ಗ್ರಾಮ ಸ್ವರಾಜ್‌ ವರದಿ ನೀಡಲು ಸೂಚನೆ


Team Udayavani, Jul 7, 2018, 10:42 AM IST

gul-2.jpg

ಕಲಬುರಗಿ: ಜಿಲ್ಲೆಯ 67 ಗ್ರಾಮಗಳಲ್ಲಿ ಕೇಂದ್ರ ಸರ್ಕಾರವು ಮುಂದುವರಿದ ಗ್ರಾಮ ಸ್ವರಾಜ್‌ ಯೋಜನೆ ಜಾರಿಗೊಳಿಸಿದೆ. ತಾಪಂ ಕಾರ್ಯನಿರ್ವಾಹಕ ಅ ಧಿಕಾರಿಗಳು ಈ ಗ್ರಾಮಗಳಲ್ಲಿ ಸಮೀಕ್ಷೆ ಕೈಗೊಂಡು ಎರಡು ದಿನಗಳಲ್ಲಿ ವಿಸ್ತೃತ ವರದಿ ನಿಡಬೇಕೆಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಂದುವರಿದ ಗ್ರಾಮ ಸ್ವರಾಜ ಯೋಜನೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಯೋಜನೆಗಳಿಂದ ವಂಚಿತರಾದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳನ್ನು ತಲುಪಿಸಲು ಜಿಲ್ಲೆಯಲ್ಲಿ ಮುಂದುವರಿದ ಗ್ರಾಮ ಸ್ವರಾಜ್‌ ಯೋಜನೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು. ಈ ಗ್ರಾಮಗಳಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ, ಸೌಭಾಗ್ಯ (ಬಿಜಲಿ ಹರ ಘರ ಯೋಜನಾ), ಉಜಾಲಾ ಯೋಜನಾ, ಪ್ರಧಾನಮಂತ್ರಿ ಜನಧನ ಯೋಜನಾ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನಾ, ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನಾ ಹಾಗೂ ಇಂದ್ರಧನುಷ್‌ ಯೋಜನೆಯಿಂದ ವಂಚಿತ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆ ಲಾಭ ದೊರಕಿಸಬೇಕೆಂದು ಸೂಚಿಸಿದರು.

ಪ್ರಧಾನಮಂತ್ರಿ ಉಜ್ವಲ ಯೋಜನೆ: 67 ಗ್ರಾಮಗಳಲ್ಲಿ 25,105 ಕುಟುಂಬಗಳಿದ್ದು, ಈಗಾಗಲೇ 9233  ಟುಂಬಗಳಿಗೆ ಎಲ್‌.ಪಿ.ಜಿ. ಸಂಪರ್ಕ ಇದೆ. 6695 ಕುಟುಂಬಗಳು ಉಜ್ವಲ ಯೋಜನೆಗೆ ಅನರ್ಹವಾಗಿದ್ದು, ಈಗಾಗಲೇ 5215 ಕುಟುಂಬಗಳಿಗೆ ಎಲ್‌.ಪಿ.ಜಿ. ಸಂಪರ್ಕ ನೀಡಲು ಕ್ರಮ ಕೈಗೊಳ್ಳಲಾಗಿದೆ. ಇನ್ನುಳಿದ ಸುಮಾರು 4000 ಮನೆಗಳಿಗೆ ಭೇಟಿ ನೀಡಿ ಅವರಿಗೆ ಎಲ್‌.ಪಿ.ಜಿ. ಸಂಪರ್ಕ ಕಲ್ಪಿಸಬೇಕು. ಎರಡು ದಿನದಲ್ಲಿ ಎಲ್‌.ಪಿ.ಜಿ. ಸಂಪರ್ಕ ಕಲ್ಪಿಸಿದ ವಿವರ ವೆಬ್‌ಸೈಟ್‌ನಲ್ಲಿ ಭರ್ತಿಮಾಡಬೇಕು. ಫಲಾನುಭವಿಗಳು ಬ್ಯಾಂಕ್‌ ಪಾಸ್‌ ಪುಸ್ತಕ ಹಾಗೂ ಜಾತಿ ಪ್ರಮಾಣ ಪತ್ರ ನೀಡಿ ಉಜ್ವಲ ಯೋಜನೆಯಡಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದರು.

ಪ್ರಧಾನಮಂತ್ರಿ ಜನಧನ, ಜೀವನ ಜ್ಯೋತಿ ಬಿಮಾ ಹಾಗೂ ಸುರಕ್ಷಾ ಬಿಮಾ ಯೋಜನೆ: ಈಗಾಗಲೇ ಜನಧನ ಯೋಜನೆ ಬ್ಯಾಂಕ್‌ ಖಾತೆಗಳನ್ನು ತೆರೆಯಲಾಗಿದೆ. ಅವುಗಳ ವಿವರ ನೀಡಬೇಕು. ಜನಧನ ಬ್ಯಾಂಕ್‌ ಖಾತೆಗಳನ್ನು ತೆರೆಯದವರನ್ನು ಗುರುತಿಸಿ ಖಾತೆ ಪ್ರಾರಂಭಿಸಬೇಕು. ಫಲಾನುಭವಿಗಳಿಗೆ ಜೀವನ ಜ್ಯೋತಿ ಹಾಗೂ ಸುರಕ್ಷಾ ಬಿಮಾ ಯೋಜನೆ ಲಾಭಗಳನ್ನು ವಿವರಿಸಿ ಜಾಗೃತಿ ಮೂಡಿಸಿ ಅವರಿಂದ ವಿಮಾ ಕಂತು ಪಡೆಯಬೇಕು.

ಗ್ರಾಮಗಳಲ್ಲಿ ಗ್ರಾಮಸಭೆಗಳನ್ನು ನಡೆಸಿ ಫಲಾನುಭವಿಗಳಿಂದ ಜೀವನ ಜ್ಯೋತಿ ಯೋಜನೆಗಾಗಿ 330 ರೂ. ಹಾಗೂ ಸುರಕ್ಷಾ ಬಿಮಾ ಯೋಜನೆಗಾಗಿ 12 ರೂ.ಗಳ ವಿಮಾ ಕಂತನ್ನು ಪಡೆಯಬೇಕು. ಸರ್ಕಾರಿ ನೌಕರರಿಗೆ ಕಡ್ಡಾಯವಾಗಿ ಈ ಯೋಜನೆಗಳಡಿ ನೋಂದಣಿ ಮಾಡಿಕೊಳ್ಳಬೇಕು ಎಂದರು.

ಇಂದ್ರಧನುಷ: 67 ಗ್ರಾಮಗಳಲ್ಲಿ ಈಗಾಗಲೇ ಇಂದ್ರ ಧನುಷ್‌ ವಿಶೇಷ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶೇ. 91 ರಷ್ಟು ಲಸಿಕೆ ಗುರಿ ತಲುಪಲಾಗಿದೆ. ಉಳಿದ ಗುರಿ ತಲುಪಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಸೌಭಾಗ್ಯ ಯೋಜನೆ: ವಿದ್ಯುತ್‌ ಸಂಪರ್ಕ ಹೊಂದಿರದ ಬಿ.ಪಿ.ಎಲ್‌. ಮತ್ತು ಎ.ಪಿ.ಎಲ್‌. ಕುಟುಂಬಗಳನ್ನು ಗುರುತಿಸಿ
ಅವರಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಬೇಕಾಗಿದೆ. ಈ ಹಿಂದೆ ಕೈಗೊಂಡ ಸಮೀಕ್ಷೆಯಂತೆ 67 ಗ್ರಾಮಗಳಲ್ಲಿ 1928 ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕ ಇರುವುದಿಲ್ಲ. ಆದಷ್ಟು ಬೇಗ ಈ ಕುಟುಂಬಗಳ ಮನೆಗಳಿಗೆ ವಿದ್ಯುತ್‌ ಸಂಪಕ್‌ ಕಲ್ಪಿಸಬೇಕು. ಇನ್ನೊಮ್ಮೆ ಮರು ಸಮೀಕ್ಷೆ ಕೈಗೊಂಡು ವರದಿ ನೀಡಬೇಕು ಎಂದರು.

ಉಜಾಲಾ ಯೋಜನೆ: ಉಜಾಲಾ ಯೋಜನೆಯಡಿ ಜಿಲ್ಲೆಯಲ್ಲಿ ಗುಲ್ಬರ್ಗಾ ಒನ್‌ ಹಾಗೂ ಮುಖ್ಯ ಅಂಚೆ ಕಚೇರಿಯಲ್ಲಿ ಮಾತ್ರ ಸಹಾಯಧನದ ಎಲ್‌.ಇ.ಡಿ. ಬಲ್ಬ್ಗಳನ್ನು ವಿತರಿಸಲಾಗುತ್ತಿದೆ. ಗ್ರಾಮ ಸ್ವರಾಜ್‌ ಯೋಜನೆ ಜಾರಿಗೊಳಿಸಲಾದ ಗ್ರಾಮಗಳಲ್ಲಿ ಫಲಾನುಭವಿಗಳನ್ನು ಗುರುತಿಸಿ ಎಲ್‌.ಇ.ಡಿ. ಬಲ್ಬ್ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಿಪಂ ಮುಖ್ಯ ಯೋಜನಾಧಿಕಾರಿ ಪ್ರವೀಣ ಪ್ರಿಯಾ ಡೇವಿಡ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ರೆಡ್ಡಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಅರುಣಕುಮಾರ ಸಂಗಾವಿ, ಲೀಡ್‌ ಬ್ಯಾಂಕ್‌ ಮ್ಯಾನೇಜರ್‌, ಎಲ್ಲ ತಾಲೂಕುಗಳ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಶಿಶು ಅಭಿವೃದ್ಧಿ ಅಧಿಕಾರಿಗಳು, ಎಲ್‌.ಪಿ.ಜಿ. ಗ್ಯಾಸ್‌ ವಿತರಕರು ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

3-chincholi

Chincholi: ಯುವಕ‌ನ ಕೊಲೆ ‌; ಕಾರಣ ನಿಗೂಢ

8-chittapur

Chittapur: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.