ಉದ್ಘಾಟನೆಗೊಂಡ ಏಳು ತಿಂಗಳ ಬಳಿಕ ಕಾಪು ಪುರಸೌಧ ಕಾರ್ಯಾರಂಭಕ್ಕೆ ಸಿದ್ಧ


Team Udayavani, Jul 7, 2018, 6:00 AM IST

0607kpe9.jpg

ಕಾಪು: ರಾಜ್ಯದ ಮುಖ್ಯಮಂತ್ರಿಗಳಿಂದ ಉದ್ಘಾಟನೆಗೊಂಡರೂ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಕಾರ್ಯಾರಂಭ ವ್ಯವಸ್ಥೆಯಿಂದ ದೂರವುಳಿದಿದ್ದ ಕಾಪು ಪುರಸಭೆಯ ಆಡಳಿತ ಕಚೇರಿ ಪುರಸೌಧ ಕಟ್ಟಡಕ್ಕೆ ಏಳು ತಿಂಗಳ ಬಳಿಕ ಆಡಳಿತಾತ್ಮಕವಾದ ಕಾರ್ಯಾರಂಭ ಭಾಗ್ಯ ಲಭಿಸಿದೆ.

ಸುಮಾರು 5.78 ಕೋ. ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದ್ದ ಕಾಪು ಪುರಸಭೆಯ ನೂತನ ಪುರಸೌಧ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಳೆದ ಜನವರಿ 8ರಂದು ಉದ್ಘಾಟಿಸಿದ್ದರು. ಅಂದು ತರಾತುರಿ ಯಲ್ಲಿ ನೂತನ ಪುರಸೌಧ ಕಟ್ಟಡ ಉದ್ಘಾಟನೆಗೊಂಡಿದ್ದರೂ ವಿವಿಧ ಕೆಲಸಗಳು ಬಾಕಿಯುಳಿದಿದ್ದ ಹಿನ್ನೆಲೆಯಲ್ಲಿ ಪುರಸಭೆ ಆಡಳಿತ ವ್ಯವಸ್ಥೆಯ ಸ್ಥಳಾಂತರ ಸಹಿತ ಕಾರ್ಯಾರಂಭ ಪ್ರಕ್ರಿಯೆಯು ವಿಳಂಬವಾಗಿತ್ತು.

ವಿಳಂಬಕ್ಕೆ ಹಲವು ಕಾರಣಗಳು
ಸ್ವಚ್ಛ ಕಾಪು – ಸುಂದರ ಕಾಪು ಎಂಬ ಕಲ್ಪನೆಯೊಂದಿಗೆ 2015ರ ಮೇ 22ರಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದ್ದ ಕಾಪು ಪುರಸಭೆ ಅಲ್ಪ ಅವಧಿಯಲ್ಲೇ ಬಹಳಷ್ಟು ಪ್ರಸಿದ್ಧಿಗೆ ಬಂದಿತ್ತು. ನೂತನ‌ ಪುರಸಭೆಗಳ ಪೈಕಿ ನಂ.1 ಪುರಸಭೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದ್ದು, ಕಡಿಮೆ ಅವಧಿಯಲ್ಲೇ ದೊಡ್ಡ ಮೊತ್ತದ ಅನುದಾನ ಸಹಿತವಾಗಿ ನೂತನ ಕಟ್ಟಡ ಮಂಜೂರಾಗಿತ್ತು. ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಮುಖ್ಯಮಂತ್ರಿಗಳಿಂದ ಉದ್ಘಾಟನೆಗೊಂಡರೂ, ಆ ಬಳಿಕ ಎದುರಾದ ಚುನಾವಣಾ ಪ್ರಕ್ರಿಯೆಗಳು, ಮುಖ್ಯಾಧಿಕಾರಿಯ ವರ್ಗಾವಣೆ ಇತ್ಯಾದಿ ಕಾರಣಗಳಿಂದಾಗಿ ಕಾಮಗಾರಿ ಮುಂದುವರಿಸಲು ಮತ್ತು ಆಡಳಿತಾತ್ಮಕವಾದ ಸ್ಥಳಾಂತರ ಪ್ರಕ್ರಿಯೆಗೆ ತಾಂತ್ರಿಕ ಅಡಚಣೆ ಎದುರಾಗಿತ್ತು.

ಇದೀಗ ಪುರಸಭೆಯ ಆಡಳಿತ ಮತ್ತು ವಿಪಕ್ಷದ ಸತತ  ಆಗ್ರಹ, ಮುಖ್ಯಾಧಿಕಾರಿ ರಾಯಪ್ಪ ನೇತೃತ್ವದಲ್ಲಿ ಎಂಜಿನಿಯರ್‌ಗಳು ನಡೆಸಿರುವ ಸತತ ಪ್ರಯತ್ನ ಹಾಗೂ ಗುತ್ತಿಗೆದಾರ ಕೆ. ವಾಸುದೇವ ಶೆಟ್ಟಿ ಅವರ ನಿರಂತರ ಶ್ರಮದ ಫಲವಾಗಿ ಪುರಸೌಧ ಕಟ್ಟಡವು ಪೂರ್ಣ ಸ್ಥಿತಿಯಲ್ಲಿ ಜೋಡಣೆಯಾಗಿದ್ದು ಅಧಿಕೃತವಾಗಿ ಕಾರ್ಯಾರಂಭಕ್ಕೆ ಸನ್ನದ್ಧವಾಗಿದೆ.

ಇಲ್ಲೂ ಇದೆ ಸಿಬಂದಿಗಳ ಕೊರತೆ
2015ರಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಾಪು ಪುರಸಭೆಗೆ ಒಟ್ಟು 92 ಹುದ್ದೆಗಳು ಮಂಜೂರಾಗಿದ್ದು, ಇದರಲ್ಲಿ ಪೌರ ಕಾರ್ಮಿಕರು ಮತ್ತು ಹೊರ ಗುತ್ತಿಗೆ ಆಧಾರದ ಸಿಬಂದಿಗಳೂ ಸೇರಿದಂತೆ 60 ಮಂದಿ ಕಾರ್ಯನಿರ್ವಹಣೆಯಲ್ಲಿ ತೊಡಗಿದ್ದಾರೆ. ಉಳಿದಂತೆ 30ಕ್ಕೂ ಅಧಿಕ ಹುದ್ದೆಗಳು ಇನ್ನೂ ಖಾಲಿಯಾಗಿಯೇ ಉಳಿದಿವೆೆ. ಪರಿಸರ ಅಭ್ಯಂತರರು – 1, ಹಿರಿಯ ಆರೋಗ್ಯ ನಿರೀಕ್ಷಕ – 2, ಕಂದಾಯ ನಿರೀಕ್ಷಕ-1, ಪ್ರಥಮ ದರ್ಜೆ ಸಹಾಯಕ – 1, ಪೌರ ಕಾರ್ಮಿಕರು – 7 ಹುದ್ದೆಗಳು ಖಾಲಿಯಿದ್ದು, ಈ ಹುದ್ದೆಗಳ ಭರ್ತಿಗೆ ಸರಕಾರ ವಿಶೇಷ ಕ್ರಮ ತೆಗೆದುಕೊಳ್ಳಬೇಕಿದೆ.

ಜು. 9ರಿಂದ ನೂತನ ಪುರಸೌಧದಲ್ಲಿ ಆಡಳಿತ ನಿರ್ವಹಣೆ 
ಜು. 7ರಂದು ನೂತನ ಪುರಸೌಧ ಕಟ್ಟಡದಲ್ಲಿ ಧಾರ್ಮಿಕ ಪೂಜೆ ನಡೆಯಲಿದೆ. ಪೂಜೆಯ ಬಳಿಕ ದಾಖಲಾತಿ, ಕಚೇರಿಗಳ ಸ್ಥಳಾಂತರ ಪ್ರಕ್ರಿಯೆಗಳು ನಡೆದು ಜು. 9ರಿಂದ ಅಧಿಕೃತವಾಗಿ ಪುರಸಭೆಯ ಕಾರ್ಯ ಚಟುವಟಿಕೆಗಳು ಪುರಸೌಧ ಕಟ್ಟಡದಲ್ಲಿ ಪ್ರಾರಂಭಗೊಳ್ಳಲಿವೆ. ಸಂಪೂರ್ಣ ಇ ಆಡಳಿತ ವ್ಯವಸ್ಥೆಯೊಂದಿಗೆ ನೂತನ ಪುರಸೌಧದಲ್ಲಿ ಆಡಳಿತ ನಿರ್ವಹಣೆ ನಡೆಯಲಿದ್ದು, ಸಾರ್ವಜನಿಕರು ಪುರಸಭೆಯ ಎಲ್ಲಾ ಕಚೇರಿ ಕೆಲಸ ಕಾರ್ಯಗಳಿಗೆ ನೂತನ ಕಟ್ಟಡಕ್ಕೆ ಆಗಮಿಸಬೇಕು.
 – ರಾಯಪ್ಪ , ಮುಖ್ಯಾಧಿಕಾರಿ, ಪುರಸಭೆ

ಪುರಸಭೆ ರಚನೆಯಲ್ಲಿ ಸೊರಕೆ ಪಾತ್ರ ಮಹತ್ವದ್ದು 
ಕಾಪು ಸರ್ವಾಂಗೀಣ ಅಭಿವೃದ್ಧಿ ಹೊಂದಿದ ಕ್ಷೇತ್ರವಾಗಬೇಕೆಂಬ ಸಂಕಲ್ಪದೊಂದಿಗೆ ಅಂದಿನ ನಗರಾಭಿವೃದ್ಧಿ ಸಚಿವರೂ ಮತ್ತು ಕಾಪು ಕ್ಷೇತ್ರದ ಶಾಸಕರೂ ಆಗಿದ್ದ ವಿನಯಕುಮಾರ್‌ ಸೊರಕೆ ಅವರು ವಿಶೇಷ ಮುತುವರ್ಜಿ ವಹಿಸಿ ಕಾಪುವನ್ನು ಪುರಸಭೆಯನ್ನಾಗಿ ರಚಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಅತೀ ಕಡಿಮೆ ಅವಧಿಯಲ್ಲಿ ಕರ್ನಾಟಕ ಸರಕಾರದಿಂದ ಅನುಮೋದನೆ ಪಡೆದು ಸುಂದರ ಪುರಸೌಧ ಕಟ್ಟಡ ನಿರ್ಮಾಣಕ್ಕೆ ಅನುದಾನ ಜೋಡಿಸಿದ್ದು, ಇದ‌ಕ್ಕೆ ಕಾರಣರಾದ ಮಾಜಿ ನಗರಾಭಿವೃದ್ಧಿ ಸಚಿವ ವಿನಯಕುಮಾರ್‌ ಸೊರಕೆ ಅವರಿಗೆ ನಾವು ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ.
– ಮಾಲಿನಿ ಅಧ್ಯಕ್ಷರು, ಕಾಪು ಪುರಸಭೆ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.