಇವರ ಕೈಯಿಂದಲೇ ವ್ಯಯಿಸಿದ್ದಾರೆ.

ಬಹುಮುಖ ಪ್ರತಿಭೆ
ದೈಹಿಕ ಶಿಕ್ಷಣ ತರಬೇತುದಾರ, ಗಣಿತ, ವಿಜ್ಞಾನ ಪಾಠ ಬೋಧಿಸುವ ಶಿಕ್ಷಕ, ಚಾಲಕ, ಕರಕುಶಲ ವಸ್ತುಗಳ ತರಬೇತುದಾರ, ಸಮಾಜಸೇವಕ ಹೀಗೆ ಬಹುಮುಖ ಪ್ರತಿಭೆ ಮೂಲಕ ಇವರು ಗುರುತಿಸಿಕೊಂಡಿದ್ದಾರೆ.

ಹೆಚ್ಚಿದ ವಿದ್ಯಾರ್ಥಿಗಳ ಸಂಖ್ಯಾಬಲ
1ರಿಂದ 7ನೇ ತರಗತಿ ವರೆಗಿನ ಈ ಶಾಲೆಯಲ್ಲಿ  ಬಸ್ಸು ಆರಂಭಿಸುವ ಮೊದಲು ವಿದ್ಯಾರ್ಥಿಗಳ ಸಂಖ್ಯೆ 50ರ 
ಆಸುಪಾಸಿನಲ್ಲಿತ್ತು. ಆದರೆ ಇದೀಗ 90ಕ್ಕೇರಿದೆ. ಶಾಲೆಯ ಕುರಿತು ವಿದ್ಯಾರ್ಥಿ ಗಳು ಹೆತ್ತವರು ಆಕರ್ಷಿತರಾಗುತ್ತಿದ್ದಾರೆ.

ಖುಷಿಯಿಂದಲೇ ಕಾರ್ಯ ನಿರ್ವಹಣೆ 
ಶಿಕ್ಷಣಾಭಿಮಾನಿಗಳು ಶಾಲೆಯ ಒಳಿತಿಗಾಗಿ ಮಿನಿ ಬಸ್ಸು ಕೊಡುಗೆಯಾಗಿ ನೀಡಿದ್ದಾರೆ.  ನಿರ್ವಹಣೆ ಕಷ್ಟವಾದ್ದರಿಂದ ಚಾಲಕನ ಸಂಬಳವನ್ನು ಉಳಿಸಿ  ನಿರ್ವಹಣೆಗೆ ಬಳಸಿಕೊಳ್ಳುವ ನಿಟ್ಟಿನಲ್ಲಿ ನಾನೇ ಆ ಕರ್ತವ್ಯಕ್ಕೆ ಮುಂದಾದೆ. ಇದೀಗ ಒಂದು ವರ್ಷ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ವಿದ್ಯಾರ್ಥಿಗಳ ಸಂಖ್ಯೆ ಕೂಡ ಹೆಚ್ಚಿದೆ. ನನಗೆ ಇದೊಂದು ಹೆಚ್ಚುವರಿ ಕೆಲಸ ಅನಿಸುತ್ತಿಲ್ಲ. ಖುಷಿಯಿಂದಲೇ  ಮಾಡುತ್ತಿದ್ದೇನೆ.
– ರಾಜಾರಾಮ್‌,
ದೈ.ಶಿ.ಶಿಕ್ಷಕರು ಬಾರಾಳಿ

ಟಾಪ್ ನ್ಯೂಸ್

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತ್ನಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BUS driver

Bus ticket; ದೀಪಾವಳಿ ಸಂಭ್ರಮಕ್ಕೆ ಬಸ್‌ ಟಿಕೆಟ್‌ ದರ ತಣ್ಣೀರು

1-mahe

MAHE-Mangalore University ಒಡಂಬಡಿಕೆ : ಮೂಳೆ ಅಲೋಗ್ರಾಫ್ಟ್‌ಗಳ ಗಾಮಾ ವಿಕಿರಣ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

1-ottin

Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

6-hunsur

Hunsur: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಹಲ್ಲೆ, ಆರೋಪಿ ಬಂಧನ

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bagheera movie song out

Bagheera ರುಧಿರ ಗಾನ…; ಶ್ರೀಮುರಳಿ ಸಿನಿಮಾದ ಹಾಡು ಬಂತು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.