3 ಮಲೇರಿಯಾ, 14 ಡೆಂಗ್ಯೂ ಪ್ರಕರಣ


Team Udayavani, Jul 6, 2018, 2:45 AM IST

kdp-5-7.jpg

ಬಂಟ್ವಾಳ: ಮಲೇರಿಯಾ-3, ಡೆಂಗ್ಯೂ-14 ಪ್ರಕರಣ ತಾ| ವ್ಯಾಪ್ತಿಯಲ್ಲಿ ಕಳೆದ  ಮಳೆಗಾಲದ ಬಳಿಕ ದಾಖಲಾಗಿದೆ ಎಂದು ತಾ| ಆರೋಗ್ಯಾಧಿಕಾರಿ ದೀಪಾ ಪ್ರಭು  ಮಾಹಿತಿ ನೀಡಿದ್ದಾರೆ. ಅವರು ಜು. 4ರಂದು ಬಿ.ಸಿ. ರೋಡ್‌  ತಾ.ಪಂ. ಎಸ್‌.ಜಿ.ಆರ್‌.ಎಸ್‌.ವೈ. ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಮಾಸಿಕ ಕೆಡಿಪಿ ಸಭೆಯಲ್ಲಿ ಮಾಹಿತಿ ನೀಡಿದರು.

ಇವುಗಳ ಪೈಕಿ ಬಂಟ್ವಾಳ ನಗರದಲ್ಲಿ  2, ಪುದು ಗ್ರಾಮದಲ್ಲಿ 1  ಮಲೇರಿಯಾ ಪ್ರಕರಣ ಪತ್ತೆಯಾಗಿದೆ. ಪುದು, ದೈವಸ್ಥಳ, ಪಂಜಿಕಲ್ಲು, ವಾಮದಪದವು, ಸಜಿಪ, ಅಳಿಕೆ, ಕುರ್ನಾಡು ವಿಟ್ಲ ಭಾಗದಲ್ಲಿ ತಲಾ ಒಂದೊಂದು ಮಲೇರಿಯಾ ಶಂಕಿತ ಪ್ರಕರಣಗಳು ವರದಿ ಆಗಿವೆ. ಪುಂಜಾಲಕಟ್ಟೆ 3, ಬಂಟ್ವಾಳ ನಗರ 2, ಮಂಚಿ 3, ನರಿಕೊಂಬು 2, ಕುರಿಯಾಳ 4 ಸಹಿತ ವಿವಿಧ ಪ್ರದೇಶಗಳಲ್ಲಿ ಒಟ್ಟು 14 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಕಳೆದ ಜನವರಿಯಿಂದ 78 ಶಂಕಿತ ಡೆಂಗ್ಯೂ ಪತ್ತೆಯಾಗಿದ್ದು, ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಡೆಂಗ್ಯೂ ಹಾಗೂ ಮಲೇರಿಯಾ ರೋಗ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಹೇಳಿದರು.
ಶಂಕಿತವಿರುವ ಪ್ರದೇಶಗಳಿಗೆ ಭೇಟಿ ನೀಡಿ, ಇನ್ನೊಂದು ಸುತ್ತಿನ ಫಾಗಿಂಗ್‌ ನಡೆಸುವಂತೆ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರು ಸೂಚನೆ ನೀಡಿದರು.

ರಾಸುಗಳಿಗೆ ಜ್ವರದ ಪ್ರಕರಣಗಳು ಪತ್ತೆಯಾಗಿದ್ದು, ವೈದ್ಯರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಾ.ಪಂ. ಉಪಾಧ್ಯಕ್ಷ ಅಬ್ಟಾಸ್‌ ಅಲಿ ಸೂಚನೆ ನೀಡಿದರು. ಶ್ಮಶಾನವನ್ನು ಮುಕ್ತಿಧಾಮ ಮಾಡುವ ಯೋಜನೆಯಿರುವುದರಿಂದ ಅವರಿಗೆ ಬೇಕಾದಷ್ಟು ಗಿಡ ವಿತರಣೆ ಮಾಡುವಂತೆ ಎಂದು ಇಒ ರಾಜಣ್ಣ ಸೂಚಿಸಿದರು. ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಉಪಾಧ್ಯಕ್ಷ ಅಬ್ಟಾಸ್‌ ಅಲಿ, ಸ್ಥಾಯೀ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ, ತಾ.ಪಂ. ಕಾರ್ಯನಿರ್ವಣಾಧಿಕಾರಿ ರಾಜಣ್ಣ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಬಂಟ್ವಾಳ ತಾ| ಪ್ರಥಮ
ವರ್ಷದಿಂದ ವರ್ಷಕ್ಕೆ ಶಾಲಾ ಮಕ್ಕಳ ದಾಖಲಾತಿ ಸಂಖ್ಯೆ ಕುಸಿಯುತ್ತಿದ್ದರೂ ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ದಾಖಲಾತಿಯಾಗಿದೆ. ಮಕ್ಕಳ ಕೊರತೆಯಿಂದ ಜಕ್ರಿಬೆಟ್ಟು ಮತ್ತು  ತೋರಣಕಟ್ಟೆ ಎರಡು ಶಾಲೆಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಅಲ್ಲದೆ, ಸ್ಯಾಟ್ಸ್‌ ನ ಆನ್‌ ಲೈನ್‌ ದಾಖಲಾತಿಯಲ್ಲಿ  ಬಂಟ್ವಾಳ ತಾಲೂಕು ಪ್ರಥಮ ಸ್ಥಾನದಲ್ಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್‌ ಅವರು ಸಭೆಯ ಗಮನಕ್ಕೆ ತಂದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Puttur: ಅಪರಿಚಿತರಿಂದ ಬಾಲಕನಿಗೆ ಹಲ್ಲೆ

16

Belthangady: ಸಾರಿಗೆ ಬಸ್‌ ಢಿಕ್ಕಿ: ಪಾದಚಾರಿ ಗಂಭೀರ

17

Belthangady: ಕಾಶಿಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

5

Maninalkur: ಶಿಥಿಲಾವಸ್ಥೆಯಲ್ಲಿ ಹಳೆ ಶಾಲಾ ಕಟ್ಟಡ; ಕ್ರಮಕ್ಕೆ ಆಗ್ರಹ

4

Puttur: ಬೀದಿ ಬದಿ ವ್ಯಾಪಾರಿಗಳಿಗೆ ನೆರವಾದ ಪಿಎಂ ಸ್ವನಿಧಿ ಯೋಜನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.