ಗುಹೆಬಂಧಿ ಬಾಲರಿಗೆ ಆಮ್ಲಜನಕ ಕೊರತೆ


Team Udayavani, Jul 7, 2018, 2:15 PM IST

guhebandhi.jpg

ಬ್ಯಾಂಕಾಕ್‌: ಥಾಯ್ಲೆಂಡ್‌ನ‌ ಗುಹೆಯಲ್ಲಿ ಸಿಲುಕಿಕೊಂಡ ಫ‌ುಟ್‌ಬಾಲ್‌ ತಂಡದ 12 ಬಾಲಕರು ಮತ್ತು ಕೋಚ್‌ರನ್ನು ಶೀಘ್ರವೇ ರಕ್ಷಿಸಬೇಕಾದ ಅನಿವಾರ್ಯತೆ ಈಗ ಉಂಟಾಗಿದೆ. ಗುಹೆಯಲ್ಲಿ ಆಮ್ಲಜನಕ ಭಾರಿ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಆತಂಕಕಾರಿಮಟ್ಟ ತಲುಪಿದೆ.

ಆರಂಭದಲ್ಲಿ ನೀರಿನ ಮಟ್ಟ ಇಳಿಯುವವರೆಗೆ, ಅಂದರೆ ಮೂರ್‍ನಾಲ್ಕು ತಿಂಗಳವರೆಗೆ ಅವರನ್ನು ಅಲ್ಲೇ ಇಡುವ ಬಗ್ಗೆ ಥಾಯ್ಲೆಂಡ್‌ ಅಧಿಕಾರಿಗಳು ಯೋಚಿಸಿದ್ದರು. ಆದರೆ ಇದೀಗ, ಆಮ್ಲಜನಕ ಅಪಾಯಕಾರಿ ಮಟ್ಟ ತಲುಪಿದ್ದು, ರಕ್ಷಣಾ ಯೋಜನೆಯ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.

ಮುಳುಗು ತಜ್ಞ ಸಾವು: ಗುಹೆಯಲ್ಲಿ ಸಿಲುಕಿಕೊಂಡವರಿಗೆ ಆಮ್ಲಜನಕ ಸಿಲಿಂಡರ್‌ ತಲುಪಿಸಿ ವಾಪಸಾಗುತ್ತಿರುವಾಗ ಆಮ್ಲಜನಕ ಕೊರತೆಯಿಂದಾಗಿ ನೌಕಾಪಡೆ ಸೀಲ್‌ನ ಮಾಜಿ ಮುಳುಗುತಜ್ಞ ಸಮನ್‌ ಕುನನ್‌ ಸಾವನ್ನಪ್ಪಿದ್ದಾರೆ. ವಾಪಸ್‌ ಬರುವಾಗ ಸಮನ್‌ ಬಳಿ ಸಾಕಷ್ಟು ಪ್ರಮಾಣದ ಆಮ್ಲಜನಕ ಇರಲಿಲ್ಲ ಎಂದು ಹೇಳಲಾಗಿದೆ.

ಜೊತೆಗಿದ್ದ ಮುಳುಗು ತಜ್ಞ ಇವರನ್ನು ರಕ್ಷಿಸಲು ಪ್ರಯತ್ನಿಸಿದರಾದರೂ ಫ‌ಲ ನೀಡಲಿಲ್ಲ. ಈ ಘಟನೆಯಿಂದಾಗಿ ಬಾಲಕರನ್ನು ಸುರಕ್ಷಿತವಾಗಿ ವಾಪಸ್‌ ಕರೆತರುವ ಸಾಧ್ಯತೆಯ ಬಗ್ಗೆ ಆತಂಕ ಮೂಡಿದೆ. ನೌಕಾಪಡೆ ಸೀಲ್‌ನ ಮುಖ್ಯಸ್ಥ ಅಫಾಕೋರ್ನ್ ಯೂ ಕಾಂಗ್‌ಕೇವ್‌ ಹೇಳುವಂತೆ, ಗುಹೆಯಲ್ಲಿ ಆಮ್ಲಜನಕವು ಶೇ.15ರ ಮಟ್ಟಕ್ಕೆ ಕುಸಿದಿದ್ದು, ಇದರಿಂದಾಗಿ ಹೈಪಾಕ್ಸಿಯಾದಂತಹ ರೋಗ ಕಾಣಿಸಿಕೊಳ್ಳಬಹುದಾಗಿದೆ.

ಕೇಬಲ್‌ ಸಂಪರ್ಕಕ್ಕೆ ಪ್ರಯತ್ನ: ಈ ಬಾಲಕರು ತಮ್ಮ ಕುಟುಂಬದವರೊಂದಿಗೆ ಮಾತನಾಡಲು ಮತ್ತು ಹೊರಜಗತ್ತಿಗೆ ಸಂಪರ್ಕ ಸಾಧಿಸಲು ಸಾಧ್ಯವಾಗುವುದಕ್ಕಾಗಿ ಒಎಫ್ಸಿ ಕೇಬಲ್‌ ಸಂಪರ್ಕಿಸಲೂ ತಜ್ಞರು ಪ್ರಯತ್ನ ನಡೆಸಿದ್ದಾರೆ. ಇದರ ಜೊತೆಗೆ ಕೇಬಲ್‌ ಮೂಲಕ ಆಕ್ಸಿಜನ್‌ ಪೂರೈಸುವ ವ್ಯವಸ್ಥೆಯನ್ನೂ ಮಾಡಲಾಗುತ್ತಿದೆ.

ಮತ್ತೆ ಮಳೆ ಭೀತಿ: ಶನಿವಾರ ಹಾಗೂ ಭಾನುವಾರ ಮತ್ತೆ ಭಾರಿ ಮಳೆ ಸುರಿಯುವ ಭೀತಿಯಿದ್ದು, ನೀರಿನ ಮಟ್ಟ ಗುಹೆಯಲ್ಲಿ ಏರುವ ಸಾಧ್ಯತೆಯಿದೆ. ಸದ್ಯ ಸೇನೆಯು ಗುಹೆಯಲ್ಲಿನ ನೀರನ್ನು ಹೊರಹಾಕುತ್ತಿದೆ. ಆದರೆ ನೀರಿನ ಮಟ್ಟವನ್ನು ಗಮನಾರ್ಹ ಪ್ರಮಾಣದಲ್ಲಿ ಕಡಿಮೆ ಮಾಡಲು ಸಾಧ್ಯವಾಗಿಲ್ಲ.

ರಕ್ಷಣೆ ಸಾಧ್ಯತೆಯೇನು?: ಸಿಲುಕಿಕೊಂಡಿರುವ ಕೆಲವು ಬಾಲಕರಿಗೆ ಈಜಲೂ ತಿಳಿದಿಲ್ಲ. ಅಲ್ಲದೆ ಅವರಿಗೆ ಈಜುವ ಸಲಕರಣೆಗಳನ್ನು ಧರಿಸಲು ಮತ್ತು ಅದನ್ನು ಬಳಸಿ ಈಜಲು ಹೇಳಿಕೊಟ್ಟು ಹೊರಗೆ ಕರೆತರುವುದು ಅತ್ಯಂತ ಕಷ್ಟಕರವಾಗಿದೆ ಮತ್ತು ಇದು ಅವರ ಸಾವು ಬದುಕಿನ ಪ್ರಶ್ನೆಯೂ ಆಗಲಿದೆ. ಈ ಮಧ್ಯೆಯೇ ಗುಹೆಗೆ ಸಮೀಪದ ಪರ್ವತ ಪ್ರದೇಶಗಳಿಂದ ಇರಬಹುದಾದ ಗುಹೆ ಸಂಪರ್ಕದ ಬಗ್ಗೆಯೂ ಹುಡುಕಾಟ ನಡೆಸಲಾಗುತ್ತಿದೆ. ಈವರೆಗೆ ಇದು ಫ‌ಲ ನೀಡಿಲ್ಲ.

ಸಿಲುಕಿಕೊಂಡಿದ್ದು ಹೇಗೆ?: ಥಾಯ್ಲೆಂಡ್‌ನ‌ 10 ಕಿ.ಮೀ ಉದ್ದದ ಸುರಂಗಕ್ಕೆ ಪ್ರವಾಸಕ್ಕಾಗಿ ಕೋಚ್‌ ಜೊತೆಗೆ ತೆರಳಿದ್ದ 11 ರಿಂದ 13 ವರ್ಷದೊಳಗಿನ ಬಾಲಕರು, ಮಳೆಯಿಂದಾಗಿ ನೀರಿನ ಮಟ್ಟ ಏರಿಕೆಯಾಗಿ, ಪ್ರವೇಶದ್ವಾರ ಮುಚ್ಚಿದ್ದರಿಂದ ಹೊರಬರಲಾಗದಂತಾಗಿತ್ತು. ಪ್ರವೇಶದ್ವಾರದಿಂದ 4 ಕಿ.ಮೀ ದೂರದಲ್ಲಿರುವ ಒಂದು ಎತ್ತರದ ಪೊಟರೆಯಲ್ಲಿ ಆಸರೆ ಪಡೆದಿದ್ದರು.

10 ದಿನಗಳ ನಂತರ ಇವರನ್ನು ಬ್ರಿಟಿಷ್‌ ಮುಳುಗುತಜ್ಞರು ಕಂಡು ಹಿಡಿದಿದ್ದು, ಅಂದಿನಿಂದಲೂ ಇವರಿಗೆ ಆಹಾರ ಹಾಗೂ ಇತರ ಅಗತ್ಯ ಸಾಮಗ್ರಿಗಳನ್ನು ಮುಳುಗು ತಜ್ಞರು ಒದಗಿಸುತ್ತಿದ್ದಾರೆ. 12 ಬಾಲಕರ ಪೈಕಿ ಕೆಲವರಿಗೆ ಈಜಲೂ ಬರದ್ದರಿಂದ ಇವರನ್ನು ರಕ್ಷಿಸುವುದು ಕಷ್ಟಸಾಧ್ಯವಾಗಿದೆ. ವಿವಿಧ ದೇಶಗಳ ಮುಳುಗು ತಜ್ಞರು ಸಹಾಯಕ್ಕೆ ಧಾವಿಸಿದ್ದರಾದರೂ, ಈ ಗುಹೆಯ ಪ್ರವೇಶ ದ್ವಾರವನ್ನು ತಲುಪಲು ಮುಳುಗು ತಜ್ಞರಿಗೆ ಕನಿಷ್ಠ ಆರು ಗಂಟೆಗಳವರೆಗೆ ಈಜಬೇಕಾಗುತ್ತದೆ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Time AI 100: ಎಐ 2024ರ 100 ಪ್ರಭಾವಿಗಳ ಪಟ್ಟಿಯಲ್ಲಿ ವೈಷ್ಣವ್‌, ನಿಲೇಕಣಿ

Time AI 100: ಎಐ 2024ರ 100 ಪ್ರಭಾವಿಗಳ ಪಟ್ಟಿಯಲ್ಲಿ ವೈಷ್ಣವ್‌, ನಿಲೇಕಣಿ

US Poll: ಯಾರು ಶ್ವೇತಭವನ ಪ್ರವೇಶಿಸಲಿದ್ದಾರೆ? ಚುನಾವಣ ನಾಸ್ಟ್ರೋಡಮಸ್‌ ಭವಿಷ್ಯದಲ್ಲೇನಿದೆ…

US Poll: ಯಾರು ಶ್ವೇತಭವನ ಪ್ರವೇಶಿಸಲಿದ್ದಾರೆ? ಚುನಾವಣ ನಾಸ್ಟ್ರೋಡಮಸ್‌ ಭವಿಷ್ಯದಲ್ಲೇನಿದೆ…

Covid test

China; ಮಾನವರಿಗೆ ಅಪಾಯಕಾರಿ 39 ವೈರಸ್‌ ಪತ್ತೆ

joe-bidden

Biden-Modi ದೂರವಾಣಿ ಮಾತುಕತೆ: ಬಾಂಗ್ಲಾ ಬಗ್ಗೆ ಕಳವಳ

canada

Canada; ಬೆಂಬಲ ಹಿಂಪಡೆದ ಎನ್‌ಡಿಪಿ: ಜಸ್ಟಿನ್‌ ಸರಕಾರಕ್ಕೆ ಸಂಕಷ್ಟ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.