ಕ್ಷೀರ ಭಾಗ್ಯ ಯೋಜನೆ ಜಾರಿಗೆ ಗ್ರಹಣ: ಮಕ್ಕಳಿಗೆ ತಣ್ಣೀರೇ ಗತಿ


Team Udayavani, Jul 7, 2018, 11:13 AM IST

gul-3.jpg

ವಾಡಿ: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿ ತಿಂಗಳುಗಳೇ ಕಳೆದಿದ್ದು, ಸರಕಾರಿ ಶಾಲೆಗಳಲ್ಲಿ ಕ್ಷೀರ ಭಾಗ್ಯ ಯೋಜನೆ ಜಾರಿಗೆ ಗ್ರಹಣ ಬಡೆದಿದೆ. ಬಿಸಿ ಹಾಲು ಕುಡಿದು ಪಾಠ ಕೇಳಲು ಅಣಿಯಾಗುತ್ತಿದ್ದ ಮಕ್ಕಳ ಹೊಟ್ಟೆಗೆ
ತಣ್ಣೀರೇ ಗತಿಯಾಗಿದೆ. ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣ ಸೇರಿದಂತೆ ನಾಲವಾರ ಹೋಬಳಿ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ತಿಂಗಳಿಂದ ತಾಲೂಕಿನಾಧ್ಯಂತ ಮಕ್ಕಳಿಗೆ ಹಾಲು ವಿತರಣೆಯಾಗಿಲ್ಲ ಎನ್ನುವುದು ಬೆಳಕಿಗೆ ಬಂದಿದೆ.

ಈ ಕುರಿತು ತಾಲೂಕು ಅಧಿಕಾರಿಗಳನ್ನು ಸಂಪರ್ಕಿಸಿದಾಗ, ಕೆಎಂಎಫ್‌ ನಿಂದ ಪ್ರಸಕ್ತ ಸಾಲಿನ ಹಾಲಿನ ಪೌಡರ್‌ ಟೆಂಡರ್‌ ಪ್ರಕ್ರಿಯೇ ಆರಂಭವಾಗಿಲ್ಲ. ಆದ್ದರಿಂದ ಕ್ಷೀರ ಭಾಗ್ಯಕ್ಕೆ ಕೊಕ್ಕೆ ಬಿದ್ದಿದೆ ಎನ್ನುವ ಸಂಗತಿ ಬಯಲಾಗಿದೆ. ಶಾಲೆಗೆ ತಳಿರು ತೋರಣ ಕಟ್ಟಿ, ಅಂಗಳದಲ್ಲಿ ರಂಗೋಲಿ ಹಾಕಿಸಿ, ಸಿಹಿ ಹಂಚುವ ಮೂಲಕ ಜೂನ್‌ ತಿಂಗಳ ಮೊದಲ ದಿನ ಮಕ್ಕಳನ್ನು ಶಾಲೆಗೆ ಬರಮಾಡಿಕೊಂಡ ಶಿಕ್ಷಣ ಇಲಾಖೆ ಬಟ್ಟೆ, ಊಟ, ಪುಸ್ತಕಗಳನ್ನು ಕೊಟ್ಟು ಕ್ಷೀರ ಭಾಗ್ಯ ಕಸಿದುಕೊಂಡಿದೆ. 

ರಾಷ್ಟ್ರಗೀತೆ ನಂತರ ಸಾಲು ಸಾಲಾಗಿ ನಿಂತು ಬಿಸಿಯಾದ ಕೆನೆಹಾಲು ಗಂಟಲಿಗಿಳಿಸುತ್ತಿದ್ದ ಮಕ್ಕಳ ಹೊಟ್ಟೆಗೀಗ ತಣ್ಣೀರೇಗತಿ ಎನ್ನುವಂತೆ ಆಗಿದೆ. ಶಿಕ್ಷಕರು ಹಾಗೂ ಅಡುಗೆಯವರು ತಿಂಗಳಿಂದ ಹಾಲು ನೀಡುವ ಮಾತೇ ಆಡದಿರುವ ಕಾರಣಕ್ಕೆ ಚಿಂತಾಕ್ರಾಂತರಾಗಿರುವ ವಿದ್ಯಾರ್ಥಿಗಳು, ಬಿಸಿಯೂಟ ಕೋಣೆಯ ಹಾಲಿನ ಕಡಾಯಿಯತ್ತ ನೋಡುತ್ತಿದ್ದಾರೆ. ಬಡ ಮಕ್ಕಳ ದೇಹಕಂಟಿದ ಅಪೌಷ್ಟಿಕತೆ ನಿವಾರಣೆಗೆ ಮುಂದಾದ ಸರಕಾರ, ಸರಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮಹತ್ವದ ಬಿಸಿಯೂಟ ಹಾಗೂ ಕ್ಷೀರ ಭಾಗ್ಯ ಯೋಜನೆ ಜಾರಿಗೊಳಿಸಿದೆ. ಆದರೆ, ಅದನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ಸಂಬಂಧಿಸಿದ ಅಧಿಕಾರಿಗಳು ವಿಫಲರಾಗಿದ್ದು, ಮಕ್ಕಳ ಹೊಟ್ಟೆಯ ಮೇಲೆ ಸರಕಾರವೇ ಬರೆ ಎಳೆದಂತಾಗಿದೆ. ಒಂದನ್ನು ಕೊಟ್ಟು ಮತ್ತೂಂದನ್ನು ಕಸಿಯುವ ಸರಕಾರದ ನೀತಿಯ ವಿರುದ್ಧ ಪೋಷಕರು ಮತ್ತು ಶಿಕ್ಷಣಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಎಂಎಫ್‌ನಿಂದ ಜಿಲ್ಲಾ ಮಟ್ಟದಲ್ಲಿ ನಡೆಯಬೇಕಿರುವ ಹಾಲಿನ ಪೌಡರ್‌ ಟೆಂಡರ್‌ ಪ್ರಕ್ರಿಯೆ ವಿಳಂಬವಾಗಿದೆ. ಪರಿಣಾಮ ತಾಲೂಕಿನ ಶಾಲೆಗಳಿಗೆ ತಿಂಗಳಿಂದ ಹಾಲಿನ ಪೌಡರ್‌ ವಿತರಣೆ ಮಾಡಲಾಗಿಲ್ಲ. ಪರಿಣಾಮ ಕ್ಷೀರ ಭಾಗ್ಯ ಯೋಜನೆ ಜಾರಿಯಲ್ಲಿ ತೊಡಕಾಗಿದೆ. ಮಕ್ಕಳಿಗೆ ನೀಡಬೇಕಿದ್ದ ಬಿಸಿಯಾದ ಕೆನೆ ಹಾಲು ಸ್ಥಗಿತಗೊಂಡಿದೆ. ಈ ಕುರಿತು ಮೇಲಾಧಿ ಕಾರಿಗಳು ಚರ್ಚೆ ಮಾಡುತ್ತಿದ್ದಾರೆ. ಒಂದೆರೆಡು ವಾರದಲ್ಲಿ ಶಾಲೆಗಳಿಗೆ ಹಾಲಿನ ಪೌಡರ್‌ ಹಂಚಿಕೆಯಾಗುವ ಸಾಧ್ಯತೆಯಿದೆ.
ಶಂಕರ ತೇಲಕರ, ಸಹಾಯಕ ನಿರ್ದೇಶಕರು, ಅಕ್ಷರ ದಾಸೋಹ ಯೋಜನೆ

ತಾಲೂಕಿನ ಪ್ರತಿ ಶಾಲೆಗೆ ಸಮವಸ್ತ್ರ, ಪಠ್ಯಪುಸ್ತಕ ಸಮರ್ಪಕವಾಗಿ ವಿತರಣೆಯಾಗಿದೆ. ಬಿಸಿಯೂಟ ಯೋಜನೆಗೆ ಯಾವುದೇ ತೊಂದರೆಯಿಲ್ಲ. ಜುಲೈ ತಿಂಗಳ ಬಿಸಿಯೂಟ ದಾಸ್ತಾನು ಶೇಖರಣೆಯಾಗಿದೆ. ಕ್ಷೀರ ಭಾಗ್ಯ ಯೋಜನೆ
ವಿಳಂಬ ಸಮಸ್ಯೆ ಜಿಲ್ಲಾ ಮಟ್ಟದ್ದಾಗಿದೆ. ಈ ಕುರಿತು ಚರ್ಚಿಸಲು ಅಧಿಕಾರಿಗಳು ಜಿಲ್ಲಾ ಕೇಂದ್ರದಲ್ಲಿ ಸಭೆ ಕರೆದಿದ್ದಾರೆ. ಸಮಸ್ಯೆ ಆದಷ್ಟು ಬೇಗ ಬಗೆಹರಿಯಲಿದೆ.
ಶಂಕ್ರೆಮ್ಮಾ ಢವಳಗಿ, ಕ್ಷೇತ್ರ ಶಿಕ್ಷಣಾಧಿಕಾರಿ

ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chalavadi Narayanaswamy ಡ್ರಾಮಾ ಬೇಡ: ಪ್ರಿಯಾಂಕ್‌ ಖರ್ಗೆ

Chalavadi Narayanaswamy ಡ್ರಾಮಾ ಬೇಡ: ಪ್ರಿಯಾಂಕ್‌ ಖರ್ಗೆ

ಬಿಜೆಪಿಯದ್ದು ಜಗಳ ಹಚ್ಚುವ ಪಾಲಿಟಿಕ್ಸ್‌: ಡಾ|ಶರಣಪ್ರಕಾಶ

ಬಿಜೆಪಿಯದ್ದು ಜಗಳ ಹಚ್ಚುವ ಪಾಲಿಟಿಕ್ಸ್‌: ಡಾ|ಶರಣಪ್ರಕಾಶ

siddaramaiahಸಿದ್ಧರಾಮಯ್ಯ ಲೂಟಿಕೋರ ಅಲ್ಲ, ಜುಗ್ಗಯ್ಯ…: ಕಾಗಿನೆಲೆ ಶ್ರೀಗಳು

Kalaburagi; ಸಿದ್ಧರಾಮಯ್ಯ ಲೂಟಿಕೋರ ಅಲ್ಲ, ಜುಗ್ಗಯ್ಯ…: ಕಾಗಿನೆಲೆ ಶ್ರೀಗಳು

Siddaramaiah

Kalaburagi: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ-ಕೈಗಾರಿಕಾ ನೀತಿ ಜಾರಿಗೆ ಬದ್ದ: ಸಿಎಂ

ಹಗರಣದಲ್ಲೇ ಮುಳುಗಿದೆ ಕಾಂಗ್ರೆಸ್‌ ಸರ್ಕಾರ: ಪಿ. ರಾಜೀವ್‌

ಹಗರಣದಲ್ಲೇ ಮುಳುಗಿದೆ ಕಾಂಗ್ರೆಸ್‌ ಸರ್ಕಾರ: ಪಿ. ರಾಜೀವ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.