ಕೈಗೆ ಬಿಸಿ ತಟ್ಟಿತು, ಬಿಜೆಪಿ ತೊಡೆ ತಟ್ಟಿತು


Team Udayavani, Jul 7, 2018, 6:00 AM IST

hk-page-1.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಬಜೆಟ್‌ ಮಂಡನೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಬಜೆಟ್‌ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿರುವ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದ ಹಿರಿಯ ನಾಯಕ ಎಚ್‌.ಕೆ.ಪಾಟೀಲ್‌ ಪತ್ರ ಸಮರ ಸಾರಿದ್ದಾರೆ. 

ಇನ್ನೊಂದೆಡೆ, ಪೆಟ್ರೋಲ್‌-ಡೀಸೆಲ್‌ ಬೆಲೆ ಹೆಚ್ಚಳ ಖಂಡಿಸಿ ಕೇಂದ್ರದ ವಿರುದ್ಧ ಹೋರಾಟ ಮಾಡುತ್ತಿರುವ ನಾವು ಇದೀಗ ನಮ್ಮದೇ ಪಾಲುದಾರಿಕೆ ಇರುವ ಸರ್ಕಾರ ಬೆಲೆ ಹೆಚ್ಚಳ ಮಾಡಿರುವುದನ್ನು ಸಮರ್ಥಿಸಿಕೊಳ್ಳುವುದು ಹೇಗೆ ಎಂದು ಕಾಂಗ್ರೆ ಸ್‌ ಶಾಸ ಕರು ಸಮ ನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಬಳಿ ಅವಲತ್ತು ಕೊಂಡಿದ್ದಾರೆ.
 
ಮತ್ತೂಂದೆಡೆ ಅಲ್ಪಸಂಖ್ಯಾತರಿಗೆ ಬಜೆಟ್‌ನಲ್ಲಿ ಯಾವುದೇ ಹೊಸ ಕಾರ್ಯಕ್ರಮ ನೀಡದ ಬಗ್ಗೆ ಮತ್ತೂಬ್ಬ ಹಿರಿಯ ನಾಯಕ ರೋಷನ್‌ಬೇಗ್‌ ಸಹ ಅಸಮಾಧಾನಗೊಂಡಿದ್ದು ಹೈಕಮಾಂಡ್‌ಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ. 

ಪರಮೇಶ್ವರ್‌ ಹೋಗಿದ್ದು ಒಂದೇ ಸಭೆಗೆ: 
ಕಾಂಗ್ರೆಸ್‌ ನಾಯಕರನ್ನು ತೀರಾ ಕಂಗೆಡಿಸಿರುವುದು, ಬಜೆಟ್‌ನಲ್ಲಿ ಪೆಟ್ರೋಲ್‌-ಡೀಸೆಲ್‌, ವಿದ್ಯುತ್‌ ಮೇಲಿನ ತೆರಿಗೆ ಹೆಚ್ಚಳದ ವಿಚಾರ. ಹಿರಿಯ ನಾಯಕರ ಸಹಿತ ಕಾಂಗ್ರೆಸ್‌ ಶಾಸಕರು ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು ಇದರಿಂದ ಜನಸಾಮಾನ್ಯರ ಆಕ್ರೋಶ ಎದುರಿಸುವಂತಾಗಿದೆ. ಬಜೆಟ್‌ ಸಿದ್ಧತೆ ಕುರಿತು ಪೂರ್ವಭಾವಿ ಸಭೆಗೆ ಕಾಂಗ್ರೆಸ್‌ ನಾಯಕರಿಗೆ ಆಹ್ವಾನ ನೀಡಿರಲಿಲ್ಲ. ಡಾ.ಜಿ.ಪರಮೇಶ್ವರ್‌ ಅವರು ಒಂದೇ ಒಂದು ಸಭೆಗೆ ಹೋಗಿದ್ದರು. ತೆರಿಗೆ ಹೆಚ್ಚಳ ಕುರಿತು ಸಮನ್ವಯ ಸಮಿತಿಯಲ್ಲೂ ಚರ್ಚಿಸದೆ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ ಎಂದು ಶಾಸ ಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅವಳಿ ಪತ್ರದ ಮೂಲಕ ಅಸಮಾಧಾನ ಪ್ರಕಟ
ಕಾಂಗ್ರೆಸ್‌ನ ಹಿರಿಯ ನಾಯಕ ಎಚ್‌.ಕೆ.ಪಾಟೀಲ್‌ ಅವರು, ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಬಜೆಟ್‌ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿರುವ ಬಗ್ಗೆ ವಿವರಿಸಿ ತಕ್ಷಣ ಸರಿಪಡಿಸುವಂತೆ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರಿಗೂ  ಈ ಕುರಿತು ಪ್ರತ್ಯೇಕ ಪತ್ರ ಬರೆದಿದ್ದಾರೆ.

ರೈತರ ಸಾಲ ಮನ್ನಾ ಘೋಷಣೆ ಸ್ವಾಗತಿಸುತ್ತಲೇ ಅಲ್ಪಸಂಖ್ಯಾತ ಸಮುದಾಯ ಹಾಗೂ ಉತ್ತರ ಕರ್ನಾಟಕ ಭಾಗದ ಜನತೆಗೆ ನಿರಾಸೆಯುಂಟು ಮಾಡಿರುವ ಬಗ್ಗೆ ಪಾಟೀಲರು ಪತ್ರದಲ್ಲಿ ಬೇಸರ ಹೊರ ಹಾಕಿದ್ದಾರೆ.

ಸಿದ್ದುಗೆ ಬರೆದ ಪತ್ರದಲ್ಲಿ ಏನಿದೆ? 
ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ, ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಬಹುದೊಡ್ಡ ಶಕ್ತಿ ನೀಡಿದ ಅಲ್ಪಸಂಖ್ಯಾತ ಸಮುದಾಯಕ್ಕೆ ಯಾವುದೇ ಹೊಸ ಯೋಜನೆಗಳಾಗಲಿ, ಕಾರ್ಯಕ್ರಮಗಳಾಗಲಿ ವಿಶೇಷ ಹಣಕಾಸಿನ ಹಂಚಿಕೆಯಾಗಲಿ ಮಾಡಿಲ್ಲ. ನಮ್ಮ ಪಕ್ಷಕ್ಕೆ ಶಕ್ತಿ ನೀಡಿದ ಸಮುದಾಯವನ್ನು ಮೊದಲ ಬಜೆಟ್‌ನಲ್ಲೇ ನಿರ್ಲಕ್ಷಿಸಲಾಗದು. ವಿಶೇಷ ಹಂಚಿಕೆ, ಘೋಷಣೆ ಮಾಡಬೇಕಾದದ್ದು ಅತ್ಯಂತ ಅಗತ್ಯ. ಬಹಳಷಟು ಕಾರ್ಯಕ್ರಮಗಳು ಹಂಚಿಕೆ ಮುಖಾಂತರ ಪ್ರಕಟಿಸಲಾಗಿದೆ. ಸಹಜವಾಗಿ ಅಲ್ಪಸಂಖ್ಯಾತ ಸಮುದಾಯದ ಅಂಥದೇ ನಿಲುವುಗಳನ್ನು ಅಪೇಕ್ಷಿಸುವುದು ಸಹಜ.

ಉತ್ತರ ಕರ್ನಾಟದ ವಿಷಯವಾಗಿ 1999-2004  ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಮತ್ತು ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದ 2004-2006 ಮತ್ತು 2013-2018 ರ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಹಲವಾರು ಕಾರ್ಯಕ್ರಮ ರೂಪಿಸಿ ಪ್ರಾದೇಶಿಕ ಅಸಮತೋಲನ ಸಮತೋಲನಗೊಳಿಸಲು ಪ್ರಯತ್ನ ಮಾಡಲಾಗಿದೆ. ಸಮ್ಮಿಶ್ರ ಸರ್ಕಾರದ  ಇ ಸಂದರ್ಭದಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆ ಮಾಡಲು ಕೆಲವು ಕಾರ್ಯಕ್ರಮ ಘೋಷಣೆ ಮಾಡುವುದು ಸೂಕ್ತ.

ದಯವಿಟ್ಟು  ಈ ವಿಷಯವನ್ನು ಸಮನ್ವಯ ಸಮಿತಿಯ ತುರ್ತು ಸಭೆ ಕರೆದು  ಈ ಎರಡೂ ಗಂಭೀರ ವಿಷಯಗಳ ಬಗ್ಗೆ ಪರಿಹಾರ ದೊರಕಿಸಿಕೊಡಲು ಕೋರುವೆ..

ಸಿಎಂಗೆ ಬರೆದಿದ್ದೇನು?
ಚುನಾವಣೆಯಲ್ಲಿ ಜಾತ್ಯತೀತ ಪಕ್ಷಗಳ ಗೆಲುವಿಗೆ ಕಾರಣೀಕರ್ತರಾಗಿರುವ ಅಲ್ಪಸಂಖ್ಯಾ ತರ ಕಲ್ಯಾಣಕ್ಕಾಗಿ ಕೆಲವಾದರೂ ಹೊಸ ಕಾರ್ಯಕ್ರಮಗಳು ಬಜೆಟ್‌ನಲ್ಲಿ ಪ್ರಕಟಗೊಳ್ಳಬೇಕಿತ್ತು. ಅಲ್ಪಸಂಖ್ಯಾತರ ಮತ್ತು
ಅಲ್ಪಸಂಖ್ಯಾತ ಬಡವರ ಪರವಾಗಿ ಹಣಕಾಸಿನ ವಿಶೇಷ ಹಂಚಿಕೆ ಮುಂಗಡ ಪತ್ರದಲ್ಲಿ ಕಾಣಬೇಕಿತ್ತು. ಉತ್ತರ ಕರ್ನಾಟಕದ ಜನತೆ ಸಾಕಷ್ಟು ಅಪೇಕ್ಷೆ ಮತ್ತು ನಿರೀಕ್ಷೆ ಇಟ್ಟುಕೊಂಡಿದ್ದರು.ಉತ್ತರ ಕರ್ನಾಟಕದವರಿಗೆ ನಿರಾಸೆಯಾಗಿದೆ. ಅಲ್ಲಿನ ಜನರ ಭಾವನೆಗಳಿಗೆ ಘಾಸಿಯಾಗಿದೆ.ಜನರ ಭಾವನೆಗಳನ್ನು ಗೌರವಿಸುವುದು ಪ್ರಸ್ತುತ ಸಮ್ಮಿಶ್ರ ಸರ್ಕಾರದ ಆದ್ಯ ಕರ್ತವ್ಯಗಳಲ್ಲಿ ಒಂದು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.