ಕಾಮಗಾರಿ ಸ್ಥಳದಲ್ಲಿ ವಾಹನ ನಿಲ್ಲಿಸದಂತೆ ಸಂಸದರಿಂದ ಸೂಚನೆ
Team Udayavani, Jul 6, 2018, 11:16 AM IST
ಮಹಾನಗರ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಂಪ್ ವೆಲ್ ಬಳಿ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದ್ದು, ಇದಕ್ಕೆ ಹೊಂದಿಕೊಂಡಂತೆ ತೊಕ್ಕೊಟ್ಟು ಮಾರ್ಗದ ಕಾಮಗಾರಿ ನಡೆಯಬೇಕಾದ ಜಾಗದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ ಸುಗಮ ಸಂಚಾರಕ್ಕೆ ಅಡ್ಡಿ ಮಾಡಲಾಗುತ್ತಿದೆ. ಈ ರೀತಿ ಅನಧಿಕೃತವಾಗಿ ವಾಹನ ನಿಲ್ಲಿಸುವುದಕ್ಕೆ ಅನುಮತಿ ನೀಡಬಾರದು ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ಟ್ರಾಫಿಕ್ ಪೊಲೀಸರಿಗೆ ಸೂಚಿಸಿದ್ದಾರೆ.
ಎನ್ಎಚ್ಎಐ ಮತ್ತು ನವಯುಗ ಗುತ್ತಿಗೆದಾರ ಸಂಸ್ಥೆಯ ಅಧಿಕಾರಿಗಳೊಂದಿಗೆ ಗುರುವಾರ ತೊಕ್ಕೊಟ್ಟು, ತಲಪಾಡಿ, ಪಂಪ್ವೆಲ್, ನಂತೂರು, ಕೊಟ್ಟಾರ ಹಾಗೂ ಸುರತ್ಕಲ್ಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ವೀಕ್ಷಣೆ ಮಾಡಿದ ಸಂದರ್ಭ ಅವರು ಅಧಿಕಾರಿಗಳಿಗೆ ಈ ಸೂಚನೆ ಕೊಟ್ಟಿದ್ದಾರೆ.
ಫ್ಲೈಓವರ್ ನಿರ್ಮಾಣದ ಸಂಪರ್ಕ ರಸ್ತೆಯ ಮಧ್ಯ ಭಾಗದ ಖಾಲಿ ವಾಹನಗಳನ್ನು ನಿಲ್ಲಿಸುವುದರಿಂದ ಸರ್ವಿಸ್ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಅಡ್ಡಿಯಾಗಿ ನಿತ್ಯ ಟ್ರಾಫಿಕ್ ಸಮಸ್ಯೆ ಎದುರಾಗುತ್ತಿದೆ. ಈ ಸಮಸ್ಯೆ ಪರಿಹಾರಕ್ಕಾಗಿ ಇಲ್ಲಿ ಇನ್ನುಮುಂದೆ ವಾಹನಗಳ ನಿಲುಗಡೆ ಮಾಡಲು ಅವಕಾಶ ನೀಡಬಾರದು ಎಂದು ಹೇಳಿದರು.
ಪಂಪ್ವೆಲ್ನಲ್ಲಿ ಮೇಲ್ಸೇತುವೆ ಪೂರ್ತಿಗೊಳಿಸುವ ಮೊದಲು ಸರ್ವೀಸ್ ರಸ್ತೆಯ ನಿರ್ಮಾಣ ಆಗಬೇಕು ಎಂದವರು ಸೂಚನೆ ನೀಡಿದರು. ಎನ್ಎಚ್ಎಐ ಅಧಿಕಾರಿ ಅಜಿತ್, ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ರೈ ಬೋಳಿಯಾರ್, ಸತೀಶ್ ಕುಂಪಲ, ಲಲಿತಾ ಸುಂದರ್ ತೊಕ್ಕೊಟ್ಟು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.