ಅನುಷ್ಠಾನವಾಗಲಿ ಬಹುಗ್ರಾಮ ಕುಡಿಯುವ ನೀರು ಯೋಜನೆ: 8ಗ್ರಾಮಗಳಿಗೆಅನುಕೂಲ


Team Udayavani, Jul 6, 2018, 10:38 AM IST

6-july-3.jpg

ಸವಣೂರು: ಗ್ರಾಮೀಣ ಜನತೆಯ ಆವಶ್ಯಕತೆಗಳಲ್ಲಿ ಒಂದಾದ ಶುದ್ಧ ಕುಡಿಯುವ ನೀರು ಪೂರೈಸಲು ಬೆಳಂದೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಶೀಘ್ರ ಅನುಷ್ಠಾನಕ್ಕೆ ಜನಪ್ರತಿನಿಧಿಗಳು, ಅಧಿಕಾರಿಗಳು ಮುಂದಾ
ಗಬೇಕೆಂದು ಸಾರ್ವಜನಿಕ ವಲಯದಲ್ಲಿ ಕೂಗು ಕೇಳಿ ಬರುತ್ತಿದೆ.

ಬೆಳಂದೂರು, ಸವಣೂರು, ಕಾಣಿಯೂರು ಗ್ರಾ.ಪಂ. ವ್ಯಾಪ್ತಿಯ 8 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆ ಶೀಘ್ರವಾಗಿ ಅನುಷ್ಠಾನವಾಗಬೇಕು. ಈ ಯೋಜನೆಯ ಅನುಷ್ಠಾನದ ಹಿನ್ನೆಲೆಯಲ್ಲಿ 2013 ಫೆಬ್ರವರಿ 26ರಂದು
ಯೋಜನೆಗೆ ಒಳಪಡುವ ಗ್ರಾಮಗಳಲ್ಲಿ ಮತ್ತು ಕುಮಾರದಾರಾ ನದಿತಟದಲ್ಲಿ ಸರ್ವೆ ಕಾರ್ಯ ನಡೆಸಲಾಗಿತ್ತು. ಈಗ ಈ ಯೋಜನೆಗಾಗಿ 16.5 ಕೋಟಿ ರೂ.ಗಳ ಅಂದಾಜು ಪಟ್ಟಿ ತಯಾರಿಸಲಾಗಿದೆ. ಶಾಸಕ ಎಸ್‌. ಅಂಗಾರ ಅವರು ಮಾರ್ಚ್‌ ತಿಂಗಳಲ್ಲಿ ಶಿಲಾನ್ಯಾಸ ಮಾಡುವ ಮೂಲಕ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದ್ದರು.

ಯಾವ ಗ್ರಾಮಗಳಿಗೆ ಪ್ರಯೋಜನ?
ಬೆಳಂದೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಹರಿಯುತ್ತಿರುವ ಜೀವನದಿ ಕುಮಾರಧಾರಾದ ನೀರನ್ನು ಬಳಸಿಕೊಂಡು ಸವಣೂರು, ಪಾಲ್ತಾಡಿ, ಪುಣcಪ್ಪಾಡಿ, ಬೆಳಂದೂರು, ಕುದ್ಮಾರು, ಕಾಯಿಮಣ, ಚಾರ್ವಾಕ, ಕಾಣಿಯೂರು ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಪೂರೈಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ರೂಪಿಸಲಾಗಿದೆ.

ಹೀಗಿದೆ ರೂಪು-ರೇಷೆ
ಸವಣೂರು-ಕುದ್ಮಾರು ಗ್ರಾಮಗಳಲ್ಲಿ ಹರಿಯುತ್ತಿರುವ ಕುಮಾರಧಾರಾ ನದಿಯಲ್ಲಿ ಕಿಂಡಿ ಅಣೆಕಟ್ಟು ಅಥವಾ ಜಾಕ್‌ವೆಲ್‌ ನಿರ್ಮಿಸಿ ಪಕ್ಕದಲ್ಲೇ ಪಂಪ್‌ ಹೌಸ್‌ ನಿರ್ಮಾಣ ಮಾಡಿ, ಕಬ್ಬಿಣದ ಕೊಳವೆಯ ಮೂಲಕ ಬೃಹತ್‌ ಟ್ಯಾಂಕ್‌ಗೆ ಹಾಯಿಸಿ ಅದನ್ನು ಈ ಗ್ರಾಮಗಳಿಗೆ ಪೂರೈಸುವ ಉದ್ದೇಶ ಈ ಯೋಜನೆಯಲ್ಲಿತ್ತು. ಅಲ್ಲದೆ ಈ ಯೋಜನೆಯ ಶೀಘ್ರ ಅನುಷ್ಠಾನ ಕುರಿತಂತೆ ಸವಣೂರು, ಬೆಳಂದೂರು, ಕಾಣಿಯೂರು ಗ್ರಾ.ಪಂ.ಗಳಲ್ಲಿ ನಿರ್ಣಯ ಕೈಗೊಂಡು ಜಿ.ಪಂ., ಸರಕಾರಕ್ಕೆ ಸಲ್ಲಿಸಲಾಗಿತ್ತು. ಈಗ ಅನುಷ್ಠಾನಕ್ಕೆ ಸಿದ್ಧವಾಗಿದೆ.

ತಾಂತ್ರಿಕ ಮಂಜೂರಾತಿ ಬಾಕಿ
ಯೋಜನೆಯ ಕಡತಗಳು ತಾಂತ್ರಿಕ ಮಂಜೂರಾತಿಗಾಗಿ ಮೈಸೂರಿನ ಅಧೀಕ್ಷಕ ಎಂಜಿನಿಯರ್‌ ಕಚೇರಿಯಿಂದ ಮಂಜೂರುಗೊಂಡು ಬೆಂಗಳೂರಿನ ಮುಖ್ಯ ಎಂಜಿನಿಯರ್‌ ಕಚೇರಿಗೆ ಕಡತ ವರ್ಗಾವಣೆಯಾಗಬೇಕಿದೆ. ಬಳಿಕ ಟೆಂಡರ್‌ ಪ್ರಕ್ರಿಯೆ ನಡೆಯಲಿದೆ. 
– ರೋಹಿದಾಸ್‌,
ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌, 
ಪುತ್ತೂರು ವಿಭಾಗ

ಶೀಘ್ರ ಆಗಲಿ
ಬೆಳಂದೂರು ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯು ಶೀಘ್ರ ಅನುಷ್ಠಾನವಾಗಬೇಕೆಂಬ ಎಲ್ಲ ಪ್ರಯತ್ನಗಳನ್ನು ಮಾಡಲಾಗಿದೆ. ಕ್ಷೇತ್ರದ ಶಾಸಕ ಎಸ್‌. ಅಂಗಾರ ಅವರ ಪ್ರಯತ್ನದಿಂದ ಈ ಯೋಜನೆ ಮಂಜೂರಾಗಿದೆ. ತಾಂತ್ರಿಕ ಮಂಜೂರಾತಿಯ ಬಳಿಕ ಕಾಮಗಾರಿ ಆರಂಭವಾಗಲಿದೆ. ಈ ಯೋಜನೆಯು ಶೀಘ್ರ ಅನುಷ್ಠಾನವಾಗಲಿ ಎಂಬ ಆಶಯ ನಮ್ಮದು.
– ಪ್ರಮೀಳಾ ಜನಾರ್ದನ,
ಜಿ.ಪಂ. ಸದಸ್ಯರು.

ಪ್ರವೀಣ್‌ ಚೆನ್ನಾವರ 

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.